ಬೆಳಗಾವಿ | ಏಪ್ರಿಲ್‌ನಿಂದ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ಸವದತ್ತಿಯಲ್ಲಿ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ಗುಂಡೂರಾವ್

- Advertisement -

ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಭಾನುವಾರ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಸಚಿವರು ಮಾತನಾಡುತ್ತಿದ್ದರು.

ಆರೋಗ್ಯ ಸೇವೆಗಳನ್ನ ಬಡ ವರ್ಗದ ಜನರ ಬಳಿಗೆ ತರುವಲ್ಲಿ ಉಚಿತ ಆರೋಗ್ಯ ತಪಾಸಣಾ ಮೇಳಗಳು ಯಶಸ್ವಿಯಾಗುತ್ತಿವೆ. ದೊಡ್ಡಮಟ್ಟದ ಆರೋಗ್ಯ ಮೇಳಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಪಡಿಸಲು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ. ಕೊಳ್ಳೆಗಾಲ, ಮಾನ್ವಿ ಬಳಿಕ ಇದೀಗ ಸವದತ್ತಿಯಲ್ಲೂ ಆರೋಗ್ಯ ಮೇಳ ಯಶಸ್ವಿಯಾಗಿದೆ ಎಂದರು.‌

ಇದೇ ವೇಳೆ ಸವದತ್ತಿ ತಾಲೂಕು ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 46 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಬೆಳಗಾವಿ ಜಿಲ್ಲೆಯ ರಾಮದುರ್ಗಾ ಹಾಗೂ ಕಿತ್ತೂರು ತಾಲೂಕು ಅಸ್ಪತ್ರೆಗಳಿಗೂ ಸುಸಜ್ಜಿತವಾದ ನೂತನ ಕಟ್ಟಡ ನಿರ್ಮಿಸಲಾಗುವುದು. ಅಲ್ಲದೇ, ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕ ಜಿಲ್ಲಾಸ್ಪತ್ರೆಯನ್ನ ಗೋಕಾಕ್‌ನಲ್ಲಿ ನಿರ್ಮಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನ ನೀಡುವುದರ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಈ ಬಾರಿಯ ಬಜೆಟ್‌ನಲ್ಲಿ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಿದ್ದಾರೆ. ಅಥಣಿಗೆ 50 ಹಾಸಿಗೆಯ ತಾಯಿ ಮಕ್ಕಳ‌ ಆಸ್ಪತ್ರೆ ನೀಡಿದ್ದೇವೆ. ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸುಧಾರಣೆ ತರುವತ್ತ ಸತತವಾಗಿ ಪ್ರಯತ್ನಿಸಲಾಗುತ್ತಿದೆ. ಬಡ ಜನರ ಪರ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.‌

ಹಳ್ಳಿಗಾಡಿನ ಜನರು ಬಡವರು ತಮ್ಮ ಆರೋಗ್ಯ ತಪಾಸಣೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು.. ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳ ವಿಚಾರದಲ್ಲಿ ನಮ್ಮ ಜನರು ಎಚ್ಚರಿಕೆ ವಹಿಸುವ ಅಗತ್ಯತೆ ಇದೆ. ಆರಂಭಿಕ ಹಂತದಲ್ಲಿ ಈ ಕಾಯಿಲೆಗಳನ್ನ ಪತ್ತೆ ಹಚ್ಚಿದರೆ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಅಲ್ಲದೇ, ಮುಂದೆ ಈ ಕಾಯಿಲೆಗಳಿಂದ ಎದುರಾಗುವ ಆಪತ್ತುಗಳಿಂದ ಬಡ ಜನರನ್ನ ಪಾರು ಮಾಡಬಹುದಾಗಿದೆ. ಹೀಗಾಗಿಯೇ ನಮ್ಮ ಕಾಂಗ್ರೆಸ್ ಸರ್ಕಾರ ಗೃಹ ಆರೋಗ್ಯ ಯೋಜನೆ ಜಾರಿಗೆ ತಂದಿದೆ. 30 ವರ್ಷ ಮೇಲ್ಪಟ್ಟ ರಾಜ್ಯದ ಎಲ್ಲ ಜನರನ್ನು ತಪಾಸಣೆಗೆ ಒಳಪಡಿಸಿ, ಉಚಿತವಾಗಿ ಔಷಧಿಗಳನ್ನ ಜನರ ಬಳಿಗೆ ಒದಗಿಸುವ ಯೋಜನೆ ಇದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈಗಾಗಲೇ ಗೃಹ ಆರೋಗ್ಯ ಯೋಜನೆಯನ್ನ ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ. ನಮ್ಮ ಜನರು ಯೋಜನೆಯ ಲಾಭ ಪಡೆದುಕೊಳ್ಳಬೇಕು. ಜನರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿಗಳು ಭೇಟಿ ನೀಡಿ, ರಕ್ತದೊತ್ತಡ, ಮಧುಮೇಹ ಕ್ಯಾನ್ಸರ್ ಸೇರಿದಂತೆ ಮಾನಸಿಕ ಕಾಯಿಲೆಗಳ ಬಗ್ಗೆ ತಪಾಸಣೆ ನಡೆಸಲಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಗೃಹ ಆರೋಗ್ಯ ಯೋಜನೆ ದೊಡ್ಡ ಬದಲಾವಣೆಯನ್ನ ತರುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

"ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ...

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...