ಹಾಸನ ಲೋಕಸಭೆ | ಎಚ್‌ ಡಿ ದೇವೇಗೌಡ, ಪುಟ್ಟಸ್ವಾಮಿಗೌಡರ ಮೊಮ್ಮಕ್ಕಳ ನಡುವೆ ಪೈಪೋಟಿ

Date:

Advertisements

ಹಾಸನ ಲೋಕಸಭೆ ಚುಣಾವಣೆ ಹತ್ತಿರ ಬರುತ್ತಿದ್ದಂತೆ ಹಾಸನ ಕ್ಷೇತ್ರದಲ್ಲಿ ಪೈಪೋಟಿ ಜೋರಾಗಿಯೇ ನಡೆದಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಸಚಿವ ದಿ.ಪುಟ್ಟಸ್ವಾಮಿಗೌಡರ ಕುಟುಂಬದ ತಲೆಮಾರಿನ ನಡುವೆ ಲೋಕಸಭಾ ಚುನಾವಣೆ ಸಜ್ಜಾಗಿದೆ.

ಮಾಜಿ ಸಚಿವ ದಿ.ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಕಾಂಗ್ರೆಸ್ ಪಕ್ಷದಿಂದ ಹಾಸನ ಲೋಕಸಭೆ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ‌. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಬಹುತೇಕ ಟಿಕೆಟ್ ನಿಶ್ಚಿತವಾಗಿದ್ದು, ಮಾಜಿ ಪ್ರಧಾನಿ ಹಾಗೂ ಮಾಜಿ ಸಚಿವರ ಮೊಮ್ಮಕ್ಕಳ ನಡುವೆ ಹಾಸನ ಲೋಕಸಭೆ ಚುನಾವಣೆ ಮುಖಾಮುಖಿಗಳಾಗುವುದು ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ.

ಹಾಸನ ಜಿಲ್ಲಾ ಪಂಚಾಯತಿ ಸದಸ್ಯ ಆಗಿದ್ದ ಶ್ರೇಯಸ್ ಪಾಟೀಲ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಚ್. ಡಿ ರೇವಣ್ಣ ಅವರ ವಿರುದ್ಧ 3500 ಮತಗಳ ಅಂತರದಲ್ಲಿ ಸೋತಿದ್ದರು. ಅವಾಗಿನಿಂದಲೇ ಶ್ರೇಯಸ್ ಪಟೇಲ್ ಹಾಸನ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಎಂದು ಕ್ಷೇತ್ರದಲ್ಲಿ ಬಿಂಬಿಸಲಾಗಿತ್ತು.

Advertisements

ಎಚ್ ಡಿ ದೇವೆಗೌಡ ಹಾಗೂ ಮಾಜಿ ಸಚಿವ ಪುಟ್ಟಸ್ವಾಮಿಗೌಡರ ನಡುವಿನ ಸ್ನೇಹ ಮುರಿದುಕೊಂಡ ಮೇಲೆ ಪ್ರತಿ ಚುಣಾವಣೆಯಲ್ಲೂ ಪ್ರತಿ ಸ್ಪರ್ಧಿಗಳಾಗಿ ಕಣಕ್ಕಿಳಿಯುತ್ತಿದ್ದರು. ಮತ್ತೆ ಈಗ ಎರಡು ಕುಟುಂಬಗಳ ಮಧ್ಯೆ ಹಾಸನ ಲೋಕಸಭೆ ಚುನಾವಣೆ ಸಾಕ್ಷಿಯಾಗಲಿದೆ.

2013 ಹಾಗೂ 2018ರ ವಿಧಾನಸಭೆ ಚುಣಾವಣೆಯಲ್ಲಿ ಎಚ್ ಡಿ ರೇವಣ್ಣ ಅವರ ವಿರುದ್ದ ದಿ. ಪುಟ್ಟಸ್ವಾಮಿಗೌಡರ ಸೊಸೆ ಅನುಪಮಾ ಸ್ಪರ್ಧೆ ಮಾಡಿ ಸೋಲನ್ನು ಅನುಭವಿಸಿದ್ದರು. 2023ರ ವಿಧಾನ ಸಭೆ ಚುಣಾವಣೆಯಲ್ಲಿ ಎಚ್ ಡಿ ರೇವಣ್ಣ ಅವರ ವಿರುದ್ದ ಶ್ರೇಯಸ್ ಪಟೇಲ್ ಅವರು 3500 ಮತಗಳ ಅಂತರದಲ್ಲಿ ಸೋತಿದ್ದರು. ಈಗ ಮತ್ತೆ 2024 ಹಾಸನ ಲೋಕಸಭೆ ಚುಣಾವಣೆಗೆ ಶ್ರೇಯಸ್ ಪಟೇಲ್ ಕಾಂಗ್ರೆಸ್ ಅಭ್ಯರ್ಥಿ ಘೋಷನೆಯಾಗಿದ್ದರಿಂದ, ಇದೀಗ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ದ ಕಣಕ್ಕೆ ಇಳಿಯಲಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಪ್ರಜ್ವಲ್ ರೇವಣ್ಣರನ್ನು ಸೋಲಿಸಲು ಪ್ರಭಲ ಸ್ಪರ್ಧಿ ಶ್ರೇಯಸ್ ಪಟೇಲ್ ಅವರನ್ನೆ ಕಣ್ಣಕ್ಕೆ ಇಳಿಬೇಕೆಂದು ಕಾಂಗ್ರೆಸ್ ಲೆಕ್ಕಾಚಾರ ಮೊದಲಿನಿಂದಲೂ ಇತ್ತು. ಅದೇ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದ್ದಾರೆ.

ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಶ್ರೇಯಸ್ ಪಟೇಲ್ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ನಾಯಕರು, ಮುಖಂಡರರನ್ನು ಭೇಟಿ ಮಾಡಿ ಪ್ರಚಾರದ ಕುರಿತು ಮಾತುಕತೆ ನಡೆಸಿದ್ದಾರೆ.

ಹಾಸನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದರು. ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದಲ್ಲಿ ಎರಡು ಪಕ್ಷಗಳ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ನಾಯಕರು ಯಾವುದೇ ಮಾತ್ರ ಮೈತ್ರಿಯ ಬಗ್ಗೆ ಯಾವುದೇ ಸೂಚನೆ ಬಂದಿಲ್ಲ. ಎನ್ನುತ್ತಿದ್ದು, ಬಿಜೆಪಿ ಅಭ್ಯರ್ಥಿಗೆ ಟಿಕೆಟ್ ಕೊಡಬೇಕೆಂದು ಹೇಳುತ್ತಿದ್ದಾರೆ.

ಹಾಸನ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ ನಾಗೇಂದ್ರ ಅವರು, ಜಿಲ್ಲೆಯಲ್ಲಿ ಪಕ್ಷ ಇನ್ನೂ ಬಲಿಷ್ಠವಾಗಿದೆ. ಜೆಡಿಎಸ್ ಬಿಟ್ಟು ಬಿಜೆಪಿ ಸೇರಿರುವ ಎ ಟಿ ರಾಮಸ್ವಾಮಿ ಸಮರ್ಥ ಅಭ್ಯರ್ಥಿ ಆಗಲಿದ್ದಾರೆ. ಅವರಿಗೆ ಟಿಕೆಟ್ ನೀಡದರೆ ಒಳ್ಳೆದು ಎಂದು ವರಿಷ್ಠರಿಗೂ ಹೇಳಿದ್ದೇನೆ ಎನ್ನುತ್ತಾರೆ.

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X