ಉತ್ತರ ಪ್ರದೇಶ | ಮಸೀದಿಯಲ್ಲಿ ಪ್ರಾರ್ಥಿಸಿದ ಹಿಂದೂ ವ್ಯಾಪಾರಿ; ಶುದ್ಧೀಕರಣಕ್ಕೆ ಬಲಪಂಥೀಯರ ಆಗ್ರಹ

Date:

Advertisements

ಉತ್ತರ ಪ್ರದೇಶದ ಆಲಿಗಢದ ಸ್ಥಳೀಯ ಮಸೀದಿಯಲ್ಲಿ ಹಿಂದೂ ವ್ಯಾಪಾರಿಯೊಬ್ಬರು ಸ್ವಯಂಪ್ರೇರಿತವಾಗಿ ಪ್ರಾರ್ಥನೆಯಲ್ಲಿ (ನಮಾಜ್) ಭಾಗಿಯಾಗಿದ್ದು, ಬಲಪಂಥೀಯರು ವಿವಾದ ಸೃಷ್ಟಿಸಿದ್ದಾರೆ. “ಹಿಂದೂ ವ್ಯಾಪಾರಿಯ ಶುದ್ಧೀಕರಣ ಮಾಡಬೇಕು” ಎಂದು ಸಂಘಪರಿವಾರ ಆಗ್ರಹಿಸಿದೆ.

ಮಾಮೂ ಭಂಜಾ ಪ್ರದೇಶದ ವ್ಯಾಪಾರಿಯಾದ ಸುನಿಲ್ ರಜನಿ ಗುರುವಾರ ಸಂಜೆ ತನ್ನ ಮುಸ್ಲಿಂ ನೆರೆಹೊರೆಯವರೊಂದಿಗೆ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಅದರ ವಿಡಿಯೋ ವೈರಲ್ ಆಗಿತ್ತು.

ಇದನ್ನು ಓದಿದ್ದೀರಾ? ದೆಹಲಿಯ ಜಾಮಾ ಮಸೀದಿಯಲ್ಲಿ ಮುಸ್ಲಿಮರಿಗೆ ಪ್ರತಿದಿನ ಇಫ್ತಾರ್ ಆಯೋಜಿಸುತ್ತಿರುವ ಹಿಂದೂ ಯುವತಿ ನೇಹಾ ಭಾರ್ತಿ

Advertisements

ಬಿಜೆಪಿ ಯುವ ಮೋರ್ಚಾದ ಸ್ಥಳೀಯ ನಾಯಕ ಮೋನು ಅಗರ್ವಾಲ್ ಅವರು ರಜನಿಯವರ ಕೃತ್ಯ ಅಪವಿತ್ರ ಎಂದು ಹೇಳಿದ್ದಾರೆ. ಹಾಗೆಯೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದಲ್ಲದೇ ರಜನಿ ದೇವಸ್ಥಾನದಲ್ಲಿ ಶುದ್ಧೀಕರಣಗೊಳ್ಳಬೇಕು ಎಂದು ಅಗರ್ವಾಲ್ ಆಗ್ರಹಿಸಿದ್ದಾರೆ.

ಇನ್ನು ರಜನಿ ಮಸೀದಿಯಿಂದ ಹೊರಬರುತ್ತಿದ್ದಂತೆ ಕೆಲವು ಸಂಘಪರಿವಾರದ ಕಾರ್ಯಕರ್ತರು ರಜನಿ ಮೇಲೆ ಗಂಗಾಜಲ ಸಿಂಪಡಿಸಲು ಮುಂದಾದರು. ಈ ಮೂಲಕ ಶುದ್ಧೀಕರಣ ಮಾಡುತ್ತೇವೆ ಎಂದು ಕಾರ್ಯಕರ್ತರು ಹೇಳಿರುವುದಾಗಿ ವರದಿಯಾಗಿದೆ.

ಇನ್ನು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಈ ವಿಚಾರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ನೆಟ್ಟಿಗರು ರಜನಿ ನಡೆಯನ್ನು ಖಂಡಿಸಿದರೆ, ಇನ್ನು ಕೆಲವರು ಓರ್ವ ವ್ಯಕ್ತಿಯ ವೈಯಕ್ತಿಕ ಆಯ್ಕೆಯನ್ನು ಬಲಪಂಥೀಯರು ತಮ್ಮ ರಾಜಕಾರಣಕ್ಕೆ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ನಾಯಕರು ಕೋಮುವಾದದ ಪರವೋ, ವಿರುದ್ಧವೋ?

“ಓರ್ವ ಮುಸ್ಲಿಂ ವ್ಯಕ್ತಿ ಕೈ ಮುಗಿದು ಪ್ರಾರ್ಥಿಸುವಂತೆ, ಹಿಂದೂ ನಮಾಜ್ ಮಾಡಿದರೆ ಏನಾಗುತ್ತದೆ? ನಮಾಜ್ ಮಾಡಿದ ಬಳಿಕ ಅಂತ ಅನಾಹುತ ಏನಾಗಿದೆ” ಎಂದು ಮನೋಜ್ ಎಂಬ ನೆಟ್ಟಿಗರು ಪ್ರಶ್ನಿಸಿದ್ದಾರೆ. ಇನ್ನು ಹಿಂದೂ ವ್ಯಕ್ತಿ ಬಂದಿದ್ದಾರೆ ಎಂದು ನಾವು ಮಸೀದಿಯ ಶುದ್ಧೀಕರಣವೇನು ಮಾಡಿಲ್ಲ. ಎಲ್ಲಾ ಧರ್ಮವೂ ಒಂದೇ ಎಂದು ಅಮೀರ್ ಖಾನ್ ಎಂಬ ನೆಟ್ಟಿಗರು ಹೇಳಿದ್ದಾರೆ.

“ನಮಾಜ್, ಪೂಜೆ ಅಥವಾ ಅರ್ಚನೆ- ಓರ್ವ ವ್ಯಕ್ತಿ ಏನು ಮಾಡಬೇಕು ಎಂಬುದು ಆತನ ವೈಯಕ್ತಿಕ ಆಯ್ಕೆಯಾಗಿರುತ್ತದೆ. ಯಾರೂ ಕೂಡಾ ಒತ್ತಾಯಪೂರ್ವಕವಾಗಿ ಮಂದಿರ ಅಥವಾ ಮಸೀದಿಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X