ಬಿಜೆಪಿ ಹಗರಣಗಳ ತನಿಖೆ | ಸಿಬಿಐ, ಸಿಸಿಬಿಗೆ ವಹಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಪ್ರಿಯಾಂಕ್ ಖರ್ಗೆ

Date:

Advertisements

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಿಬಿಐ ಅಥವಾ ಸಿಸಿಬಿ ತನಿಖೆಗೆ ವಹಿಸುವುದು, ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಹಗರಣ, ಬಿಟ್‌ ಕಾಯಿನ್‌ ಹಗರಣ, ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಹೀಗೆ ವೈವಿಧ್ಯಮಯ ಹಗರಣಗಳು ನಡೆದಿವೆ. ಈ ಎಲ್ಲ ಹಗರಣಗಳನ್ನು ಒಂದೇ ರೀತಿಯ ಸಮಿತಿಗೆ ವಹಿಸುವುದು ಸರಿಯಾಗುವುದಿಲ್ಲ” ಎಂದರು.

“ಕೆಲವು ಹಗರಣಗಳ ತನಿಖೆಗೆ ಎಸ್‌ಐಟಿ, ಸ್ಪೆಷಲ್‌ ಟಾಸ್ಕ್‌ ಫೋರ್ಸ್‌, ಎಸಿಎಸ್‌ ಮಟ್ಟದ ಅಧಿಕಾರಿಗಳ ಸಮಿತಿ ಹೀಗೆ ಬೇರೆ ಬೇರೆ ಹಗರಣಗಳಿಗೆ ಬೇರೆ ಬೇರೆ ತನಿಖಾ ತಂಡ ರಚನೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸಲಿದ್ದಾರೆ” ಎಂದು ಹೇಳಿದರು.

Advertisements

“ಹಿಂದಿನ ಬಿಜೆಪಿ ಸರ್ಕಾರ ಬಹಳ ವಿಭಿನ್ನವಾಗಿ ಸ್ಕ್ಯಾಮ್ ಮಾಡಿದೆ. ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಕ್ಸ್‌ಪರ್ಟ್‌ ಬೇಕಾಗುತ್ತದೆ. ತಂತ್ರಜ್ಞಾನ ತಿಳಿದ ಅಧಿಕಾರಿಗಳ ಅವಶ್ಯಕತೆ ಇದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರದ ವಿರುದ್ಧ ಆರೋಪ ಮಾಡುತ್ತಿದ್ದ ನಾವೇ ಭ್ರಷ್ಟಾಚಾರ ಮಾಡಲು ಸಾಧ್ಯವೆ: ರಾಮಲಿಂಗಾರೆಡ್ಡಿ ಪ್ರಶ್ನೆ

“ಕಳೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಕೆಲವರ ಬಗ್ಗೆ ಚರ್ಚಿಸಿದ್ದರು. ಯಾವ ತಂಡ ರಚನೆ ಮಾಡಬೇಕು ಎಂಬುದು ಈಗಾಗಲೇ ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X