ಗೃಹಲಕ್ಷ್ಮಿ ಯೋಜನೆ | ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರತಾಪ್ ಸಿಂಹ

Date:

ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯದ ಕುರಿತು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿಗೆ ಮಾಸಿಕ 2,000 ರೂ. ನೀಡುವುದಾಗಿ ಘೋಷಿಸಿದೆ. ಪ್ರತಿ ಕುಟುಂಬದಲ್ಲೂ ಮನೆಯ ಯಜಮಾನಿ ಯಾರು ಎಂಬುದನ್ನು ಗುರುತಿಸಿ, ಅವರಿಗೆ ಈ ಯೋಜನೆಯ ಫಲಾನುಭವ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಈ ಯೋಜನೆಯ ಕುರಿತು ವ್ಯಂಗ್ಯವಾಡಿರುವ ಪ್ರತಾಪ್‌ ಸಿಂಹ, ಮುಸ್ಲಿಂ ಸಮುದಾಯ ಕುರಿತು ಹಗುರವಾಗಿ ಮಾತನಾಡಿದ್ದಾರೆ.

“ಗೃಹಲಕ್ಷ್ಮಿ ಯೋಜನೆಗೆ ಯಾರು ಫಲಾನುಭವಿ ಎಂದು ತೀರ್ಮಾನ ಮಾಡಬೇಕಂತೆ. ಯಾರು ತೀರ್ಮಾನ ಮಾಡ್ತಾರೆ. ಅತ್ತೆ-ಸೊಸೆ ತೀರ್ಮಾನ ಮಾಡಲು ಸಾಧ್ಯವಾ? ಸಾಬರ ಮನೆಗಳಲ್ಲಿ ಎರಡು-ಮೂರು ಹೆಂಡತಿಯರು ಇದ್ದಾರೆ. ಅವರಲ್ಲಿ ಮನೆ ಯಜಮಾನಿ ಯಾರಾಗುತ್ತಾರೆ? ಮನೆಯೊಳಗೆ ಬೆಂಕಿ ಹೊತ್ತಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಎಲ್ಲ ಭರವಸೆಗಳನ್ನು ಪೂರೈಸಲು ಕೇಂದ್ರ ಬಜೆಟ್ ಹಣ ತಂದರೂ ಸಾಕಾಗುವುದಿಲ್ಲ” ಎಂದು ಪ್ರತಾಪ್ ಸಿಂಹ ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Satyavanne heliddare vengavagi yak anusutte nijavaglu satyad maatugalu Gulamarige Tappu anusuttade Congress mani vadiua kelasa madade mattyav desha uddar maaduva kelasaganna madatide , nacheke yagbeku Congress davarige free Kodtira Desh luti madtira, 1 Rupai janarige kottre 9 Jabaga hakotira yidu vand nimma janmana, thu nimma janmkittu,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು...

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...