ಇನ್ನು ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Date:

Advertisements

ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ರಚಿಸಿದ್ದೇವೆ ಎಂದು ತಿಳಿಸಿದರು.

ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಮೂರು ಹೊಸ ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದಿನಿಂದ (ಜುಲೈ 1) ಜಾರಿಗೆ ಬರಲಿವೆ. ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಳ್ಳಲಿರುವ ಕಾಯ್ದೆಗಳು. ಈ ಮೂರು ಕಾನೂನುಗಳು ಹಿಂದಿನ ಕ್ರಿಮಿನಲ್ ಕಾನೂನುಗಳಾದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯ ಬದಲಿ ಕಾನೂನುಗಳಾಗಿವೆ.

ಬೆಂಗಳೂರಿನಲ್ಲಿ ಮಾತನಾಡಿದ ಡಾ.ಜಿ. ಪರಮೇಶ್ವರ್, ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ರಚಿಸಿದ್ದೇವೆ. ಇನ್ನು ಮುಂದೆ ದಾಖಲಾಗುವ ಪ್ರಕರಣಗಳಿಗೆ ನೂತನ ಕಾಯ್ದೆಗಳು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಯಶಸ್ಸಿನ ಬಗ್ಗೆ ಗೊತ್ತಾಗುತ್ತೆ. ಇಂದಿನಿಂದ ಆಚೆಗೆ ಯಾವೆಲ್ಲ ಪ್ರಕರಣಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ನೀಡಿದ್ದೇವೆ.

Advertisements

ಈ ಸುದ್ದಿ ಓದಿದ್ದೀರಾ? ಇಂದಿನಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೆ

ಕಾನ್ಸ್‌ಟೇಬಲ್‌​ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಪ್ರತಿಕ್ರಿಯೆ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದು ಬೆಂಗಳೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದರು.

ಇನ್ನು ಇದೇ ವೇಳೆ ವರ್ಷದಲ್ಲಿ ಮತ್ತೆ ಚುನಾವಣೆ ನಡೆಯಲಿದೆ ಎಂಬ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಸಚಿವ ಪರಮೇಶ್ವರ್ ವಾಗ್ದಾಳಿ ನಡೆಸಿದರು.

ಬೊಮ್ಮಾಯಿ ಒಂದು ಮಾತನಾಡಿದರೆ, ಸಿ.ಟಿ.ರವಿ ಮತ್ತೊಂದು ರೀತಿ ಮಾತನಾಡುತ್ತಾರೆ. ಅವರಲ್ಲೇ ಹೊಂದಾಣಿಕೆ ಇಲ್ಲ. ಬಿಜೆಪಿಯವರು ನಮ್ಮ ಮೇಲೆ ಗೂಬೆ ಕೂರಿಸಬೇಕು. ಹಾಗಾಗಿ ನಮ್ಮ ಬಗ್ಗೆ ಮಾತನಾಡುತ್ತಾರೆ. ನಾವು ಜನಗಳಿಗೆ ಮಾತು ಕೊಟ್ಟಿದ್ದೇವೆ. ನಾವು ಮಾಡಬೇಕಾಗಿರುವ ಅಭಿವೃದ್ಧಿ ಕಾರ್ಯಗಳನ್ನು ನಾವು ಮಾಡುತ್ತಿದ್ದೇವೆ ಎಂದರು.

ವಾಲ್ಮೀಕಿ ನಿಗಮ ಹಗರಣ ಪ್ರಕರಣ​ ಸಂಬಂಧ ಮಾತನಾಡಿದ ಪರಮೇಶ್ವರ್, ವಾಲ್ಮೀಕಿ ಹಗರಣ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ಕೂಡ ತನಿಖೆ ನಡೆಸುತ್ತಿದ್ದಾರೆ. ಎಸ್​ಐಟಿ ಕೂಡ ತನಿಖೆ ಮಾಡುತ್ತಿದ್ದಾರೆ. ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಲ್ಲುವುದಿಲ್ಲ. ತಪ್ಪು ಮಾಡಿದವರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗುತ್ತೆ. ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳು ಯಾರೇ ಇದ್ದರೂ ಶಿಕ್ಷೆಯಾಗಲಿದೆ ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X