ಹರಿಯಾಣ ಚುನಾವಣೆ | ಕಾಂಗ್ರೆಸ್‌ನಂತೆಯೇ ಬಿಜೆಪಿಯೂ 89 ಸ್ಥಾನಗಳಲ್ಲಿ ಸ್ಪರ್ಧೆ

Date:

Advertisements

ಹರಿಯಾಣದಲ್ಲಿ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಚುನಾವಣೆಗೆ ಎಲ್ಲ ಪಕ್ಷಗಳೂ ಭಾರೀ ತಯಾರಿ ನಡೆಸುತ್ತಿವೆ. ಆ ರಾಜ್ಯದಲ್ಲಿನ 90 ಸ್ಥಾನಗಳ ಪೈಕಿ ಕಾಂಗ್ರೆಸ್‌ನಂತೆಯೇ ಬಿಜೆಪಿ ಕೂಡ 89 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದ ಒಂದು ಕ್ಷೇತ್ರ ಸಿರ್ಸಾದಲ್ಲಿ ಲೋಕಿತ್ ಪಕ್ಷದ (ಎಚ್‌ಎಲ್‌ಪಿ) ಮುಖ್ಯಸ್ಥ ಗೋಪಾಲ್ ಕಾಂಡಾ ಅವರನ್ನು ಬಿಜೆಪಿ ಬೆಂಬಲಿಸಿದೆ ಎಂದು ತಳಿದುಬಂದಿದೆ. ಸಿರ್ಸಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರೋಹ್ತಾಶ್ ಜಂಗ್ರಾ ಅವರು ತಮ್ಮ ಉಮೇದುವಾರಿಕೆಯನ್ನು ಸೋಮವಾರ ಹಿಂಪಡೆದುಕೊಂಡಿದ್ದಾರೆ.

ಗೋಪಾಲ್ ಕಾಂಡಾ ಅವರು ಈ ಹಿಂದೆ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಇದೀಗ, ಅವರು ಮತ್ತೆ ಅಭ್ಯರ್ಥಿಯಾಗಿ ಕಣಕ್ಕಿಳಿದ ಬೆನ್ನಲ್ಲೇ ಸಿರ್ಸಾದಲ್ಲಿ ಬಿಜೆಪಿ ತುರ್ತು ಸಭೆ ಕರೆದಿತ್ತು. ಸಭೆಯಲ್ಲಿ ಜಾಂಗ್ರಾ ಸ್ಪರ್ಧೆಯಿಂದ ಹೊರಗುಳಿಯಬೇಕೆಂದು ನಿರ್ಧರಿಸಲಾಗಿತ್ತು. “ನಾನು ನನ್ನ ನಾಮಪತ್ರವನ್ನು ಹಿಂಪಡೆದಿದ್ದೇನೆ. ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾವು ಕಾಂಗ್ರೆಸ್ ಮುಕ್ತ ಹರಿಯಾಣವನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಜಾಂಗ್ರಾ ಹೇಳಿದ್ದಾರೆ.

ಕಾಂಡಾ ಪರವಾಗಿ ಹಿಂದೆ ಸರಿದಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಜಾಂಗ್ರಾ, “ಗೋಪಾಲ್ ಕಾಂಡಾ ಐದು ವರ್ಷಗಳಿಂದ ನಮ್ಮನ್ನು (ಬಿಜೆಪಿ) ಬೆಂಬಲಿಸಿದ್ದಾರೆ. ಸಿರ್ಸಾದ ಅಭಿವೃದ್ಧಿಗಾಗಿ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದಿದ್ದಾರೆ.

Advertisements

ಇನ್ನು, ಆರ್‌ಎಸ್‌ಎಸ್‌ ಜೊತೆ ತಮ್ಮ ಕುಟುಂಬದ ದೀರ್ಘಕಾಲದ ಸಂಪರ್ಕವನ್ನು ನೆನಪಿಸಿಕೊಂಡಿರುವ ಕಾಂಡ, “ತಮ್ಮ ತಂದೆ ಮುರಳಿ ಧರ್ ಕಾಂಡ ಅವರು 1952ರಲ್ಲಿ ಜನಸಂಘದ ಅಭ್ಯರ್ಥಿಯಾಗಿ ಡಬ್ವಾಲಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ತಮ್ಮ ತಾಯಿಯೂ ಬಿಜೆಪಿ ಬೆಂಬಲಿಗರಾಗಿದ್ದರು” ಎಂದು ಹೇಳಿದ್ದಾರೆ.

ಸಿರ್ಸಾ ರಾಜಕೀಯ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ, ಮಾಜಿ ಸಂಸದ ಅಶೋಕ್ ತನ್ವಾರ್, “ನಮಗೆ ಒಂದೇ ಗುರಿಯಿದೆ. ಅದು ಮೂರನೇ ಬಾರಿಗೆ ಬಿಜೆಪಿ ಸರ್ಕಾರ ರಚಿಸುವುದು ಮತ್ತು ಕಾಂಗ್ರೆಸ್ ಮುಕ್ತ ಭಾರತ ನಿರ್ಮಿಸುವುದು” ಎಂದು ಹೇಳಿದ್ದಾರೆ.

ಈಗಾಗಲೇ, ಎಚ್‌ಎಲ್‌ಪಿಗೆ ಐಎನ್‌ಎಲ್‌ಡಿ ಮತ್ತು ಬಿಎಸ್‌ಪಿ ಬೆಂಬಲ ನೀಡಿವೆ. ಇದೀಗ, ಬಿಜೆಪಿಯೂ ಬೆಂಬಲ ನೀಡುವುದಾಗಿ ಘೋಷಿಸಿದೆ. ಹೀಗಾಗಿ, ಕಾಂಡಾ ಅವರಿಗೆ ಪ್ರಮುಖ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್‌ ಅಭ್ಯರ್ಥಿ ಗೋಕುಲ್ ಸೇಟಿಯಾ ಕಣದಲ್ಲಿದ್ದಾರೆ.

ಈ ವರದಿ ಓದಿದ್ದೀರಾ?: ಸಂಘಪರಿವಾರದವರಿಂದ ‘ಗಣೇಶ ಮೂರ್ತಿ’ಯನ್ನು ರಕ್ಷಿಸಿದ ಪೊಲೀಸರು: ಸುಳ್ಳು ಸುದ್ದಿ ಹರಡಿದ ಬಿಜೆಪಿ

ಹರಿಯಾಣದಲ್ಲಿ ಬಿಜೆಪಿಯಲ್ಲಿ ಅಧಿಕಾರದಿಂದ ಹೊರಗಿಡಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್‌, 90 ಕ್ಷೇತ್ರಗಳ ಪೈಕಿ 89 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್‌ ಮತ್ತು ಎಎಪಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿಯೂ ಕ್ಷೇತ್ರ ಹಂಚಿಕೆಗಾಗಿ ಮಾತುಕತೆ ನಡೆಸಿದ್ದವು. ಅದರೆ, ಮಾತುಕತೆ ಮುರಿದುಬಿದ್ದಿದೆ. ಸದ್ಯ, ಸಿಪಿಐ(ಎಂ) ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌ 89 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಭಿವಾಸಿ ಕ್ಷೇತ್ರವನ್ನು ಸಿಪಿಐ(ಎಂ)ಗೆ ಬಿಟ್ಟುಕೊಟ್ಟಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X