ಕಾವೇರಿ ವಿಚಾರ ಹಗುರವಾಗಿ ತೆಗೆದುಕೊಂಡ ಸ‌ರ್ಕಾರ, ಸಮಸ್ಯೆ ಮತ್ತಷ್ಟು ಹೆಚ್ಚಳ: ಬೊಮ್ಮಾಯಿ

Date:

Advertisements
  • ಸಚಿವರ ಹೇಳಿಕೆ ಸಿಡಬ್ಲುಆರ್‌ಸಿ ಮೇಲೆ ಪರಿಣಾಮ ಬೀರುವುದಿಲ್ಲವೇ?
  • ಸಿಡಬ್ಲುಎಂಎ, ಸಿಡಬ್ಲುಆರ್‌ಸಿ ಆದೇಶ ವೈಜ್ಞಾನಿಕವಾಗಿಲ್ಲ: ಬೊಮ್ಮಾಯಿ

ಕಾವೇರಿ ನದಿ ನೀರಿನ ಹಂಚಿಕೆ ವಿಷಯ ಸಿಡಬ್ಲುಆರ್‌ಸಿಯಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಆರ್‌ಎಸ್‌ಗೆ 10 ಸಾವಿರ ಕ್ಯೂಸೆಕ್ಸ್ ಒಳ ಹರಿವು ಇದೆ ಎಂದು ಹೇಳುವ ಉದ್ದೇಶವೇನಿತ್ತು. ಜಲಸಂಪನ್ಮೂಲ ಸಚಿವರ ಹೇಳಿಕೆಯಿಂದ ಸಿಡಬ್ಲುಆರ್‌ಸಿ ಮೇಲೆ ಪರಿಣಾಮ ಬೀರುವುದಿಲ್ಲವೇ? ಇವರ ಈ ರೀತಿಯ ಹೇಳಿಕೆಯಿಂದಲೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಸಿಡಬ್ಲುಆರ್‌ಸಿ ಮತ್ತೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಹೇಳಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಏನೇ ಆದೇಶ ಬಂದರೂ ಕೂಡ ರಾಜ್ಯ ಸರ್ಕಾರ ಅದನ್ನು ಒಪ್ಪಬಾರದು. ತಕ್ಷಣ ಸುಪ್ರೀಂ ಕೋರ್ಟ್‌ಗೆ ಐಎ ಹಾಕಬೇಕು” ಎಂದರು.

“ಸಿಡಬ್ಲುಎಂಎ, ಸಿಡಬ್ಲುಆರ್‌ಸಿ ಆದೇಶ ವೈಜ್ಞಾನಿಕವಾಗಿಲ್ಲ. ಅವರು ವಸ್ತುಸ್ಥಿತಿ ಅರಿತು ಆದೇಶ ಮಾಡಬೇಕು. ಅದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯದ ನಾಯಕತ್ವ ಸರಿಯಾದ ಲೀಡ್ ತೆಗೆದುಕೊಳ್ಳಬೇಕು. ಇವರು ಹಗುರವಾಗಿ ತೆಗೆದುಕೊಂಡಿರುವುದರಿಂದ ಸಮಸ್ಯೆ ಹೆಚ್ಚಾಗುತ್ತಿದೆ. ನಾವೇ ಐಎ ಹಾಕಿದರೆ ನಮ್ಮ ಪರಿಸ್ಥಿತಿ, ಅವರ ಪರಿಸ್ಥಿತಿ ಏನಿದೆ ಅಂತ ಹೇಳಲು ಹೆಚ್ಚು ಅವಕಾಶ ಇರುತ್ತದೆ” ಎಂದು ಹೇಳಿದರು.

Advertisements

ಬೀದಿಗಿಳಿದು ಹೋರಾಟ

“ರಾಜ್ಯ ಸರ್ಕಾರದ ಗಮನ ಸೆಳೆಯಲು ಬಿಜೆಪಿ ಸೇರಿದಂತೆ ರೈತರು ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಆಚರಣೆ ಮಾಡಿದ್ದೇವೆ. ಆದರೆ, ಈ ಸರ್ಕಾರ ಕೇಳುವ ಸ್ಥಿತಿಯಲ್ಲಿ ಇಲ್ಲ. ಜನರ ಆಕ್ರೋಶ ಸುಪ್ರೀಂ ಕೋರ್ಟ್‌ಗೆ ತಲುಪಿಸಲು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ. ಸರ್ಕಾರ ಕಡಿಮೆ ನೀರು ಹರಿಸುವಂತೆ ಮಾಡಿಸಿದ್ದೇವೆ ಎನ್ನಲು‌ ಇದೇನು ಬಟ್ಟೆ ವ್ಯಾಪಾರವೇ? ಇದು ಕಾವೇರಿ ನೀರಿನ ಸಮಸ್ಯೆ, ಇದು ಗಂಭೀರವಾದ ವಿಚಾರ” ಎಂದರು.

