ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳೀಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಮುಖ್ಯಮಂತ್ರಿಗಳ ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯ ಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್ಐಟಿ ರಚನೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.
“ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಮನೆಗೆ ಕಳಿಸಿರುವುದಕ್ಕೆ ಸಿಎಂ ಬಳಿ ಉತ್ತರ ಇಲ್ಲ. ಹಾಗೂ ಅವಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೇಳಿರುವುದು. ಸರ್ಕಾರ ಇಷ್ಟು ದೊಡ್ಡ ಆರೋಗ್ಯ ಇಲಾಖೆ ಇದ್ದು, ಅವಳಿಗೆ ಸೂಕ್ತ ಚಿಕಿತ್ಸೆ ಕೊಡಲು ತಯಾರಿಲ್ಲ ಎಂದರೆ, ಮತ್ತು ಆ ಜವಾಬ್ದಾರಿಯನ್ನು ತಮ್ಮ ಶಾಸಕರಿಗೆ ವಹಿಸಿರುವಂಥದ್ದು ಈ ಪ್ರಕರಣವನ್ನು ಮುಚ್ಚಿ ಹಾಕುವ ಹಾಗೂ ಆ ಹೆಣ್ಣು ಮಗಳನ್ನು ಸಂಪೂರ್ಣ ಹತೋಟಿಗೆ ತೆಗೆದುಕೊಳ್ಳುವ ತಂತ್ರ ಗೊತ್ತಾಗುತ್ತದೆ. ಆದ್ದರಿಂದ ಅವಳಿಗೆ ಚಿಕಿತ್ಸೆಯನ್ನು ಸಂಪೂರ್ಣ ಸರ್ಕಾರಿ ವ್ಯವಸ್ಥೆಯಲ್ಲಿಯೇ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ. ಮುಖ್ಯಮಂತ್ರಿಗಳ ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ…
— Basavaraj S Bommai (@BSBommai) January 16, 2024
ಮಾಜಿ ಪುಣ್ಯಾತ್ಮ ಉತ್ತರ ಭಾರತದಲ್ಲಿ ಪ್ರತಿದಿನ ಅಂದಾಜು ಇಪ್ಪತ್ತು ಇದಕ್ಕಿಂತ ಹೀನ ಪ್ರಕರಣಗಳು ನಡೆಯುವುದಂತೆ ಅದ್ರಲ್ಲೂ ಸಾಕ್ಷಾತ್ ದೇವಮಾನವನ ರಾಮರಾಜ್ಯದಲ್ಲಿನ ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು,,, ಯಾವುದಾದರೂ ಪ್ರಕರಣ ಬಹಿರಂಗಪಡಿಸಲಾಗಿದೆಯೇ,,, ಹಿಂದೂ ಹುಡುಗಿಯರು ಮುಸ್ಲಿಂ ಯುವತಿಯರೊಂದಿಗೆ ಇರುವಾಗ ಹಿಂದೂ ಗುತ್ತಿಗೆದಾರರು ಅದೇಷ್ಟೋ ಪ್ರಕರಣಗಳು ನಡೆದಿವೆ,,ಯಾವತ್ತಾದರೂ ಹಿಂದೂ ಯುವತಿಯರ ಪರವಾಗಿ ಪ್ರತಿಭಟನೆ ಮಾಡಿರುವಿರಾ,,,ಹಿಂದೂ ನಿಮ್ಮ ದೃಷ್ಟಿಯಲ್ಲಿ ಕೇವಲ ನಿಮ್ಮ ಗುತ್ತಿಗೆದಾರರೆ,,, ದೇಶದಲ್ಲಿ ಸಾಮಾಜಿಕ ಸಾಮರಸ್ಯ ಹಾಳು ಮಾಡುವಲ್ಲಿ ನಿಮ್ಮವರ ಪಾತ್ರವನ್ನು ಆತ್ಮವಂಚನೆ ಮಾಡಿಕೊಳ್ಳದೇ ನೆನಪಿಸಿಕೊಳ್ಳಿ,,ರಿಪೇರಿ ಮಾಡಲು ಆಗದಷ್ಟು ನಾಶ ಮಾಡಿದರು