ಗುಜರಾತ್ | 24 ಗಂಟೆಗಳಲ್ಲಿ ನಾಲ್ಕು ದಲಿತ ದೌರ್ಜನ್ಯ ಪ್ರಕರಣ; ಇದು ಅಮೃತಕಾಲವೇ? ಎಂದ ಜಿಗ್ನೇಶ್ ಮೇವಾನಿ

Date:

Advertisements
  • ಚರಂಡಿ ಸ್ವಚ್ಛಗೊಳಿಸುವ ವೇಳೆ ಇಬ್ಬರ ಸಾವು
  • ದಲಿತ ಯುವತಿಯ ಮೇಲೆ ಅತ್ಯಚಾರ, ಕೊಲೆ

ಕಳೆದ 24 ಗಂಟೆಗಳ ಅವಧಿಯೊಳಗೆ ಗುಜರಾತ್‌ ಒಂದರಲ್ಲೇ ನಾಲ್ವರು ದಲಿತರ ಮೇಲೆ ದೌರ್ಜನ್ಯ ಎಸಗಿರುವ ಘಟನೆಗಳು ಜರುಗಿವೆ. ಈ ಕುರಿತು ಕಳವಳ ವ್ಯಕ್ತಪಡಿಸಿರುವ ಶಾಸಕ ಜಿಗ್ನೇಶ್ ಮೇವಾನಿ ಅವರು, “ಇದು ಅಮೃತಕಾಲವೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಗುಜರಾತಿನಲ್ಲಿ ಕೆಲವು ಪುಂಡರು ದಲಿತ ವ್ಯಕ್ತಿಗೆ ಥಳಿಸುತ್ತಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಜಿಗ್ನೇಶ್ ಮೇವಾನಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ‘ಅಮೃತಕಾಲ’ದ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ, “ಕಳೆದ 24 ಗಂಟೆಗಳಲ್ಲಿಯೇ ಗುಜರಾತ್ ನಾಲ್ಕು ದಲಿತ ದೌರ್ಜನ್ಯ ಪ್ರಕರಣಗಳಿಗೆ ಸಾಕ್ಷಿಯಾಗಿದೆ. ರಾಜಕೋಟ್‌ನಲ್ಲಿ ಚರಂಡಿ ಸ್ವಚ್ಛಗೊಳಿಸಲು ತೆರಳಿ ಇಬ್ಬರು ಬಲಿಯಾದರು, ಮಹಿಸಾಗರ್ ಜಿಲ್ಲೆಯ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸ್ಥಳೀಯ ಗೂಂಡಾಗಳು ದಲಿತನ ಮೇಲೆ ಹಲ್ಲೆ ನಡೆಸಿರುವ ಮತ್ತೊಂದು ವಿಡಿಯೋ ಇಲ್ಲಿದೆ” ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Advertisements

“24 ಗಂಟೆಗಳ ಅವಧಿಯಲ್ಲಿಯೇ ನಾಲ್ಕು ದಲಿತ ದೌರ್ಜನ್ಯ ಪ್ರಕರಣಗಳು ನಡೆದಿವೆ. ಇದು ಅಮೃತಕಾಲವೇ?” ಎಂದು ವ್ಯಂಗ್ಯವಾಡಿದ್ದಾರೆ.

ಚರಂಡಿ ಸ್ವಚ್ಛಗೊಳಿಸುವ ವೇಳೆ ಇಬ್ಬರ ಸಾವು

ರಾಜ್‌ಕೋಟ್‌ನ ಸಾಮಾಟ್ರ್ ಕೈಗಾರಿಕ ಪ್ರದೇಶದ ಬಳಿ ತುಂಬಾ ಆಳಕ್ಕೆ ಇರುವ ಚರಂಡಿ ಸ್ವಚ್ಛಗೊಳಿಸುವ ವೇಳೆ ಮೆಹುಲ್ ಮೆಹ್ದಾ (24) ಮತ್ತು ಅಫ್ಜಲ್ ಫುಫರ್ (24) ಎಂಬುವವರು ಉಸಿರುಗಟ್ಟಿ ಮಂಗಳವಾರ ಮೃತಪಟ್ಟಿದ್ದಾರೆ.

ಸಾಮ್ರಾಟ್ ಮುಖ್ಯ ರಸ್ತೆಯಲ್ಲಿನ ಒಳಚರಂಡಿಯನ್ನು ‘ಜೆಟ್ಟಿಂಗ್’ ಯಂತ್ರ ಮತ್ತು ಯಾಂತ್ರೀಕೃತ ‘ಕ್ರೇನ್‌’ನಿಂದ ಸ್ವಚ್ಛಗೊಳಿಸುವ ವೇಳೆ ಇಬ್ಬರು ದಲಿತ ಕಾರ್ಮಿಕರು ಮೃತರಾಗಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ಗುಜರಾತ್ ಪೊಲೀಸರು ಹೇಳಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X