ಗೃಹ ಲಕ್ಷ್ಮಿ | ಚಾಮುಂಡೇಶ್ವರಿಗೆ ಪ್ರತಿ ತಿಂಗಳು 2000 ರೂ. ಅರ್ಪಿಸಲು ದಿನೇಶ್ ಗೂಳಿಗೌಡ ಮನವಿ

Date:

Advertisements
  • ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ದಿನೇಶ್‌ ಗೂಳಿಗೌಡ ಭೇಟಿ ಮಾಡಿ ಮನವಿ
  • ‘ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ’

ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂಪಾಯಿಯನ್ನು ಇನ್ನು ಮುಂದೆ ಪ್ರತಿ ತಿಂಗಳು ಬಿಡುಗಡೆ ಮಾಡುವ  ಮೊದಲಿಗೆ ಮೈಸೂರಿನ ಚಾಮುಂಡೇಶ್ವರಿ ತಾಯಿಯ ಖಾತೆಗೆ ಮೊದಲು ಎರಡು ಸಾವಿರ ಅರ್ಪಿಸಿ, ನಂತರ ಫಲಾನುಭವಿಗಳಿಗೆ ಹಣ ಹಂಚಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ಶುಕ್ರವಾರ ದಿನೇಶ್‌ ಗೂಳಿಗೌಡ ಭೇಟಿ ಮಾಡಿ, ಈ ಸಂಬಂಧ ಈ ಹಿಂದೆ ಡಿಸಿಎಂ ಡಿ ಕೆ ಶಿವಕುಮಾರ್‌ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರವನ್ನು ಮನವಿ ರೂಪದಲ್ಲಿ ಸಲ್ಲಿಸಿದರು.

ದಿನೇಶ್‌ ಗೂಳಿಗೌಡ ಮಾಡಿದ್ದ ಮನವಿಗೆ ಸ್ಪಂದಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಸೂಕ್ತ ಕ್ರಮವಹಿಸುವಂತೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಸೂಚಿಸಿದ್ದರು. ಈ ವೇಳೆ ಶಾಸಕ ದಿನೇಶ್‌ ಗೂಳಿಗೌಡ ಅವರು ಸಹ ಭೇಟಿ ಮಾಡಿ ಮನವಿ ಮಾಡಿದ್ದಾರೆ.

Advertisements

ಯೋಜನೆ ಜಾರಿಗೂ ಮುನ್ನ ಹರಕೆ ತೀರಿಸಲು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿ ಹಾಗೂ ಮಹಿಳಾ ಮತ್ತು ಕುಟುಂಬ ಕಲ್ಯಾಣ ಸಚಿವರು ದೇಗುಲಕ್ಕೆ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಮಾತ್ರವಲ್ಲ ಗೃಹ ಲಕ್ಷ್ಮಿಯರಿಗೆ ನೀಡುವ 2 ಸಾವಿರ ರೂ.ಗಳನ್ನು ದೇವಿಗೆ ಸಲ್ಲಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಪರಿ ನರಮೇಧದ ನಂತರವೂ ಮೇಲೇಳದೇಕೆ ನೆತ್ತರದಾಹಿಗಳ ತಕ್ಕಡಿ?

ಈಗ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ. ಆ ಹಣದಿಂದ ಸಾಕಷ್ಟು ಬಡ ಕುಟುಂಬಗಳ ಜೀವನ ಮಟ್ಟ ಸುಧಾರಣೆಗೊಂಡಿದೆ. ಅಲ್ಲದೆ, ನಮ್ಮ ಸರ್ಕಾರದ ಹಾಗೂ ತಮ್ಮಗಳ ಬಗ್ಗೆ ಶುಭ ಹಾರೈಕೆಯನ್ನು ಮಾಡುತ್ತಲೇ ಇದ್ದಾರೆ ಎಂದು ಗೂಳಿಗೌಡ ಮನವಿಯಲ್ಲಿ ತಿಳಿಸಿದ್ದಾರೆ.

“ಈಗ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ನಿಖರವಾಗಿ ತಲಾ 2 ಸಾವಿರ ರೂ. ಹಣ ಜಮಾ ಆಗುತ್ತಿರುವುದು ಖುಷಿಯ ವಿಚಾರವಾಗಿದೆ. ಅದೇ ರೀತಿ ಪ್ರತಿ ತಿಂಗಳ ಕಂತನ್ನು ಯಜಮಾನಿಯರಿಗೆ ಪಾವತಿಸುವ ಮೊದಲು ನಾಡದೇವಿ ಚಾಮುಂಡೇಶ್ವರಿಯ ಸನ್ನಧಿಗೂ ಸಲ್ಲಿಸಬೇಕು. ಆ ಮೂಲಕ ಮೊದಲ ಹಣ ನಾಡದೇವತೆಗೆ ಸಲ್ಲಿಕೆಯಾಗಿ ಬಳಿಕ ಉಳಿದವರಿಗೆ ಪಾವತಿಯಾಗುವಂತೆ ವ್ಯವಸ್ಥೆ ಮಾಡಬೇಕು” ಎಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X