ಜೆಡಿಎಸ್ ಜಾತಿಗೆಟ್ಟಿದೆ ಎಂದ ಕಾಂಗ್ರೆಸ್‌ಗೆ ಚಾಟಿ ಬೀಸಿದ ಹೆಚ್ ಡಿ ಕುಮಾರಸ್ವಾಮಿ

Date:

  • ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ
  • ಈಗಿನ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲ

ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ ಕೊಡುವ ಚಾಳಿ ಕಾಂಗ್ರೆಸ್ ಪಕ್ಷದ ಜನ್ಮಕ್ಕೆ ಅಂಟಿದ ಆಜನ್ಮ ಜಾಢ್ಯ. ಒಳಗೊಂದು ಮುಖ, ಹೊರಗೊಂದು ಮುಖವುಳ್ಳ ಮುಖೇಡಿ ಪಕ್ಷವೇ ಕಾಂಗ್ರೆಸ್. ಅಂಥ ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದೂರಿದ್ದಾರೆ.

ಜೆಡಿಎಸ್ ಪಕ್ಷ ಜಾತಿಗೆಟ್ಟಿದೆ ಎಂದು ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

“ಪ್ರಧಾನಿಯಾಗಿದ್ದ ಕನ್ನಡದ ಹೆಮ್ಮೆಯ ಪುತ್ರನನ್ನು ಕೆಳಗೆಳೆದ ಕಿರಾತಕ ಪಕ್ಷ, ಅಹಿಂದ ಎನ್ನುತ್ತಲೇ ಬಿಜೆಪಿ ಹಿಂದೆಬಿದ್ದು ಬೇಳೆ ಬೇಯಿಸಿಕೊಳ್ಳುತ್ತಿರುವ ಪಕ್ಷ; ಅಂಥ ಕಳಂಕಿತ ಪಕ್ಷ ಜಾತ್ಯತೀತ ಜನತಾದಳದ ಜಾತ್ಯತೀತತೆ ಬಗ್ಗೆ ಕೀರಲು ದನಿಯಲ್ಲಿ ಕಿರಚುತ್ತಿದೆ. ಇಡೀ ದೇಶದ ಉದ್ದಗಲಕ್ಕೂ ಜಾತ್ಯತೀತ ಪಕ್ಷಗಳ ಮಾರಣಹೋಮ ನಡೆಸಿ, ಈಗ ಅಳಿವು ಉಳಿವಿಗಾಗಿ ಅದೇ ಪ್ರಾದೇಶಿಕ ಪಕ್ಷಗಳ ಬಾಲವಾಗಿ ಉಸಿರಾಡುತ್ತಿದೆ ಕಾಂಗ್ರೆಸ್. ಇನ್ನೂ ಹಳೆಯ ಅಮಲಿನಲ್ಲಿಯೇ ತೇಲುತ್ತಿದೆ ಆ ಪಕ್ಷಕ್ಕೆ ವರ್ತಮಾನದ ವರ್ತನೆಯ ಅರಿವೇ ಇಲ್ಲ” ಎಂದು ಅವರು ಟೀಕಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲದೇ, ಅಧಿಕಾರಕ್ಕಾಗಿ ಅಡ್ಡದಾರಿ ಹಿಡಿದ ಪಕ್ಷ. ಈ ಕಾಂಗ್ರೆಸ್, ಕಾಲಚಕ್ರಕ್ಕೆ ಸಿಲುಕಿ ಕೊರಗುತ್ತಾ ನೀತಿಗೆಟ್ಟ ಕಾಂಗ್ರೆಸ್, ಕರ್ನಾಟಕದಲ್ಲಿ ಮತಗೇಡಿ ಬಿಜೆಪಿಯ ಬಾಲಂಗೋಚಿ ಆಗಿರುವುದು ಸುಳ್ಳಾ?” ಎಂದು ಪ್ರಶ್ನಿಸಿದ್ದಾರೆ.

