ಉದಯನಿಧಿ ಪೂರ್ವಜರು ಕೂಡ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರು: ನಟ ಕಮಲ್ ಹಾಸನ್

Date:

Advertisements
  • ಕೊಯಮತ್ತೂರಿನಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಹೇಳಿಕೆ ನೀಡಿದ ಸ್ಥಾಪಕ
  • ಪೆರಿಯಾರ್ ಅವರನ್ನು ತಮಿಳುನಾಡು ತಮ್ಮವರು ಎಂದು ಹೇಳಿಕೊಳ್ಳಲಿ ಎಂದ ನಟ

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಬಲಪಂಥೀಯ ಸಂಘಟನೆ ಹಾಗೂ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿರುವ ತಮಿಳುನಾಡಿನ ಯುವಜನ ಮತ್ತು ಕ್ರೀಡಾ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯ ವಿಚಾರವಾಗಿ ಮಾತನಾಡಿರುವ ಮಕ್ಕಳ್ ನೀಧಿ ಮೈಯಂ ಪಕ್ಷದ ಸ್ಥಾಪಕಾಧ್ಯಕ್ಷ, ಖ್ಯಾತ ನಟ ಕಮಲ್ ಹಾಸನ್, “ಸನಾತನ’ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಪೂರ್ವಜರು ಕೂಡ ಈ ಹಿಂದೆಯೇ ಮಾತನಾಡಿದ್ದರು” ಎಂದು ಅಭಿಪ್ರಾಯಿಸಿದ್ದಾರೆ.

ಕೊಯಮತ್ತೂರಿನಲ್ಲಿ ಇಂದು ನಡೆದ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು,”ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಇಂದು ಚಿಕ್ಕ ಮಗು (ಉದಯನಿಧಿ ಸ್ಟಾಲಿನ್) ಅವರನ್ನು ಗುರಿಪಡಿಸಿ, ಬೇಟೆಯಾಡಲಾಗುತ್ತಿದೆ. ಆತನ ಪೂರ್ವಜರು ‘ಸನಾತನ’ದ ಬಗ್ಗೆ ಮಾತನಾಡಿದ್ದಾರೆ. ನಮಗೆಲ್ಲರಿಗೂ ‘ಸನಾತನ’ ಪದದ ಬಗ್ಗೆ ತಿಳಿದಿದ್ದು ಪೆರಿಯಾರ್ ಅವರಿಂದ” ಎಂದು ಹೇಳಿದರು.

“ಪೆರಿಯಾರ್ ಅವರು ದೇವಸ್ಥಾನದಲ್ಲಿಯೂ ಕೆಲಸ ಮಾಡುತ್ತಿದ್ದರು. ಹಣೆಯಲ್ಲಿ ತಿಲಕವಿಟ್ಟು ವಾರಣಾಸಿಯಲ್ಲಿ ಪೂಜೆ ಮಾಡುತ್ತಿದ್ದರು. ಅದನ್ನೆಲ್ಲ ದೂರ ಮಾಡಿದ್ದಲ್ಲದೇ, ಜನಸೇವೆಯೇ ಎಲ್ಲಕ್ಕಿಂತ ಅತಿದೊಡ್ಡ ಸೇವೆ ಎಂದು ಅರಿತು ಇಡೀ ಜೀವನಪೂರ್ತಿ ಅದನ್ನೇ ಮಾಡಿಕೊಂಡು ಬಂದವರು. ಅವರಿಗೆ ಎಷ್ಟು ಸಿಟ್ಟು ಬಂದಿರಬಹುದು ಊಹಿಸಿ” ಎಂದ ಕಮಲ್ ಹಾಸನ್, “ಡಿಎಂಕೆ ಅಥವಾ ಯಾವುದೇ ಪಕ್ಷವೇ ಆಗಲಿ ಪೆರಿಯಾರ್ ಅನ್ನು ತಮ್ಮವರು ಎಂದು ಹೇಳಿಕೊಳ್ಳಬೇಡಿ. ಪೆರಿಯಾರ್ ಅವರನ್ನು ತಮಿಳುನಾಡು ತಮ್ಮವರು ಎಂದು ಹೇಳಿಕೊಳ್ಳಲಿ” ಎಂದು ನಟ, ರಾಜಕಾರಣಿ ಹೇಳಿದ್ದಾರೆ.

Advertisements

ಇತ್ತೀಚೆಗೆ ತಮಿಳುನಾಡಿನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಉದಯನಿಧಿ ಸ್ಟಾಲಿನ್, “ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ನಾವು ಕೊರೋನಾ, ಡೆಂಗ್ಯೂ, ಮಲೇರಿಯಾದಂಥ ಸೋಂಕುಗಳನ್ನು ವಿರೋಧಿಸಬಾರದು. ಆರೋಗ್ಯ ಜಾಗೃತಿಯ ಮೂಲಕ ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ಸಾಮಾಜಿಕ ಜಾಗೃತಿಯ ಮೂಲಕ ನಿರ್ಮೂಲನೆ ಮಾಡಬೇಕು” ಎಂದು ಹೇಳಿಕೆ ನೀಡಿದ್ದರು. ಇದು ಬಲಪಂಥೀಯರು ಹಾಗೂ ಬಿಜೆಪಿಯವರ ಕಣ್ಣು ಕೆಂಪಗಾಗಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X