ಆಸ್ತಿ ಬರೆಸಿಕೊಂಡ ಆರೋಪದ ಹಿಂದೆ ರಾಜಕೀಯ ಕೈವಾಡ: ಮಾಜಿ ಸಚಿವ ಹೆಚ್​ಡಿ ರೇವಣ್ಣ

Date:

Advertisements

ಮಾಜಿ ಸಚಿವ ಎಚ್‌.ಡಿ. ರೇವಣ್ಣ‌ ಪತ್ನಿ ಭವಾನಿ ಹಾಗೂ ಮಗ, ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೆಲ ದಿನಗಳ ಹಿಂದೆ ಕೇಳಿಬಂದಿತ್ತು. 14 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರ ಜತೆಗೆ ಕಾರು ಚಾಲಕರಾಗಿದ್ದ ಕಾರ್ತಿಕ್‌ ಎಂಬುವವರಿಗೆ ಸೇರಿದ್ದ 13 ಎಕರೆ ಜಾಗವನ್ನು ರೇವಣ್ಣ ಕುಟುಂಬ ನುಂಗಿ ಹಾಕಿದೆ ಎಂದು ಆರೋಪಿಸಲಾಗಿದೆ.

ತನಗೆ ನ್ಯಾಯ ನೀಡುವಂತೆ ಚಾಲಕ ಕಾರ್ತಿಕ್ ದಕ್ಷಿಣ ವಲಯ ಐಜಿಪಿಗೆ ದೂರು ನೀಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ, “ಆಸ್ತಿ ಬರೆಸಿಕೊಂಡ ಆರೋಪದ ಹಿಂದೆ ರಾಜಕೀಯ ಕೈವಾಡವಿದೆ” ಎಂದು ತಿಳಿಸಿದ್ದಾರೆ.

ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಅವರು, “ಲೋಕಸಭಾ ಚುನಾವಣೆ ಹತ್ತಿರ ಇರುವುದರಿಂದ ಈ ರೀತಿ ಆರೋಪ ಮಾಡಲಾಗುತ್ತಿದೆ. ಇದರ ಹಿಂದೆ ರಾಜಕೀಯ ಇದೆ. ಘಟನೆ ನಡೆದು ಎಷ್ಟು ದಿನ ಆಗಿದೆ, ಈಗ ಯಾಕೆ ಆರೋಪ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಮೂರು ತಿಂಗಳು ಮಾತ್ರ ಇದೆ. ಇಂತಹ ಸಮಯದಲ್ಲಿ ಯಾಕೆ ಆರೋಪ ಬರುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

Advertisements

ಭವಾನಿ ರೇವಣ್ಣ ಹೊಡೆದಿದ್ದರಿಂದ ಗರ್ಭಪಾತ ಆಗಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, “ಭವಾನಿ ಹಲ್ಲೆ ಮಾಡುತ್ತಾರೆ ಎಂದರೆ ಏನು ಹೇಳೋದು. ಭವಾನಿ ಯಾರಿಗೆ ಸಹಾಯ ಮಾಡಿದ್ದಾರೆ ಅನ್ನುವುದು ದೇವರಿಗೇ ಗೊತ್ತು. ಆ ಹುಡುಗಿಯನ್ನ ಮನೆಯಲ್ಲಿ ಇಟ್ಟುಕೊಂಡು ಡಿಗ್ರಿ ಮಾಡಿಸಿದ್ದು ನಾವು. ನಮ್ಮ ಮನೆಯಲ್ಲಿ ಆಕೆಯನ್ನು ಕೆಲಸಕ್ಕೆ ಇಟ್ಟುಕೊಂಡಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಪಘಾತಕ್ಕೀಡಾದ ಕೋಳಿ ಸಾಗಾಟದ ವಾಹನ: ಚಾಲಕನ ರಕ್ಷಣೆ ಮಾಡುವ ಬದಲು ಮುಗಿಬಿದ್ದು ಕೋಳಿ ಕದ್ದೊಯ್ದ ಗ್ರಾಮಸ್ಥರು!

“ಚುನಾವಣೆ ಸಂದರ್ಭದಲ್ಲಿ ಇನ್ನೂ ಕೆಲವರು ಆರೋಪ ಮಾಡುತ್ತಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಯಾವ್ಯಾವ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬುದು ಎಲ್ಲವೂ ಗೊತ್ತು. ಪ್ರಜ್ವಲ್​ ಆಗಿರುವುದಕ್ಕೆ ಎಲ್ಲವನ್ನೂ ತಡೆದಿದ್ದಾನೆ” ಎಂದು ರೇವಣ್ಣ ಹೇಳಿಕೆ ನೀಡಿದ್ದಾರೆ.

ಇದೇ ವೇಳೆ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಆರೋಪಗಳಿಗೆ ಉತ್ತರಿಸಿದ ರೇವಣ್ಣ, “ಕಾಂಗ್ರೆಸ್ಸಿಗರು ಬೇಕಾದಾಗ ದೇವೇಗೌಡರ ಮನೆಯ ಬಳಿಗೆ ಬರುತ್ತಾರೆ. ಅಧಿಕಾರಕ್ಕೆ ನಮ್ಮನ್ನ ಬಂದಾಗ ದೂರ ಇಡುತ್ತಾರೆ. ಈ ಬಗ್ಗೆ ಅಂದೇ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದರು. ಕಾಂಗ್ರೆಸ್​ ನಂಬಬೇಡಿ ಎಂದು. ಕಾಂಗ್ರೆಸ್ ಜೊತೆ ಮೈತ್ರಿ ಬಿಟ್ಟು, ಬನ್ನಿ ನಾವು ಬೆಂಬಲಿಸುತ್ತೇವೆ ಎಂದು ಅಂದೇ ಕುಮಾರಸ್ವಾಮಿಯವರಿಗೆ ಮೋದಿಯವರು ಹೇಳಿದ್ದರು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X