ಬೊಮ್ಮಾಯಿ ವಿರುದ್ಧದ 2 ಕ್ರಿಮಿನಲ್ ಪ್ರಕರಣ ರದ್ದು: ಹೈಕೋರ್ಟ್

Date:

Advertisements

ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದದ 2 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ರೈತರು ಮತ್ತು ದೇವಾಲಯಗಳ ಆಸ್ತಿಯನ್ನು ವಕ್ಫ್‌ ಮಂಡಳಿ ಅತಿಕ್ರಮಣ ಮಾಡಿಕೊಂಡಿದೆ ಎಂದು ಆರೋಪಿಸಿ 2024ರ ನವೆಂಬರ್‌ನಲ್ಲಿ ಬಿಜೆಪಿ ಪ್ರತಿಭಟನೆಗಳನ್ನು ನಡೆಸಿತ್ತು. ಸವಣೂರಿನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಬೊಮ್ಮಾಯಿ, “ವಕ್ಫ್ ಮಂಡಳಿ ರೈತರ ಭೂಮಿಯನ್ನು ಕಬಳಿಸುತ್ತಿದೆ. ಸವಣೂರಿನಲ್ಲಿ ನಿಂತು ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿ ಮೇಲೆ ಬೀಳುತ್ತದೆ” ಎಂದು ಆರೋಪಿಸಿದ್ದರು. ಮಾತ್ರವಲ್ಲದೆ, ವಕ್ಫ್‌ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.

ಅವರ ಭಾಷಣವು ಧರ್ಮ ಅಥವಾ ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುತ್ತದೆ ಎಂದು ಆರೋಪಿಸಲಾಗಿತ್ತು. ಬೊಮ್ಮಾಯಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 196(1)(ಎ) ಅಡಿಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ಮತ್ತು ಶಿಗ್ಗಾಂವಿ ಪೊಲೀಸ್​ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.

Advertisements

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ರದ್ದು ಕೋರಿ, ಬೊಮ್ಮಾಯಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ಭಾಷಣದಲ್ಲಿ ಸೆಕ್ಷನ್ 196(1)(ಎ) ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲು ಅಗತ್ಯವಾದ ಪ್ರಚೋದನಕಾರಿ ಅಂಶಗಳು ಇಲ್ಲ ಎಂದು ವಾದಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರು ಬೊಮ್ಮಾಯಿ ವಿರುದ್ದದ ಎರಡೂ ಪ್ರಕರಣಗಳನ್ನು ರದ್ದುಗೊಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X