ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಆಗಲ್ಲ: ಬಿಜೆಪಿ ಉಪಾಧ್ಯಕ್ಷ ರಾಜುಗೌಡ ವಾಗ್ದಾಳಿ

Date:

Advertisements

ಅನಂತಕುಮಾರ್ ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ರಾಜುಗೌಡ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗಿರುವ ಬಿಜೆಪಿ ಸಂಸದ ಅನಂತಕುಮಾರ್ ಹಗಡೆ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಸ್ವಪಕ್ಷ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಬೆನ್ನಲ್ಲೇ ರಾಜುಗೌಡ ಹೇಳಿಕೆ ಅಚ್ಚರಿ ಮೂಡಿಸಿದೆ.

ಯಾದಗಿರಿ ನಗರದಲ್ಲಿ ಮಾತನಾಡಿದ ರಾಜುಗೌಡ, “ಅನಂತಕುಮಾರ್ ಹೆಗಡೆ ಇದೇ ತರಹ 2018 ರಲ್ಲಿ ವಿವಾದಾತ್ಮಕ ಹೇಳಿಕೆ‌ ನೀಡಿ ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬರೋದ್ದಕ್ಕೆ ಕಲ್ಲು ಹಾಕಿದ್ದರು. ಹಿಂದುತ್ವ, ಮೋದಿ ಗಾಳಿಯಲ್ಲಿ ಸಂಸದರಾಗುತ್ತಾರೆ. ಸಂಸದರಾದ‌ ಮೇಲೆ ನಾಲ್ಕು ವರ್ಷ ಮಾಯ ಆಗಿಬಿಡುತ್ತಾರೆ. ಚುನಾವಣೆ ಸಂದರ್ಭದಲ್ಲಿ ಈ ರೀತಿ ಹುಚ್ಚುಚ್ಚಾಗಿ ಹೇಳಿಕೆ‌ ನೀಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಿಜೆಪಿ ಟಿಕೆಟ್ | ಯಡಿಯೂರಪ್ಪ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿದ್ದಾರೆ: ಕೆ.ಎಸ್. ಈಶ್ವರಪ್ಪ

“ಅಂಬೇಡ್ಕರ್ ಅವರಿಗೆ ಮೋದಿ ಅವರಷ್ಟು ಗೌರವ ಕೊಡುವ ನಾಯಕ ಮತ್ತೊಬ್ಬರಿಲ್ಲ. ಅಂಬೇಡ್ಕರ್ ಮಾರ್ಗದರ್ಶನದಲ್ಲಿ ಮೋದಿ ಅವರು ಹೊರಟಿದ್ದಾರೆ. ನಾಲ್ಕು ವರ್ಷ ಕಾಣೆ ಆಗಿದ್ದಕ್ಕೆ ಈ ರೀತಿ ಹೇಳಿಕೆ ನೀಡಿ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ” ಎಂದು ಕುಟುಕಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X