ಹರಿಯಾಣ | ಕುಸ್ತಿ ಸಂಘದಿಂದ ದೆಹಲಿ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೂವರ ಅಮಾನತು

Date:

Advertisements
  • ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಸಿಂಗ್‌ ಕಾರ್ಯದರ್ಶಿಗಳ ಅಮಾನತು
  • ಬ್ರಿಜ್‌ ಭೂಷಣ್‌ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು

ಹರಿಯಾಣ ಹವ್ಯಾಸಿ ಕುಸ್ತಿ ಸಂಘ (ಎಚ್‌ಎಡಬ್ಲ್ಯುಎ) ತನಗೆ ಸಂಯೋಜಿತ ಮೂರು ಜಿಲ್ಲಾ ಘಟಕಗಳ ಕಾರ್ಯದರ್ಶಿಗಳನ್ನು ಮಂಗಳವಾರ (ಮೇ 9) ಅಮಾನತು ಮಾಡಿದೆ.

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿಯಲ್ಲಿ ಮಹಿಳೆ ಹಾಗೂ ಪುರುಷ ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕುಸ್ತಿ ಸಂಘ ಹೇಳಿದೆ.

ಜಜ್ಜರ್‌ನ ವೀರೇಂದ್ರ ಸಿಂಗ್ ದಲಾಲ್, ಹಿಸಾರ್‌ನ ಸಂಜಯ್ ಸಿಂಗ್ ಮಲಿಕ್ ಮತ್ತು ಮೇವಾತ್‌ನ ಜೈ ಭಗವಾನ್ ರನ್ನು ಅಮಾನತುಗೊಳಿಸಿ ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಸಿಂಗ್ ಪತ್ರವೊಂದನ್ನು ಹೊರಡಿಸಿದ್ದಾರೆ.

Advertisements

ದೆಹಲಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ರಾಜ್ಯದ ಕುಸ್ತಿ ಸಂಘದ ಕಾರ್ಯದರ್ಶಿಗಳ ಭಾಗವಹಿಸುವಿಕೆಯನ್ನು ಅನೈತಿಕ ಎಂದು ರೋಹ್ತಾಶ್‌ ಸಿಂಗ್‌ ಕರೆದಿದ್ದಾರೆ.

ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಸಿಂಗ್‌ ಮಾತನಾಡಿ, “ಮೂವರು ಕಾರ್ಯದರ್ಶಿಗಳು ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇದು ಸಂಪೂರ್ಣ ಅನೈತಿಕ ಹಾಗೂ ಡಬ್ಲ್ಯುಎಫ್‌ಐ ಮತ್ತು ಎಚ್‌ಎಡಬ್ಲ್ಯುಎ ಸಂಸ್ಥೆಗಳ ಉದ್ದೇಶ, ನಿಯಮ ಹಾಗೂ ನಿಬಂಧನೆಗಳಿಗೆ ವಿರುದ್ಧವಾದುದು” ಎಂದು ಹೇಳಿದರು.

ರೋಹ್ತಾಶ್‌ ಅವರ ನಿರ್ಧಾರ ರಾಜ್ಯ ಕುಸ್ತಿ ಸಂಘ ಹಾಗೂ ಭಾರತದ ಕುಸ್ತಿ ಒಕ್ಕೂಟದ ನಡುವೆ ಭಿನ್ನಾಭಿಪ್ರಾಯ ಉಂಟಾಗಿರುವುದು ಬಹಿರಂಗವಾಗಿದೆ. ಕುಸ್ತಿ ಸಂಘದ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಡಬ್ಲ್ಯುಎಫ್‌ಐನ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಹೇಳಿದ್ದಾರೆ.

ಹರಿಯಾಣ ಕುಸ್ತಿ ಸಂಘದ ಅಧ್ಯಕ್ಷ ರೋಹ್ತಾಶ್‌ ಅವರು ಅಧಿಕಾರಿಗಳನ್ನು ಅಮಾನತು ಮಾಡುವ ಅಧಿಕಾರ ಹೊಂದಿಲ್ಲ ಎಂದು ರಾಕೇಶ್‌ ತಿಳಿಸಿದ್ದಾರೆ.

ಬ್ರಿಜ್ ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಏಪ್ರಿಲ್‌ 23 ರಿಂದ ಮಹಿಳೆ ಹಾಗೂ ಪುರುಷ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೋಟ್‌ ದುರಂತಗಳಲ್ಲಿ 200ಕ್ಕೂ ಅಧಿಕ ಮಂದಿ ಬಲಿ; ಪಾಠ ಕಲಿಯದ ಕೇರಳ!

ಬ್ರಿಜ್‌ ಭೂಷಣ್‌ ಅವರು ಒಬ್ಬ ಅಪ್ರಾಪ್ತ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ದೆಹಲಿ ಪೊಲೀಸರು ಏಪ್ರಿಲ್‌ 28 ರಂದು ಬ್ರಿಜ್‌ ಭೂಷಣ್‌ ಅವರ ವಿರುದ್ಧ ಎರಡು ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X