ತಪ್ಪು ಮಾಡಿದವರು ಕಾನೂನಿನ ಮುಂದೆ ತಲೆ ಬಾಗಲೇಬೇಕು: ಹೆಚ್‌ ಡಿ ಕುಮಾರಸ್ವಾಮಿ

Date:

Advertisements

ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದಲ್ಲಿ ಭಾನುವಾರ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಸದಸ್ಯರು ಮತ್ತು ಸಿಬ್ಬಂದಿ ಮಕ್ಕಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರದ ಚೆಕ್ ವಿತರಣೆ, ಸದಸ್ಯರ ಮರಣ ಮತ್ತು ರಾಸು ಮರಣ ಪರಿಹಾರ ಚೆಕ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕಾನೂನಿನ ಮುಂದೆ ಎಲ್ಲರೂ ಸಮಾನರು. ತಪ್ಪು ಮಾಡಿ ಎಂದು ನಾವು ಮಕ್ಕಳಿಗೆ ಹೇಳುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಬೇಕು. ಅದೇ ರೀತಿ, ತಪ್ಪು ಮಾಡಿದ ಯಾರೇ ಆದರೂ ಕಾನೂನಿನ ಎದುರು ತಲೆಬಾಗಬೇಕು’ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಹಾಸನದ ಸೆನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಸಂತ್ರಸ್ತ ಯುವಕ ಶುಕ್ರವಾರ ಡಿಜಿ ಕಛೇರಿಯಲ್ಲಿ ದೂರು ನೀಡಿದ್ದ. ಅಲ್ಲದೇ, ಹಾಸನ ಎಸ್ಪಿಗೂ ದೂರಿನ ಪ್ರತಿ ಇ-ಮೇಲ್ ಮೂಲಕ ಕಳಿಸಿದ್ದ. ಈ ದೂರನ್ನು ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದರು.

ನಿನ್ನೆ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ನೀಡಿದ ದೂರು ಆಧರಿಸಿ, ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X