ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ, ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ: ಸಿದ್ದರಾಮಯ್ಯ

Date:

  • ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಅಭಿಮಾನಿ
  • ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ಹೈಕಮಾಂಡ್‌ ಹೇಳಿಲ್ಲ ಎಂದ ಸಿದ್ದರಾಮಯ್ಯ


ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ. ಆದರೂ ಸ್ಪರ್ಧೆ ಕುರಿತು ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ನಡುವೆ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಗೊಂದಲದ ಸಮಸ್ಯೆ ಕಾಡುತ್ತಿದ್ದು, ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, “ದೆಹಲಿಯಲ್ಲಿ ಕೋಲಾರ ಮತಕ್ಷೇತ್ರದ ಬಗ್ಗೆ ಚರ್ಚೆಯಾಗಿಲ್ಲ. ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಅವರು ಅಪಾಯ ತೆಗೆದುಕೊಳ್ಳಬೇಡಿ ಎಂದಿದ್ದರು. ಆದರೆ, ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ಹೈಕಮಾಂಡ್ ನನಗೆ ಹೇಳಿಲ್ಲ” ಎಂದು ಸ್ಪಷ್ಟಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೋಲಾರದಲ್ಲಿ ನನ್ನನ್ನು ಕಟ್ಟಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಆದ್ದರಿಂದ ಅಪಾಯ ಮೈಮೇಲೆ ಎಳೆದುಕೊಳ್ಳಬೇಡಿ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ” ಎಂದು ತಿಳಿಸಿದರು.

“ರಾಹುಲ್ ಗಾಂಧಿಯಾಗಲಿ, ಮಲ್ಲಿಕಾರ್ಜುನ ಖರ್ಗೆಯಾಗಲಿ ಕೋಲಾರದಲ್ಲಿ ಸ್ಪರ್ಧಿಸಬೇಡಿ ಎಂದು ಹೇಳಿಲ್ಲ. ನಾನು ಸ್ಥಳೀಯ ನಾಯಕರೊಂದಿಗೆ ಮಾತನಾಡಿದ್ದೇನೆ. ಚುನಾವಣಾ ಸ್ಪರ್ಧೆ ವಿಚಾರವನ್ನು ಹೈಕಮಾಂಡ್ ನನಗೆ ಬಿಟ್ಟಿದೆ. ಮನೆಯವರೊಂದಿಗೆ ಮಾತನಾಡಿ ಮುಂದಿನ ನಡೆ ಬಗ್ಗೆ ನಿರ್ಧರಿಸುವೆ” ಎಂದು ಹೇಳಿದರು.

ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರಿಂದ ಒತ್ತಾಯ

ಕೋಲಾರ ಮತಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಅವರು ಎರಡು ತಿಂಗಳ ಹಿಂದಿನಿಂದಲೂ ತಯಾರಿ ಮಾಡಿಕೊಂಡು ಬಂದಿದ್ದರು. ಆದರೆ, ರಾಹುಲ್ ಗಾಂಧಿ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಒಳಿತಲ್ಲ ಎಂದು ಸಲಹೆ ನೀಡಿದ್ದರು.

ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದ ಕುರಿತು ಸಾಕಷ್ಟು ಚರ್ಚೆಗಳಾಗುತ್ತಿದ್ದು, ಕೋಲಾರದಿಂದಲೇ ಸ್ಪರ್ಧಿಸುವಂತೆ ಅಭಿಮಾನಿಗಳು ಅವರ ನಿವಾಸದ ಎದುರು ಧರಣಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅಭಿಮಾನಿಯೊಬ್ಬರು, “ಅವರು ಕೋಲಾರದಿಂದ ಸ್ಪರ್ಧಿಸದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದರು. ಸಾಲದೆಂಬಂತೆ ಮತ್ತೋರ್ವ ಅಭಿಮಾನಿ ಅಂಗಿ ಬಿಚ್ಚಿ ಬಾರಕೋಲಿನಿಂದ ಹೊಡೆದುಕೊಂಡಿದ್ದಾನೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...