ನ್ಯಾಯಾಲಯದ ಆದೇಶದಂತೆ ಹಂಪಿ ಸುತ್ತಮುತ್ತ ಹೋಮ್ ಸ್ಟೇಗಳನ್ನು ತಕ್ಷಣವೇ ನಿಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ

Date:

  • ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಅಧ್ಯಕ್ಷತೆಯಲ್ಲಿ ಚರ್ಚೆ
  • ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಪಾರಂಪರಿಕ ತಾಣವಾದ ಹಂಪಿಯ ಸುತ್ತಲಿನ ಗ್ರಾಮಗಳ ಕುರಿತು ನ್ಯಾಯಾಲಯ ಆದೇಶ ನೀಡಿರುವಂತೆ ಹೋಮ್ ಸ್ಟೇಗಳನ್ನು ತಕ್ಷಣಕ್ಕೆ ನಿಲ್ಲಿಸಬೇಕು. ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ ತೆಗೆದುಕೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿಯಾಗಿ ಚರ್ಚಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ ಮಾದಕವಸ್ತುಗಳ ಬಳಕೆ, ವೇಶ್ಯಾವಾಟಿಕೆಗಳಂಥ ಕಾನೂನು ಬಾಹಿರ ಚಟುವಟಿಕೆಗಳನ್ನು ಗುರುತಿಸುವಂತೆ ನ್ಯಾಯಾಲಯ ಸೂಚಿಸಿದ್ದು, ಇದನ್ನು ಗುರುತಿಸಿ ನಿಲ್ಲಿಸುವ ಕೆಲಸವಾಗಬೇಕು ಮತ್ತು ಗ್ರಾಮಸ್ಥರಿಗೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಸ್ಥಗಿತಗೊಳಿಸಬಾರದು ಎಂದು ಅವರು ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಹಂಪಿ ಪ್ರದೇಶದ 29 ಗ್ರಾಮಗಳಲ್ಲಿ 10 ಸಾವಿರ ಜನರಿದ್ದಾರೆ. 2009 ರಲ್ಲಿ ನಾಲ್ಕು ಸ್ವಾಮೀಜಿಗಳು ದಾವೆ ಹೂಡಿದ್ದು, ಅನಧಿಕೃತ ಚಟುವಟಿಕೆಗಳನ್ನು ಗುರುತಿಸುವ ಕೆಲಸ ಪ್ರಾಧಿಕಾರದ್ದು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಅದರ ಆಧಾರದ ಮೇಲೆ ಸ್ಥಳೀಯರಿಗೆ ಅಂಗಡಿ ಹಾಕಲು ಅವಕಾಶವಿಲ್ಲ. 230 ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹಂಪಿ ಅಭಿವೃದ್ಧಿಗೆ ಪ್ರಾಚ್ಯವಸ್ತು ಇಲಾಖೆ ಕ್ರಮವಹಿಸಿಲ್ಲ. ಹಂಪಿಗೆ ಬರುವ ಜನರಿಗೆ ಈ ಕ್ರಮದಿಂದ ತೊಂದರೆಯಾಗಿದೆ.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕಿದೆ. ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ, ಹಾಗೂ ಆರ್ಥಿಕ ಚಟುವಟಿಕೆ ಹಮ್ಮಿಕೊಳ್ಳಲು, ಹೋಮ್ ಸ್ಟೇ ನಡೆಸಲು ಅವಕಾಶ ಕಲ್ಪಿಸಲು ಅವಕಾಶ ನೀಡುವಂತೆ ಮಾಜಿ ಸಂಸದ ಉಗ್ರಪ್ಪ ಮನವಿ ಮಾಡಿದರು.

ದಿನನಿತ್ಯದ ಅವಶ್ಯಕತೆಗಳಿಗೆ 50 ಚಟುವಟಿಕೆಗಳನ್ನು ಗುರುತಿಸಲಾಗಿದೆ. ಹೋಮ್ ಸ್ಟೇಗೆ ಇದರಲ್ಲಿ ಅವಕಾಶ ಕಲ್ಪಿಸಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಜಾಗದಲ್ಲಿ ಸ್ಟಾರ್ ಹೋಟೆಲ್ ನಿರ್ಮಿಸಲು ಅನುಮತಿ ನೀಡಲಾಗಿದೆ.‌ ಜೈನರ ಆಶ್ರಮ, ಮಠವಿದೆ, ಖಾಸಗಿಯವರಿಗೆ ಹೋಮ್ ಸ್ಟೇ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಆದರೆ ಬಡವರಿಗೆ ಹೋಟೆಲು, ಹೋಮ್ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ಉಗ್ರಪ್ಪ ಅವರು ವಿವರಿಸಿದರು.

ಹೋಮ್ ಸ್ಟೇ ವಾಣಿಜ್ಯ ಚಟುವಟಿಕೆಯಾಗಿದೆ ಎಂದು ನ್ಯಾಯಾಲಯ ಪರಿಗಣಿಸಿದೆ. ಸದ್ಯ ನ್ಯಾಯಾಲಯ ಸ್ಥಳ ಪರಿಶೀಲನೆ ಮಾಡಲು ಸೂಚಿಸಿದ್ದು, ಈ ಚಟುವಟಿಕೆಗಳಿಂದ ಪಾರಂಪರಿಕ ತಾಣಕ್ಕೆ ಹಾನಿಯಾಗುತ್ತದೆಯೇ ಎಂಬ ಅಂಶಗಳನ್ನು ಪರಿಶೀಲಿಸಲು ತಿಳಿಸಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ತುಕಾರಾಂ, ಹಿರಿಯ ಕಾಂಗ್ರೆಸ್ ಮುಖಂಡ ಅಲ್ಲಂ ವೀರಭದ್ರಪ್ಪ, ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿ ಸಂತ್ರಸ್ಥ ಗ್ರಾಮದ 50ಕ್ಕೂ ಹೆಚ್ಚು ನಿವಾಸಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...