ದ್ವೇಷ ಭಾಷಣ: ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್‌ ದಾಖಲು

Date:

Advertisements
  • ಚುನಾವಣಾಧಿಕಾರಿ ದೂರಿನ ಅನ್ವಯ ಮುನಿರತ್ನ ವಿರುದ್ಧ ಎಫ್‌ಐಆರ್‌
  • ಆರ್‌ ಆರ್‌ ನಗರ ಕ್ಷೇತ್ರದ ಖಾತಾ ನಗರದಲ್ಲಿ ಭಾಷಣ ಮಾಡಿದ್ದ ಸಚಿವ

ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಹೇಳಿಕೆ ನೀಡಿದ್ದ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ಆರೋಪದ ಮೇರೆಗೆ ಚುನಾವಣಾಧಿಕಾರಿ ಮನೋಜ್ ಕುಮಾರ್ ದೂರು ನೀಡಿರುವ ಹಿನ್ನೆಲೆ ಆರ್ ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರ್‌ ಆರ್‌ ನಗರ ಕ್ಷೇತ್ರದ ಖಾತಾ ನಗರದಲ್ಲಿ ಈ ಹಿಂದೆ ಭಾಷಣ ಮಾಡಿದ್ದ ಮುನಿರತ್ನ ಹೊಡಿಬಡಿಯ ಮಾತನಾಡಿದ್ದರು. ಸಚಿವರ ಭಾಷಣದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಮುನಿರತ್ನ ಅವರಿಗೆ ಸಂಕಷ್ಟ ಎದುರಾಗಿದೆ.

Advertisements

“ಇಲ್ಲಿಗೆ ಯಾರೇ ಬಂದರೂ ಹೊಡೆದು ಕಳುಹಿಸಿ, ಹೆಂಗೆ ಹೊಡಿಬೇಕು ಅಂದರೆ ಅವರು ತಿರುಗಿ ನೋಡಬಾರದು ಹಂಗೆ ಹೊಡೆದು ಕಳುಹಿಸಿ. ಬಂದಿದ್ದೆಲ್ಲಾ ನಾನು ನೋಡಿಕೊಳ್ಳುತ್ತೇನೆ” ಎಂದು ಮುನಿರತ್ನ ಭಾಷಣ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈಗ ಮುಸ್ಲಿಮರ ಮೀಸಲಾತಿ ರದ್ದು… ಮುಂದಿನ ಸರದಿ ದಲಿತರದ್ದು!

ಪೊಲೀಸರ ಮುಂದೆಯೇ ಭಾಷಣ ಮಾಡಿರುವ ವಿಡಿಯೋ ತುಣುಕನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಅಲ್ಲದೇ, ಆರ್​.ಆರ್​ ನಗರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಅವರು ಕೂಡ ಪೊಲೀಸರಿಗೆ ದೂರು ನೀಡಿದ್ದರು.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸಚಿವ ಮುನಿರತ್ನ ತಮಿಳಿಗರನ್ನ, ಕನ್ನಡಿಗರ ಮೇಲೆ ಎತ್ತಿಕಟ್ಟುತ್ತಿದ್ದಾರೆ ಅಂತ ಕಾಂಗ್ರೆಸ್​ ಆರೋಪ ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X