“ಇನ್ನೊಬ್ಬರ ಬಗ್ಗೆ ಹೊಟ್ಟೆಕಿಚ್ಚು ಪಡುವ ಕೀಳುತನ ಎಂಬುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಬಾಲಗ್ರಹ ಪೀಡೆ. ಅಧಿಕೃತ ಪ್ರತಿಪಕ್ಷವಾಗಿ ಹಗರಣಗಳ ಆಡುಂಬೋಲವಾದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಯಕಶ್ಚಿತ್ ಒಂದು ದಾಖಲೆಯನ್ನೂ ಬಿಡುಗಡೆ ಮಾಡಲು ಯೋಗ್ಯತೆ ಇಲ್ಲದ ಪಕ್ಷ ಕಾಂಗ್ರೆಸ್” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ 95% ಮುಗಿದಿದೆ ಎಂದ ಬಿಬಿಎಂಪಿ ; ವರದಿ ಕೇಳಿದ ಹೈಕೋರ್ಟ್‌

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮಹೋನ್ನತ ಆಶಯಕ್ಕೆ ಕುಣಿಕೆ ಬಿಗಿದ ಆಪರೇಶನ್ ಕಮಲ ಎಂಬ ಬಿಜೆಪಿಯ ಅಸಹ್ಯದಲ್ಲಿ ಅಭ್ಯಂಜನ ಮಾಡಿದವರು ಯಾರಯ್ಯ?” ಎಂದು ಕೇಳಿದ್ದಾರೆ.

“ಕಾಂಗ್ರೆಸ್ ಅನ್ನು ಹಳ್ಳ ಹಿಡಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ಸ್ಥಾನದಿಂದ ಹೊರದಬ್ಬಲು ಯಡಿಯೂರಪ್ಪ ಅವರ ಜತೆ ನೇರ ಡೀಲಿಗಿಳಿದು ಕೋಟಿ ಕೋಟಿ ಸುಪಾರಿ ಪಡೆದು ಇಡಗಂಟು ಮಾಡಿಕೊಂಡವರ ಬಗ್ಗೆ ಕಾಂಗ್ರೆಸ್ ಅಸಹನೀಯ ಮೌನವೇಕೆ? ಆಗ ಎಲ್ಲಿತ್ತು ಜಾತ್ಯತೀತತೆ? ಆ ದಲಿತ ನಾಯಕ ಮಾಡಿದ ಅನ್ಯಾಯವೇನು?” ಎಂದು ಪ್ರಶ್ನಿಸಿದ್ದಾರೆ.

“ಧರ್ಮ, ಜಾತಿಗಳ ನಡುವೆ ವೈಷಮ್ಯದ ವಿಷಬೀಜ ಬಿತ್ತಿದ, ಹಗರಣಗಳಲ್ಲಿ ಮುಳುಗೇಳುತ್ತಿರುವ ಕಡುಕೆಟ್ಟ ಭ್ರಷ್ಟ ಈ ರಾಜ್ಯ ಬಿಜೆಪಿ ಸರ್ಕಾರ ಬರಲು ಕಾರಣರು ಯಾರಯ್ಯ? ಮೇಲೆ ಮಾತ್ರ ಜಾತ್ಯತೀತ, ಒಳಗೆ ಮಾತ್ರ ಎಲ್ಲಕ್ಕೂ ಅತೀತ! ಇದು ಯಾವ ಸೀಮೆಯ ತತ್ತ್ವ ಸಿದ್ದಾಂತ? ಇನ್ನೆಷ್ಟು ದಿನ ಈ ಟೋಪಿ ರಾಜಕಾರಣ? ರಾಜಕೀಯದಲ್ಲಿ ಕಳ್ಳ ಸಂಸಾರ ಎನ್ನುವುದು ಕಾಂಗ್ರೆಸ್ ಪಕ್ಷದ ಆವಿಷ್ಕಾರ” ಎಂದು ಕಾಂಗ್ರೆಸ್ ಪಕ್ಷಕ್ಕೆ ಚಾಟಿ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಭೂ ದರೋಡೆಕೋರರಿಗೆ ಪ್ರವೇಶವಿಲ್ಲ; ಹೆಮ್ಮಿಗೆಪುರ ನಿವಾಸಿಗಳ ಸಂಕಲ್ಪ

ಭೂ ದರೋಡೆಕೋರರಿಗೆ ನಮ್ಮ ಸಮುಚ್ಚಯದೊಳಗೆ ಪ್ರವೇಶ ನೀಡುವುದಿಲ್ಲ ಎಂದು ಬೆಂಗಳೂರಿನ ಹೆಮ್ಮಿಗೆಪುರ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...