ಅಸ್ಸಾಂ | ಧಾರ್ಮಿಕ ಸಂಕೇತಗಳನ್ನು ತೆಗೆಯುವಂತೆ ಕ್ರಿಶ್ಚಿಯನ್ ಶಾಲೆಗೆ ಆದೇಶಿಸಿದ ಹಿಂದೂ ಸಂಘಟನೆ

Date:

Advertisements

ಹಿಂದೂ ಸಂಘಟನೆಯೊಂದು ಅಸ್ಸಾಂನ ಕ್ರಿಶ್ಚಿಯನ್ ಶಾಲೆಗಳಲ್ಲಿರುವ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕು ಮತ್ತು ಧರ್ಮಗುರುಗಳು, ಕ್ರೈಸ್ತಸನ್ಯಾಸಿನಿಯರು ಹಾಗೂ ಸನ್ಯಾಸಿಗಳು ತಮ್ಮ ಆವರಣದಲ್ಲಿ ಧರಿಸುವ ಧಾರ್ಮಿಕ ಆಚರಣೆಗಳನ್ನು ತೊರೆಯಬೇಕು ಎಂದು ಆದೇಶಿಸಿ 15 ದಿನಗಳ ಅಂತಿಮ ಗಡುವು ನೀಡಿದೆ.

ಶಾಲೆಯ ಆವರಣದಿಂದ ಜೀಸಸ್‌ ಮತ್ತು ಮೇರಿಯ ಪ್ರತಿಮೆಗಳನ್ನು ತೆಗೆಯಲು ಕುಟುಂಬ ಸುರಕ್ಷ್ಯ ಪರಿಷದ್ ನೀಡಿರುವ ಆದೇಶದಲ್ಲಿ ಸೂಚಿಸಲಾಗಿದೆ. ಕ್ರೈಸ್ತ ಮಿಷನರಿಗಳು ಶಿಕ್ಷಣ ಸಂಸ್ಥೆಗಳು ಮತ್ತು ಶಾಲೆಗಳನ್ನು ಮತಾಂತರ ಚಟುವಟಿಕೆಗಳಿಗೆ ಬಳಸುವುದನ್ನು ತಡೆಯುವ ಉದ್ದೇಶದಿಂದ ಈ ಸೂಚನೆ ನೀಡಲಾಗಿದೆ ಎಂದು ಪರಿಷದ್ ಹೇಳಿದೆ.

ಜೊತೆಗೆ, ಶಾಲಾ ಆವರಣಗಳಲ್ಲಿರುವ ಚರ್ಚ್‌ಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ತಿಳಿಸಲಾಗಿದೆ.

Advertisements

ಆದೇಶ ಜಾರಿಗೆ ತರದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಂಘಟನೆ ಎಚ್ಚರಿಸಿದೆ. ಶಾಲೆಯ ಕ್ರೈಸ್ತ ಧರ್ಮಗುರು ಜಾನ್ ಮೂಲಾಚಿರ ಇಂತಹ ಆದೇಶದ ಆಚರಣೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

“ಸಂಘಟನೆಗಳ ಬೆದರಿಕೆಯ ಅರಿವಿದೆ. ಆದರೆ ಇಂತಹ ಬೆಳವಣಿಗೆಗಳು ರಾಜ್ಯದಲ್ಲಿ ಏಕಾಗುತ್ತಿವೆ ಎಂದು ತಿಳಿಯುತ್ತಿಲ್ಲ” ಎಂದು ಮಾಧ್ಯಮಗಳಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆದರಿಕೆಯ ಹಿನ್ನೆಲೆಯಲ್ಲಿ ಧರ್ಮಗುರುಗಳು, ಸನ್ಯಾಸಿನಿಯರು ಶಾಲಾ ಆವರಣದಲ್ಲಿ ಸಾಮಾನ್ಯ ಉಡುಗೆಗಳನ್ನು ಧರಿಸುವಂತೆ ಕ್ರೈಸ್ತ ಮುಖಂಡರು ಸಲಹೆ ನೀಡಿದ್ದಾರೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರ್ಮಾರಿಗೆ ಮನವಿ ಸಲ್ಲಿಸಲು ಕ್ರೈಸ್ತ ಮುಖಂಡರು ನಿರ್ಧರಿಸಿದ್ದಾರೆ.

ಹಿಂದೂ ಸಂಘಟನೆಗಳು ಧಾರ್ಮಿಕ ರಾಷ್ಟ್ರವಾದಕ್ಕೆ ಒತ್ತು ನೀಡಿ ಪ್ರಚಾರ ಆರಂಭಿಸಿದ ನಂತರ ಸಂಪೂರ್ಣ ಈಶಾನ್ಯ ರಾಜ್ಯಗಳಲ್ಲಿ ಕ್ರೈಸ್ತ ಧರ್ಮ ಮತ್ತು ಮಿಷನರಿ ಚಟುವಟಿಕೆಗಳಿಗೆ ಧಕ್ಕೆಯಾಗಿದೆ ಎಂದು ಮುಖಂಡರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X