ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರುತ್ತೇನೆ; ಗುಬ್ಬಿ ಶ್ರೀನಿವಾಸ್

Date:


-‌ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ ಗುಬ್ಬಿ ಜೆಡಿ‌ಎಸ್‌ ಶಾಸಕ ಶ್ರೀನಿವಾಸ್
ಕುಮಾರಸ್ವಾಮಿಯೊಂದಿಗಿನ ಮನಸ್ತಾಪ ಪಕ್ಷ ಬಿಡಲು ಕಾರಣ ಎಂದ ಶ್ರೀನಿವಾಸ್

- Advertisement -

ಜೆಡಿಎಸ್ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿರುವ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್‌ ಶ್ರೀನಿವಾಸ್‌ ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತು ನನ್ನ ನಡುವೆ ಆದ ಮನಸ್ತಾಪವೇ ಪಕ್ಷ ಬಿಡಲು ಕಾರಣ ಎಂದು ತಿಳಿಸಿದ್ದಾರೆ.

“ನಾನು ನೋವಿನಿಂದ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ ಎಚ್‌ ಡಿ ದೇವೇಗೌಡರನ್ನ ಸೋಲಿಸಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ ಅಭ್ಯರ್ಥಿ ಘೋಷಿಸಿದರು ಇದು ನನಗೆ ನೋವು ತರಿಸಿತು. ಈ ಹಿನ್ನೆಲೆಯಲ್ಲಿ ನಾನು ಪಕ್ಷ ಬಿಡುವ ನಿರ್ಧಾರಕ್ಕೆ ಬಂದೆ” ಎಂದು ಶ್ರೀನಿವಾಸ್ ಹೇಳಿದರು.

“ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಇಂದು ರಾಜೀನಾಮೆ ಸಲ್ಲಿಸಿದ್ದೇನೆ”, ನಮ್ಮ ತಾಲೂಕಿನ ಎಲ್ಲ ಮುಖಂಡರ ಜೊತೆ ಮಾತನಾಡಿಯೇ ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದೇನೆ” ಎಂದರು.

“ಶಾಸಕನಾಗಲು ಅವಕಾಶ ನೀಡಿದ ಜೆಡಿಎಸ್ ಪಕ್ಷಕ್ಕೆ ಧನ್ಯವಾದ ಹೇಳಿದ ಶ್ರೀನಿವಾಸ್, ಕಳೆದ 20 ವರ್ಷಗಳಿಂದ ನನಗೆ ಜನತಾದಳದಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಕೊಟ್ಟ ಪಕ್ಷದ ವರಿಷ್ಟ ದೇವೇಗೌಡ, ಕುಮಾರಸ್ವಾಮಿ, ರೇವಣ್ಣನವರಿಗೆ ಕೃತಜ್ಞತೆ ಸಲ್ಲಿಸುವುದಾಗಿ” ಹೇಳಿದರು.

ಕಾಂಗ್ರೆಸ್‌ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಕೈಗಾರಿಕಾ ಸಚಿವರಾಗಿ ಶ್ರೀನಿವಾಸ್‌ ಕಾರ್ಯ ನಿರ್ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಈ ದಿನ ಎಕ್ಸ್ ಕ್ಲ್ಯೂಸಿವ್‌ | ಕೋಲಾರದಿಂದಲೇ ರಾಹುಲ್ ರಣಕಹಳೆ; ಏ.5ಕ್ಕೆ ‘ಸತ್ಯಮೇವ ಜಯತೆ’

ಕಾಂಗ್ರೆಸ್ ಸಖ್ಯ:
ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿರುವ ಗುಬ್ಬಿ ಶ್ರೀನಿವಾಸ್, ಕಳೆದ ನವೆಂಬರ್‌ನಲ್ಲೇ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದರು.

ಕಾಂಗ್ರೆಸ್ ಪಕ್ಷ ನಡೆಸಿದ ಒಕ್ಕಲಿಗ ಶಾಸಕರ ಸಭೆಯಲ್ಲೂ ಭಾಗಿಯಾಗಿದ್ದ ಅವರು, ಭಾರತ ಐಕ್ಯತಾಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ಹೆಜ್ಜೆ ಹಾಕಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಯೋಗಿಗೆ ಪ್ರಶ್ನೆ ಕೇಳಿದ್ದಕ್ಕೆ ಕೆಲಸಕ್ಕೆ ಕುತ್ತು; ಆನ್‌ಲೈನ್ ನಿಂದನೆ, ಬುಲ್ಡೋಜರ್ ಬೆದರಿಕೆ: ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಆರೋಪ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಶ್ನೆ ಕೇಳಲು...

ರಾಮಮಂದಿರದ ಬಾಣ ಖಾಲಿ: 2029ರ ಲೋಕಸಭೆಗೆ ‘ಯುಸಿಸಿ’ ಅಸ್ತ್ರಕ್ಕಾಗಿ ತಡಕಾಡುತ್ತಿರುವ ಅಮಿತ್ ಶಾ

ರಾಮಮಂದಿರದ ಭಾವನಾತ್ಮಕ ಅಲೆ ಚುನಾವಣೆಯಲ್ಲಿ ತಣಿಯುತ್ತಿದ್ದಂತೆ, 'ಮೋಶಾ' ಜೋಡಿ 2029ಕ್ಕಾಗಿ ಸಮಾನ...

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...