ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ‘ಗ್ರೀನ್ ಸಿಗ್ನಲ್’

Date:

  • ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 2016 ನಂತರ ಇದೇ ಮೊದಲ ಬಾರಿಗೆ ನೇಮಕಾತಿ
  • ಒಟ್ಟು 8 ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ

ಸಾರಿಗೆ ಸಂಸ್ಥೆಗಳಲ್ಲಿ‌ ಕಳೆದ ಎಂಟು ವರುಷಗಳಿಂದ ಅಂದರೆ 2016ರಲ್ಲಿನ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 2016ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13,669 ಖಾಲಿ ಹುದ್ದೆಗಳಿದ್ದವು.

- Advertisement -

ಈ ಬಗ್ಗೆ 13000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿತ್ತು. ಅದರಂತೆ ಮೊದಲನೇ ಹಂತದಲ್ಲಿ 6500 ಚಾಲನಾ ಸಿಬ್ಬಂದಿಗಳಿಗೆ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೆಎಸ್‌ಆರ್‌ಟಿಸಿಯಲ್ಲಿ ಡ್ರೈವರ್ ಕಮ್ ಕಂಡಕ್ಟರ್-2000, ತಾಂತ್ರಿಕ ಸಿಬ್ಬಂದಿ-300, ಎನ್‌ಡಬ್ಲ್ಯೂಕೆಆರ್‌ಟಿಸಿ ಡ್ರೈವರ್ ಕಮ್ ಕಂಡಕ್ಟರ್-2000, ಬಿಎಂಟಿಸಿ ಕಂಡಕ್ಟರ್ 2500 ಹಾಗೂ ಕೆಕೆಆರ್‌ಟಿಸಿಯಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ‌ ಪ್ರಕ್ರಿಯೆ ‌ಪ್ರಾರಂಭವಾಗಿದೆ.

ಈ ಸಂಬಂಧ ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024ರ ಕೊನೆಯಲ್ಲಿ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಯಾಗಲಿದೆ. ಕೆಕೆಆರ್‌ಟಿಸಿಯಲ್ಲಿ 300 ಕಂಡಕ್ಟರ್‌ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ. ಒಟ್ಟಾರೆ 8719 ಚಾಲನಾ‌ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ.

ಶಕ್ತಿ ಯೋಜನೆಗೆ 5,675 ಹೊಸ ಬಸ್‌ ಖರೀದಿ

ಶಕ್ತಿ ಯೋಜನೆಗೆ ರಾಜ್ಯಾದ್ಯಂತ ನಿರೀಕ್ಷೆ ಮೀರಿ ಸ್ಪಂದನೆ ಹಾಗೂ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಹೊಸದಾಗಿ 5,675 ಹೊಸ ಬಸ್‌ ಖರೀದಿಗೆ ಸೂಚನೆ ನೀಡುವ ಮೂಲಕ ಪ್ರಯಾಣಿಕರಿಗೆ ಇನ್ನಷ್ಟು ಸೌಕರ್ಯ ಕಲ್ಪಿಸಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...