‘ಹೊಲೆಗೇರಿ’ ಹೇಳಿಕೆ | ನಟ ಉಪೇಂದ್ರ ವಿರುದ್ಧ ಎರಡನೇ ಎಫ್‌ಐಆರ್, ವಿಚಾರಣೆಗೆ ಹಾಜರಾಗಲು ನೋಟಿಸ್

Date:

Advertisements

‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಲೈವ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಎರಡನೇ ಎಫ್‌ಐಆರ್ ದಾಖಲಾಗಿದೆ. ಈ ವಿವಾದಾತ್ಮಕ ಹೇಳಿಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ತಕ್ಷಣ ಉಪೇಂದ್ರ ಅವರು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ 12ರ ಸುಮಾರಿಗೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

IMG 20230814 WA0096

ಈ ಹಿನ್ನೆಲೆಯಲ್ಲಿ ಉಪೇಂದ್ರ ಅವರ ವಿರುದ್ಧ ಎರಡನೇ ಎಫ್ಐಆರ್ ದಾಖಲಾಗಿದೆ. ಈ ಮೊದಲು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮೊದಲ ಎಫ್ಐಆರ್ ದಾಖಲಾಗಿತ್ತು.

Advertisements

ಎರಡನೇ ಎಫ್ಐಆರ್ ನಲ್ಲಿ ದೂರುದಾರ ಹರೀಶ್ ಕುಮಾರ್ ಅವರು, ಭಾರತೀಯ ದಂಡಸಂಹಿತೆಯ 505(1)(B)(C), 153a, 295, 295A, sc st prevention of atrocities act 1989 ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿ, ಮನವಿ ಮಾಡಿದ್ದರು.

IMG 20230814 WA0095

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದಿದ್ದರು. ಇದು ಈಗ ವಿವಾದಕ್ಕೆ ಕಾರಣವಾಗಿದೆ. ಅವರ ವಿರುದ್ಧ ಕೆಲವರು ಕಾನೂನು ಸಮರ ಸಾರಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X