ಗುಜರಾತ್ ಗಾಂಧಿನಗರ ಕ್ಷೇತ್ರ | 5 ಲಕ್ಷ ಮತಗಳ ಅಂತರದಿಂದ ಗೃಹ ಸಚಿವ ಅಮಿತ್ ಶಾ ಗೆಲುವು

Date:

Advertisements

ಗುಜರಾತ್‌ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದರೆ,  ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇನ್ನು ಹಾವು-ಏಣಿ ಆಟ ಅನುಭವಿಸುತ್ತಿದ್ದಾರೆ.

ಅಮಿತಾ ಶಾ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಸೋನಾಲ್ ಪಟೇಲ್‌ ಸ್ಪರ್ಧೆಗಿಳಿದಿದ್ದರು. ಗುಜರಾತಿನ ಗಾಂಧಿನಗರವು ರಾಜಧಾನಿ ಮಾತ್ರವಲ್ಲದೆ, ಮಹತ್ವದ ರಾಜಕೀಯ ಕೇಂದ್ರವೂ ಆಗಿದೆ. ಕಳೆದ 30 ವರ್ಷಗಳಿಂದ ಇದು ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರತಿಷ್ಠಿತ ನಾಯಕರ ಪ್ರಾತಿನಿಧ್ಯವನ್ನು ಕಂಡಿದೆ. ಅಟಲ್ ಬಿಹಾರಿ ವಾಜಪೇಯಿ, ಎಲ್‌ಕೆ ಅಡ್ವಾಣಿ ಮತ್ತು ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹವರು ಈ ಕ್ಷೇತ್ರವನ್ನು ಸಂಸತ್‌ನಲ್ಲಿ ಪ್ರತಿನಿಧಿಸಿದ್ದಾರೆ. 

ಗುಜರಾತಿನ 26ರ ಪೈಕಿ 25 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಸೂರತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ನಾಮಪತ್ರ ತಿರಸ್ಕೃತವಾದ ಹಿನ್ನೆಲೆ ಬಿಜೆಪಿಯ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗಾಂಧಿನಗರ ಲೋಕಸಭಾ ಕ್ಷೇತ್ರದ ಮೊದಲ ಸುತ್ತಿನಿಂದಲೂ ಅಮಿತ್ ಶಾ ಮುನ್ನಡೆ ಕಾಯ್ದುಕೊಂಡು ಬಂದಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಚುನಾವಣೆ ಫಲಿತಾಂಶ | ಪಂಜಾಬ್ ಮತ್ತು ಹರಿಯಾಣದಲ್ಲಿ ಬಿಜೆಪಿಗೆ ಹಿನ್ನಡೆ

ಇತ್ತ ಪೋರಬಂದರ್ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸಹ ಭಾರೀ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ 2-3 ಕ್ಷೇತ್ರಗಳನ್ನು ಮುನ್ನಡೆಯನ್ನು ಹೊಂದಿದೆ.

ವಾರಣಾಸಿಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಸಾಧಿಸಿದ್ದರು. ಆನಂತರ, ಮೋದಿ ಮುನ್ನಡೆ ಗಳಿಸಿದ್ದಾರೆ. ಈ ಹಿಂದೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಮೋದಿಗೆ ಈ ಬಾರಿ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಒಟ್ಟಾರೆ ಬಿಜೆಪಿಗೆ ಹಿನ್ನಡೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X