ರಾಜ್ಯದ ಪರ ವಾದ ಮಾಡುತ್ತಿರುವ ವಕೀಲರನ್ನು ಬದಲಾಯಿಸುವ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ವಕೀಲರ ತಂಡ ಬದಲಾವಣೆ ಮಾಡುವ ವಿಚಾರ ಸರ್ಕಾರಕ್ಕೆ ಬಿಟ್ಟದ್ದು, ಅವರ ನಡುವೆ ಏನು ಮಾತುಕತೆಯಾಗಿದೆಯೋ ಗೊತ್ತಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಪ್ರತಿಧ್ವನಿಸುತ್ತಿರುವ ಕಾವೇರಿ ಮನವಿ, ಇನ್ನಾದರೂ ಪ್ರಧಾನಿ ಮಧ್ಯ ಪ್ರವೇಶಿಸಲಿ: ಸಿದ್ದರಾಮಯ್ಯ

ರೈತರು ರಾಜಕಾರಣ ಮಾಡುತ್ತಾರಾ?

ಪ್ರತಿಪಕ್ಷಗಳು ರಾಜಕಾರಣ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ರೈತ ಸಂಘದವರು. ಕನ್ನಡ ಸಂಘದವರು ರಾಜಕಾರಣ ಮಾಡುತ್ತಾರಾ? ನಿಮ್ಮ ಒಕ್ಕೂಟದ ಸ್ನೇಹಿತರ ಹಿತ ಕಾಯುವುದನ್ನು ಬಿಟ್ಟು ರಾಜ್ಯದ ಹಿತ ಕಾಯಿರಿ. ಇವರು ತಮಿಳುನಾಡಿಗೆ ನೀರು ಬಿಟ್ಟು ಈಗ ಪ್ರಧಾನಿ ಮಧ್ಯಸ್ಥಿಕೆ ಕೇಳಿದರೆ ಅದನ್ನು ಹೇಗೆ ಮಾಡಲು ಸಾಧ್ಯವಿದೆ‌. ತಮಿಳುನಾಡು ಇಂಡಿಯಾದಲ್ಲಿದೆ‌. ಕಾಂಗ್ರೆಸ್ ಮಿತ್ರ ಪಕ್ಷವಾಗಿದೆ. ಸೋನಿಯಾ ಗಾಂಧಿ, ಖರ್ಗೆ ಅವರನ್ನು ಕರೆಯಿಸಿ ಮಾತನಾಡಿಸಲಿ. ರಾಜ್ಯ ಸರ್ಕಾರ ತಮಿಳುನಾಡು ಸರ್ಕಾರವನ್ನು ಮಾತುಕತೆಗೆ ಒಪ್ಪಿಸಲಿ” ಎಂದರು.

ಮದ್ಯದ ದರ ಹೆಚ್ಚಳ; ಆದಾಯ ಕಡಿಮೆ

“ರಾಜ್ಯ ಸರ್ಕಾರ ಮದ್ಯದ ಮೇಲೆ ತೆರಿಗೆ ಹೆಚ್ಚಳ ಮಾಡಿದ್ದರಿಂದ ಅಬಕಾರಿ ಆದಾಯ ಕಡಿಮೆಯಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಮದ್ಯದ ದರ ಹೆಚ್ಚಳವಾಗಿದೆ. ಹೀಗಾಗಿ ಗೋವಾ ಹಾಗೂ ಮಹಾರಾಷ್ಟ್ರದಿಂದ ಅಕ್ರಮ ಮದ್ಯ ಸರಬರಾಜಾಗುತ್ತಿದೆ” ಎಂದು ಕಿಡಿ ಕಾರಿದರು.

“ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯ ಮಾರಾಟ ಮಾಡಲು ಹೊರಟಿದ್ದು ದುರದೃಷ್ಟಕರ. ಇವರು ಮದ್ಯದ ಬೆಲೆ ಹೆಚ್ಚಳ ಮಾಡಿದ್ದರಿಂದ ಆದಾಯ ಕಡಿಮೆಯಾಗಿದೆ. ಇವರು ಗೃಹಲಕ್ಷ್ಮಿಗೆ ನೀಡಿದ ಹಣವನ್ನು ವಾಪಸ್ ಪಡೆಯಲು ಈ ಮಾರ್ಗ ಅನುಸರಿಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯ ಹದಗೆಡಿಸುವ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ತಕ್ಷಣ ಈ ತೀರ್ಮಾನ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X