ಹರಿಯಾಣ ಚುನಾವಣೆ | ಐಎನ್‌ಎಲ್‌ಡಿ ಜೊತೆ ಮಾಯಾವತಿ ಅವರ ಬಿಎಸ್‌ಪಿ ಮೈತ್ರಿ

Date:

Advertisements

ಹರಿಯಾಣದಲ್ಲಿ ಈ ವರ್ಷ ಅಕ್ಟೋಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ.

ಐಎನ್‌ಎಲ್‌ಡಿ ಪ್ರಧಾನ ಕಾರ್ಯದರ್ಶಿ ಅಭಯ್ ಚೌತಾಲಾ ಮತ್ತು ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಆಕಾಶ್ ಆನಂದ್ ಅವರು ಗುರುವಾರ ಸಭೆ ನಡೆಸಿದ್ದು, ಮೈತ್ರಿ ಮಾಡಿಕೊಂಡಿದ್ದಾರೆ. ಬಳಿಕ ಮಾತನಾಡಿದ ಇಬ್ಬರೂ, “ಇತರ ಸಮಾನ ಮನಸ್ಕ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳೊಂದಿಗೆ ಕೈಜೋಡಿಸುವ ಆಯ್ಕೆಗಳನ್ನು ಮೈತ್ರಿಕೂಟ ಎದುರು ನೋಡುತ್ತಿದೆ” ಎಂದು ಹೇಳಿದ್ದಾರೆ.

ಮಾಜಿ ಉಪಪ್ರಧಾನಿ ಮತ್ತು ರಾಜ್ಯದ ಹೆಚ್ಚಿನ ಪ್ರಾಬಲ್ಯವಿರುವ ಜಾಟ್ ಸಮುದಾಯದ ನಾಯಕ ಚೌಧರಿ ದೇವಿ ಲಾಲ್ ಅವರ ಮೊಮ್ಮಗ ಅಭಯ್ ಚೌತಾಲಾ ಅವರನ್ನು ಮೈತ್ರಿಕೂಟದ ಮುಖ್ಯಮಂತ್ರಿ ಮುಖವೆಂದು ಘೋಷಿಸಿದ್ದಾರೆ.

Advertisements

ರಾಜ್ಯದ ಒಟ್ಟು 127 ಸ್ಥಾನಗಳ ಪೈಕಿ ಐಎನ್‌ಎಲ್‌ಡಿ 53ರಲ್ಲಿ ಸ್ಪರ್ಧಿಸಲಿದೆ. ಬಿಎಸ್‌ಪಿ ಉಳಿದ 37 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ನೇಮಕಾತಿಯನ್ನು ತೊಡೆದುಹಾಕುವುದಾಗಿ ಎರಡೂ ಪಕ್ಷಗಳು ಭರವಸೆ ನೀಡಿವೆ. ಶಾಶ್ವತ ಕೆಲಸ, ಪ್ರತಿ ಮನೆಯ ವಿದ್ಯುತ್ ಬಿಲ್ಅನ್ನು 500 ರೂ.ಗೆ ಇಳಿಸಲು ಸೋಲಾರ್ ಪ್ಲಾಂಟ್‌ಗಳ ಸ್ಥಾಪನೆ, ಉಚಿತ ನೀರು, ತಿಂಗಳಿಗೆ 7,500 ರೂ. ವೃದ್ಧಾಪ್ಯ ವೇತನ, ಪ್ರತಿ ಮನೆಯಲ್ಲಿ ಒಬ್ಬರಿಗೆ 21,000 ರೂ. ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಿಸಿವೆ.

ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ 300 ಚದುರ ಅಡಿ ನಿವೇಶನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ, 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಇತ್ಯಾದಿ ಭರವಸೆಗಳನ್ನು ನೀಡಿವೆ.

ಐಎನ್‌ಎಲ್‌ಡಿಅಲ್ಲಿ ಉಂಟಾದ ಆಂತರಿಕ ಕಲಹದಿಂದಾಗಿ, ಐದು ಬಾರಿ ಮುಖ್ಯಮಂತ್ರಿ ಓಪಿ ಚೌತಾಲಾ ಅವರ ಮೊಮ್ಮಗ ದುಶ್ಯಂತ್ ಅವರು 2018ರಲ್ಲಿ ಪಕ್ಷವನ್ನು ಒಡೆದರು. ಹೊಸದಾಗಿ, ಜನನಾಯಕ್ ಜನತಾ ಪಕ್ಷವನ್ನು (ಜೆಜೆಪಿ) ರಚಿಸಿದರು. 2019ರಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಜೆಜೆಪಿ ಬೆಂಬಲ ನೀಡಿತ್ತು. ಆದರೆ, ಈ ವರ್ಷದ ಮಾರ್ಚ್‌ನಲ್ಲಿ ಅದು ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X