ಒತ್ತೆಯಾಳಾಗಿದ್ದ ಓರ್ವ ಮಹಿಳೆ, ಇಬ್ಬರು ಮಕ್ಕಳನ್ನು ಬಿಡುಗಡೆಗೊಳಿಸಿದ ಹಮಸ್

Date:

Advertisements

ಇಸ್ರೇಲ್-ಹಮಸ್ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ‘ಹಮಸ್ ನವಜಾತ ಶಿಶುಗಳ ಶಿರಚ್ಛೇದ ಮಾಡಿದೆ’ ಎಂಬ ಸುಳ್ಳು ಸುದ್ದಿ ಹರಡಿದ ಬೆನ್ನಲ್ಲೇ, ಒತ್ತೆಯಾಳಾಗಿದ್ದ ಓರ್ವ ಮಹಿಳೆ, ಇಬ್ಬರು ಮಕ್ಕಳನ್ನು ಹಮಸ್ ಬಿಡುಗಡೆಗೊಳಿಸಿದೆ.

ಹಮಸ್‌ನ ಕಸ್ಸಾಮ್ ಬ್ರಿಗೇಡ್ ಮಹಿಳಾ ಒತ್ತೆಯಾಳು ಮತ್ತು ಇಬ್ಬರು ಮಕ್ಕಳನ್ನು ಬಿಡುಗಡೆ ಮಾಡುವ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಈ ವಿಡಿಯೋವನ್ನು ಅಲ್-ಜಝೀರಾ ಪ್ರಸಾರ ಮಾಡಿದ್ದು, ಅಪರಿಚಿತ ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಇಸ್ರೇಲ್ ಮತ್ತು ಗಾಝಾ ನಡುವಿನ ಗಡಿ ಭಾಗದಲ್ಲಿ ಹಮಸ್ ಬಿಡುಗಡೆಗೊಳಿಸಿರುವುದಾಗಿ ತಿಳಿಸಿದೆ. ಆದರೆ ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ‘ಅಲ್-ಜಝೀರಾ’ ಮಾಹಿತಿ ಹಂಚಿಕೊಂಡಿದೆ.

Advertisements

ಹಮಸ್‌ನ ಕಸ್ಸಾಮ್ ಬ್ರಿಗೇಡ್ ಬಿಡುಗಡೆಗೊಳಿಸಿರುವ ವಿಡಿಯೋವನ್ನು ದೂರದಿಂದ ಚಿತ್ರೀಕರಿಸಲಾಗಿದ್ದು, ಅಪರಿಚಿತ ಮಹಿಳೆ ಮತ್ತು ಮಕ್ಕಳನ್ನು ಹಿಂದಿನಿಂದ ತೋರಿಸಲಾಗಿದೆ. ಬಿಡುಗಡೆಗೊಂಡವರ ವಿವರಗಳನ್ನು ಹಂಚಿಕೊಂಡಿಲ್ಲ.

ಇಸ್ರೇಲ್ ಮತ್ತು ಗಾಝಾ ನಡುವಿನ ಗಡಿಯಾಗಿರುವ ಬೇಲಿಯ ಸಮೀಪವಿರುವ ತೆರೆದ ಪ್ರದೇಶದಲ್ಲಿ ಅವರನ್ನು ಬಿಟ್ಟ ನಂತರ ಹಮಸ್‌ನವರು ದೂರ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇಸ್ರೇಲ್‌ನ ಅಧಿಕಾರಿಗಳು ಇನ್ನೂ ವೀಡಿಯೊ ಕುರಿತು ಪ್ರತಿಕ್ರಿಯಿಸಿಲ್ಲ ಎಂದು ಅಲ್-ಜಝೀರಾ ಮಾಹಿತಿ ನೀಡಿದೆ. ಹಮಸ್ ನವಜಾತ ಶಿಶುಗಳ ಶಿರಚ್ಛೇದ ಮಾಡಿದೆ ಎಂದು i24 NEWS ಎಂಬ ಇಸ್ರೇಲ್‌ನ ಚಾನೆಲ್ ಸುಳ್ಳು ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಸುಳ್ಳು ಸುದ್ದಿಗೆ ಪ್ರತಿಕ್ರಿಯಿಸಿರುವ ಹಮಸ್‌ನ ರಾಜಕೀಯ ವಿಭಾಗದ ಪ್ರತಿನಿಧಿ ಈಝ್ಝತ್ ಅಲ್ ರಿಷ್ಕ್, ‘ಕೆಲವೊಂದು ಪಾಶ್ಚಿಮಾತ್ಯ ಮಾಧ್ಯಮಗಳು ಪ್ಯಾಲೆಸ್ತೀನಿಯರ ಪ್ರತಿರೋಧದವನ್ನು ಸಹಿಸಲಾಗದೆ ಇಸ್ರೇಲ್ ಪರ ಅಜೆಂಡಾ ರೂಪಿಸಲು ಸುಳ್ಳು ಮತ್ತು ಅಪಪ್ರಚಾರ ಹರಡುವುದನ್ನು ಮುಂದುವರಿಸಿದ್ದಾರೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಗಾಝಾದಲ್ಲಿ ವಿದೇಶಿ ಮಾಧ್ಯಮ ಪ್ರವೇಶ ನಿರ್ಬಂಧ ತೆರವುಗೊಳಿಸಿ: ಇಸ್ರೇಲ್‌ಗೆ 27 ದೇಶಗಳ ಒಕ್ಕೂಟ ಆಗ್ರಹ

ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಸರ್ಕಾರವು ವಿಧಿಸಿರುವ ವಿದೇಶಿ ಪತ್ರಕರ್ತರ ನಿರ್ಬಂಧವನ್ನು ತೆಗೆದುಹಾಕಿ...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Download Eedina App Android / iOS

X