ಬಿಜೆಪಿಯವರು ಜನರ ಮನೆ ಬೆಳಗುವ ಒಂದಾದರೂ ಕೆಲಸ ಮಾಡಿದ್ದಾರಾ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

Date:

Advertisements

ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಹೈಕೋರ್ಟ್ ಬಿಡುಗಡೆಗೊಳಿಸಿರುವ ವಿಚಾರ ಕಾಂಗ್ರೆಸ್‌ಗೆ ಮುಖಭಂಗ ಪ್ರಶ್ನೆಯೇ ಬರಲ್ಲ. ಅದು ಜಾಮೀನು‌ ಸಹಿತ ಪ್ರಕರಣವಾಗಿದೆ. ಎಫ್ ಎಸ್ ಎಲ್ ವರದಿ ಬರಲಿ ಆಮೇಲೆ ನೋಡೋಣ. ಕಾನೂನು ಕೇವಲ ಬಿಜೆಪಿಯವರಿಗೆ ಮಾತ್ರ ಗೊತ್ತಿಲ್ಲ ನಮಗೂ ಗೊತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, “ಪರಿಷತ್‌ನಲ್ಲಿ ಒಬ್ಬ ಮಹಿಳೆಗೆ ಅವಮಾನಕರವಾಗಿ ಮಾತನಾಡಿದ್ದಾರೆ. ಅವರ ಬೆನ್ನಿಗೆ ಹಲವಾರು ಶಾಸಕರು ನಿಂತಿದ್ದಾರೆ. ಹಾಗೆ ಮಾತನಾಡಿದ್ದು ತಪ್ಪು ಅಂತ ಕೂಡಾ ಹೇಳುತ್ತಿಲ್ಲ ಅಂದರೆ‌ ಎಷ್ಟು ದುರಹಂಕಾರ ಇರಬೇಕು” ಎಂದರು.

“ಘಟನೆಯನ್ನು ಬಿಜೆಪಿಯ ಯಾರಾದರೂ ಒಬ್ಬರು ಖಂಡಿಸಿದ್ದಾರೆಯೇ? ಈ ಪ್ರಕರಣದಿಂದ ಎಲ್ಲರೂ ಒಗ್ಗಾಟ್ಟಾಗಿದ್ದೇವೆ ಎನ್ನುತ್ತಾರೆ. ಅಂದರೆ ಎಲ್ಲರೂ ಹಾಳು ಬುದ್ದಿಯವರೇ, ಒಬ್ಬರೂ ಖಂಡಿಸಿಲ್ಲ ಎಂದರೆ ಎಲ್ಲರೂ ದುಶ್ಯಾಸನರು ಅಲ್ವಾ? ಜನರ ಮನೆ ಬೆಳಗುವ ಒಂದಾದರೂ ಕೆಲಸ ಅವರು ಮಾಡಿದ್ದಾರೆಯೇ? ಬರೀ‌ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

Advertisements

“ಬಿಜೆಪಿ‌ ಅಧ್ಯಕ್ಷ ವಿಜಯೇಂದ್ರ ಕೂಡಾ ಘಟನೆ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಒಂದು ವೇಳೆ ರವಿ ಹಾಗೇ ಹೇಳಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎನ್ನಲಿಲ್ಲ. ಬದಲಿಗೆ ಬಿಜೆಪಿಯವರು ಬಳೆ ತೊಟ್ಟಿಲ್ಲ ಎಂದಿದ್ದಾರೆ. ಬಳೆ ತೊಟ್ಟವರಿಗೆ ಬಿಜೆಪಿಯವರು ಅವಮಾನ ಮಾಡಿದ್ದಾರಲ್ಲ? ಅದಕ್ಕೆ ವಿಜಯೇಂದ್ರ ಏನು ಹೇಳುತ್ತಾರೆ. ಪೂಜ್ಯ ಅಪ್ಪಾಜಿಯವರ ಮೇಲೆಯೇ ಪೋಕ್ಸೋ ಅಡಿಯಲ್ಲಿ ಕೇಸು ದಾಖಲಾಗಿರುವಾಗ ಅವರು ಏನು ಹೇಳುತ್ತಾರೆ? ಮುನಿರತ್ನ ವಿಚಾರದಲ್ಲಿ ಒಂದು‌ ನೋಟಿಸು ಕೂಡಾ ನೀಡಲಿಲ್ಲವಲ್ಲ” ಎಂದು ವ್ಯಂಗ್ಯವಾಡಿದರು.

ರಾತ್ರಿ‌ ಇಡೀ ರವಿ ಅವರನ್ನು ಸುತ್ತಿಸಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, “ಆರೋಪಿ ಅರೆಸ್ಟ್ ಆಗಿದ್ದಾನೆ. ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ನಾಯಕರಿಗೇನು ಕೆಲಸ ? ಅವರು ಅಲ್ಲೇಕೆ ಹೋಗಿದ್ದಾರೆ ? ಆರೋಪಿ ಅರೆಸ್ಟ್ ಆದ ಕೂಡಲೇ ಅವರ ಬಾಡಿ ಸರ್ಜ್ ಮಾಡುವುದು ಒಂದು ಪ್ರಕ್ರಿಯೆ ಅದರ ಪ್ರಕಾರ ಪೊಲೀಸರು ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X