- ಕಾಂಗ್ರೆಸ್ನ ಐದು ಗ್ಯಾರಂಟಿಗಳ ಬಗ್ಗೆ ಗೊಂದಲವಿಲ್ಲ
- ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಹೊಸ ಸಮಿತಿ ರಚನೆ
ನಕಲಿ ದಾಖಲೆ ಸಲ್ಲಿಸಿ ಬೆಂಗಳೂರು ಸುತ್ತಮುತ್ತ ಭೂಮಿ ಕಬಳಿಸಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಹಿರಿಯ ಅಧಿಕಾರಿಗಳು ಇಲ್ಲವೇ ನಿವೃತ್ತ ನ್ಯಾಯಾಧೀಶರ ಮೂಲಕ ಮರು ಪರಿಶೀಲನೆ ನಡೆಸಲು ಸೂಚಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಸುತ್ತಮುತ್ತ ಬೊಗಸ್ ದಾಖಲೆ ಸಲ್ಲಿಸಿ ಕಬಳಿಸಿರುವ ಬಗ್ಗೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಭೂಮಿ ನೀಡಿರುವ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮರು ಪರಿಶೀಲನೆ ನಡೆಯಲಿದೆ. ಅದರಲ್ಲಿ ತಪ್ಪುಗಳು ಕಂಡು ಬಂದರೆ ಮತ್ತಷ್ಟು ಗಮನ ಹರಿಸಲು ನಿರ್ದೇಶಿಸಲಾಗಿದೆ.
ರೀಜಿನಲ್ ಕಮಿಷನರ್ ಅಥವಾ ನಿವೃತ್ತ ನ್ಯಾಯಾಧೀಶರ ಮೂಲಕ ಮರು ಪರಿಶೀಲನೆ ನಡೆಸಿ ವರದಿ ಪಡೆದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಲಹಂಕ ತಾಲೂಕಿನಲ್ಲೆ ಆರೇಳು ಪ್ರಕರಣ ನನ್ನ ಗಮನಕ್ಕೆ ಬಂದಿವೆ. ಅವುಗಳ ಬಗ್ಗೆಯೂ ಮರುಪರಿಶೀಲನೆ ನಡೆಯಲಿದೆ ಎಂದು ಹೇಳಿದರು.
ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಗೊಂದಲವಿಲ್ಲ
ಐದು ಗ್ಯಾರಂಟಿಗಳ ಕುರಿತು ಅಧಿಕಾರಿಗಳಿಂದ ಯಾವುದೇ ಗೊಂದಲ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಹೇಗೆ ಜಾರಿಗೊಳಿಸಬೇಕು ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಯಾವ ಅಧಿಕಾರಿಗಳೂ ಹಣಕಾಸಿನ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿಲ್ಲ. ಹಣಕಾಸಿನ ವಿಚಾರವಾಗಿ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಆಯ್ಕೆಗಳನ್ನು ಕೊಡುತ್ತಾರೆ. ಅದರಲ್ಲಿ ಯಾವುದು ಸೂಕ್ತ ಎಂಬ ಬಗ್ಗೆ ಸಚಿವ ಸಂಪುಟ ತೀರ್ಮಾನ ಮಾಡಲಿದೆ ಎಂದರು.
ಗ್ಯಾರಂಟಿಗಳನ್ನು ಜಾರಿ ಮಾಡುವ ಬಗ್ಗೆ ನಮ್ಮ ನಿರ್ಧಾರ ಇದೆ. ಜಾರಿ ವೇಳೆ ಕೆಲವು ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಯುವ ನಿಧಿ ಯೋಜನೆ ಅಡಿ ಪದವೀಧರರ ಮಾಹಿತಿ ಪಡೆಯಬೇಕಾಗುತ್ತದೆ. ಪದವಿ ಪ್ರಮಾಣ ಪತ್ರ ಸರಿ ಇದೆಯಾ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಜೆಟ್ ವಿಮಾನ ಪತನ; ಇಬ್ಬರು ಪೈಲಟ್ಗಳು ಪಾರು
ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಹೊಸ ಸಮಿತಿ
ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿಗೆ ನೇಮಿಸಿದ್ದ ಸಮಿತಿ ವಜಾಗೊಂಡಿದೆ. ಮುಂದಿನ ಒಂದು ತಿಂಗಳಿನಲ್ಲಿ ಹೊಸ ಸಮಿತಿ ರಚನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಮಲೆನಾಡು, ಕರಾವಳಿ ಭಾಗದಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯ ಜಮೀನಿನ ಬಗ್ಗೆ ಸಾಕಷ್ಟು ಗೊಂದಲ ಇದೆ. ಅರಣ್ಯ ಇಲಾಖೆಯವರ ಜೊತೆ ಚರ್ಚೆ ಮಾಡಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ ಮಾಡಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಸುತ್ತಮುತ್ತಲಿನ ನೆಲದಲ್ಲಿ ವಸತಿ ಬಡಾವಣೆ, ಕಯ್ಗಾರಿಕೆ ಮುಂತಾದ ಬಡಾವಣೆಗಳನ್ನು ಕಾಸಗಿಯವರ ನೆಲವನ್ನು ತನ್ನ ತೆಕ್ಕೆಗೆ ಪಡೆದು ಮಾಡಬೇಕು. ಕಾಸಗಿಯವರ ಅಟ್ಟಹಾಸ ಮಟ್ಟಹಾಕಬೇಕು.
ಇನ್ನು ಮುಂದೆ ಬೆಂಗಳೂರಿನಲ್ಲಿ ಬಡಾವಣೆಮಾಡಿ ಬಿಡಿ ನಿವೇಶನಗಳನ್ನು ಹಂಚುವುದನ್ನು ನಿಲ್ಲಿಸಬೇಕು. ದೊಡ್ಡ ನಿವೇಶನಗಳನ್ನು ಮಾಡಿ ಅಲ್ಲಿ ಅಪಾರ್ಟ್ಮೆಂಟ್ಗಳನ್ನು ಆಳ್ವಿಕೆ/ಕಾಸಗಿಯವರು ಕಟ್ಟಲಿ. ನೆಲವೂ ಉಳಿಯುತ್ತದೆ.ಕುಡಿಯುವ ನೀರು ಮತ್ತಿತರ ಮೂಲಸವಲತ್ತುಗಳನ್ನು ಕಡಿಮೆವೆಚ್ಚದಲ್ಲಿ ಒದಗಿಸಬಹುದು.