ರಾಜಕೀಯ ದುರುದ್ದೇಶ | ತನ್ನದೇ ಮಗಳ ಮೇಲೆ‌ ಸ್ನೇಹಿತರಿಂದ ಅತ್ಯಾಚಾರ ಮಾಡಿಸಿದ ಬಿಜೆಪಿ ನಾಯಕಿ

Date:

Advertisements

ರಾಜಕೀಯವಾಗಿ‌ ಬೆಳೆಯಬೇಕೆಂಬ ದುರುದ್ದೇಶದಿಂದ ಬಿಜೆಪಿ ನಾಯಕಿಯೊಬ್ಬರು ತನ್ನದೇ ಮಗಳ ಮೇಲೆ‌ ಅತ್ಯಾಚಾರ ಎಸಗಲು ತನ್ನ ಗೆಳೆಯ ಮತ್ತು ಆತನ ಸ್ನೇಹಿತನಿಗೆ ನಿರಂತರವಾಗಿ ಸಹಾಯ ಮಾಡಿರುವ ಅಮಾನುಷ, ಅಮಾನವೀಯ, ವಿಕೃತ ಪ್ರಕರಣ ಉತ್ತರಾಖಂಡದಲ್ಲಿ ಬೆಳಕಿಗೆ ಬಂದಿದೆ.

ಉತ್ತರಾಖಂಡದ ಹರಿದ್ವಾರದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಬಿಜೆಪಿಯ ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ಅನಾಮಿಕ ಶರ್ಮಾ ತನ್ನ ಸ್ನೇಹಿತರಿಗೆ ತನ್ನದೇ ಅಪ್ರಾಪ್ತ ಮಗಳ ಮೇಲೆ‌ ನಿರಂತರ ಅತ್ಯಾಚಾರ ಎಸಗಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅನಾಮಿಕ ಶರ್ಮ, ಆಕೆಯ ಸ್ನೇಹಿತ ಸುಮಿತ್ ಪತ್ವಾಲ್ ಹಾಗೂ ಪತ್ವಾಲ್‌ನ ಗೆಳೆಯ ಶುಭಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿಯಲ್ಲಿ ಸಕ್ರಿಯವಾಗಿರುವ ಅನಾಮಿಕ ಶರ್ಮಾ, 2024ರವೆರೆಗೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿದ್ದರು. ನಂತರ, ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತನ್ನ ಪತಿಯಿಂದ ದೂರವಾಗಿದ್ದ ಆಕೆ, ಸುಮಿತ್ ಪತ್ವಾಲ್ ಜೊತೆ ಪ್ರೇಮ, ವಿವಾಹೇತರ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ.

Advertisements

ತನ್ನ ಮಗಳನ್ನು ಆಗ್ಗಾಗ್ಗೆ ಬಲವಂತವಾಗಿ ತನ್ನೊಂದಿಗೆ ಕರೆದೊಯ್ಯುತ್ತಿದ್ದ ಅನಾಮಿಕಾ ತನ್ನ ಸ್ನೇಹಿತರು ಆಕೆಯ ಮೇಲೆ‌ ಅತ್ಯಾಚಾರ ಎಸಗಲು ತಾನೇ ವ್ಯವಸ್ಥೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಹರಿದ್ವಾರ, ಬೃಂದಾವನ ಹಾಗೂ ಆಗ್ರಾ ಸೇರಿದಂತೆ‌ ಹಲವೆಡೆ ಅನಾಮಿಕಾ ಅವರ ಸಮ್ಮಿಖದಲ್ಲೇ ಆಕೆಯ ಸ್ನೇಹಿತರು ಅತ್ಯಾಚಾರ ಎಸಗಿದ್ದಾರೆ. ಕೃತ್ಯದ ಬಗ್ಗೆ ತನ್ನ ತಂದೆಗೆ ಹೇಳದಂತೆ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.

ನಿರಂತರ ದೌರ್ಜನ್ಯವನ್ನು ಸಹಿಸಲಾಗದೆ ನೊಂದಿದ್ದ ಬಾಲಕಿ ಅಂತಿಮವಾಗಿ ತನ್ನ ತಂದೆಯ ಬಳಿ ತನ್ನ ಮೇಲಾದ ಕೃತ್ಯಗಳ ಬಗ್ಗೆ ಹೇಳಿಕೊಂಡಿದ್ದಾಳೆ. ಆಕೆಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರನ್ನೂ ಬಂಧಿಸಿದ್ದಾರೆ.

“ಬಾಲಕಿ ಮೇಲೆ‌ ಜನವರಿ ತಿಂಗಳಲ್ಲಿ ಮೊದಲ ಬಾರಿಗೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಮೇಲೆ‌ ಈವರೆಗೆ ಸುಮಾರು ಎಂಟು ಬಾರಿ ಸಾಮೂಹಿಕ ಅತ್ಯಾಚಾರ ನಡೆದಿದೆ. ತಿಂಗಳುಗಳ ಕಾಲ ನಿರಂತರ ದೌರ್ಜನ್ಯದಿಂದ ನೊಂದ ಸಂತ್ರಸ್ತೆ ತನ್ನ ತಂದೆಯ ಬಳಿ ತಾನು ಎದುರಿಸಿದ ಕ್ರೌರ್ಯದ ಕುರಿತು ಹೇಳಿಕೊಂಡಿದ್ದಾಳೆ. ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 70 (2) (ಸಾಮೂಹಿಕ ಅತ್ಯಾಚಾರ), 351 (3) (ಕ್ರಿಮಿನಲ್ ಬೆದರಿಕೆ), 3(5) (ಸಾಮಾನ್ಯ ಉದ್ದೇಶವನ್ನು ಮುಂದಿಟ್ಟುಕೊಂಡು ಹಲವಾರು ವ್ಯಕ್ತಿಗಳಿಂದ ಕ್ರಿಮಿನಲ್ ಕೃತ್ಯ) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X