ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಎಂದ ಎಚ್‌ಡಿ ಕುಮಾರಸ್ವಾಮಿ

Date:

  • ಈ ಬಾರಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ
  • ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದು ಮನವಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಕುಮಾರಸ್ವಾಮಿ, “ಈ ಬಾರಿ ಸುಮಲತಾ ಅಂಬರೀಶ್ ಅವರೇ ಸ್ಪರ್ಧೆ ಮಾಡಿದರೂ ನಾನು ಮಂಡ್ಯದಲ್ಲಿ ಸ್ಪರ್ಧಿಸುವುದಿಲ್ಲ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸುತ್ತೇನೆ. ನಾನು ಮಂಡ್ಯದಿಂದ ಸ್ಪರ್ಧಿಸುವ ವಿಚಾರಗಳು ಬರೀ ಊಹಾಪೋಹಗಳಷ್ಟೇ” ಎಂದು ಹೇಳಿದರು.

ಕಾಂಗ್ರೆಸ್‌ನ ನಾಲ್ಕು ಗ್ಯಾರಂಟಿ ಕಾರ್ಡ್‌ಗಳ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ಕಾಂಗ್ರೆಸ್‌ನದು ಗ್ಯಾರಂಟಿ ಕಾರ್ಡ್‌ ಅಲ್ಲ. ಅದು ನಕಲಿ ಕಾರ್ಡ್‌. ಜನರಿಗೆ ಟೀಕೆಗಳಿಂದ ಯಾವುದೇ ಪ್ರಯೋಜನವಿಲ್ಲ. ನಾನಿದರ ಬಗ್ಗೆ ಸುಮ್ಮನೆ ಮಾತನಾಡಿ ಸಮಯ ವ್ಯರ್ಥ ಮಾಡುವುದಿಲ್ಲ. ನಾನು ಕೇವಲ 37 ಶಾಸಕರನ್ನು ಇಟ್ಟುಕೊಂಡು ಕೆಲಸ ಮಾಡಿರುವೆ. ಕಾಂಗ್ರೆಸ್​​ನ ಎಲ್ಲ ಭಾಗ್ಯಗಳ ಜೊತೆಗೆ ರೈತರ ಸಾಲಮನ್ನಾ ಮಾಡಿರುವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತಮ್ಮ ಸಮಾವೇಶಕ್ಕೆ ಜನರನ್ನು ಕರೆತರಲು ಬಿಜೆಪಿ ನಾಯಕರು ಜಿಲ್ಲಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸುತ್ತಾರೆ. ಈ ಬಾರಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ. ಆದ್ದರಿಂದ ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು” ಎಂದು ಮನವಿ ಮಾಡಿಕೊಂಡರು.

“ಸರ್ಕಾರದ ಆಸ್ತಿ ದ್ವಿಗುಣ ಆಗುವ ನಿಟ್ಟಿನಲ್ಲಿ ನಾನು ಕಾರ್ಯಕ್ರಮಗಳನ್ನು ನೀಡುತ್ತಿರುವೆ. ಆದರೆ, ಕಾಂಗ್ರೆಸ್ ಪ್ರಸ್ತಾಪಿಸಿರುವ ಕಾರ್ಯಕ್ರಮಗಳು ಸರ್ಕಾರದ ಆಸ್ತಿ ವೃದ್ಧಿಸಲಾರವು. ಬರೀ ಚುನಾವಣೆಯಲ್ಲಿ ಮತ ಪಡೆಯುವ ದೃಷ್ಟಿಯಿಂದಲೇ ಯೋಜನೆಗಳನ್ನು ಪ್ರಸ್ತಾಪಿಸಲಾಗುತ್ತಿದೆ” ಎಂದು ವ್ಯಂಗ್ಯವಾಡಿದರು.

“ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಯೋಜನೆ ಸಾಧ್ಯವಿಲ್ಲ. ಅವರು ಅಧಿಕಾರಕ್ಕೆ ಬರುವುದಿಲ್ಲ ಅಂತಾ ಗೊತ್ತಿದೆ. ಅವರ ನಿರ್ಧಾರಗಳೇ ಅವರನ್ನು ರಾಜಕೀಯದಿಂದ ನಿವೃತ್ತಿ ಮಾಡುತ್ತವೆ” ಎಂದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಈವರೆಗೆ ಸ್ಪರ್ಧೆಯೇ ಇಲ್ಲದೆ ಗೆದ್ದಿದ್ದಾರೆ 35 ಅಭ್ಯರ್ಥಿಗಳು 

ಈ ಬಾರಿಯ ಲೋಕಸಭಾ ಚುನವಣೆಯಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್...

ಮುಸ್ಲಿಮರು, ಕಾಂಗ್ರೆಸ್ ಬಗ್ಗೆ ದ್ವೇಷ ಭಾಷಣ: ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐಎಂ ಆಗ್ರಹ

ಮುಸ್ಲಿಮರು ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿದ ದ್ವೇಷ...

ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ...

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ...