ವಸತಿ ಯೋಜನೆಯ ಕಾಮಗಾರಿ ನಿಲ್ಲಿಸುವಂತಿಲ್ಲ; ಗುತ್ತಿಗೆದಾರರಿಗೆ ಸಚಿವ ಜಮೀರ್‌ ಸೂಚನೆ

Date:

Advertisements

ಬಿಲ್ ಪಾವತಿ ಬಾಕಿ ನೆಪವೊಡ್ಡಿ ಗುತ್ತಿಗೆ ಸಂಸ್ಥೆಗಳು ವಸತಿ ಯೋಜನೆಗಳ ಕಾಮಗಾರಿ ನಿಲ್ಲಿಸುವಂತಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದರು.

ಶುಕ್ರವಾರ ಸುವರ್ಣಸೌಧದಲ್ಲಿ ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, “ವಸತಿ ಯೋಜನೆಗಳು ಕಾಲಮಿತಿಯಲ್ಲಿ ಪೂರ್ಣಗೊಂಡು ಫಲಾನುಭವಿಗಳಿಗೆ ಹಂಚಿಕೆ ಆಗಬೇಕು. ಬಿಲ್ ಪಾವತಿ ಅಥವಾ ಇತರೆ ಕಾರಣಗಳಿಗೆ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದರೆ ಕಪ್ಪು ಪಟ್ಟಿಗೆ ಸೇರಿಸಲಾಗುವುದು” ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

“ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಹದಿನಾರು ಕೊಳೆಗೇರಿಗಳಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿಕೊಡಲಾಗುತ್ತಿರುವ 1590 ಒಂಟಿ ಮನೆ ಯೋಜನೆ ಮೂರು ತಿಂಗಳಲ್ಲಿ ಪೂರ್ಣಗೊಳಿಸಲು” ಸೂಚನೆ ನೀಡಿದರು.

Advertisements

ಹದಿನಾರು ಕೊಳೆಗೇರಿಗಳಲ್ಲಿ 1590 ಮನೆ ನಿರ್ಮಾಣಕ್ಕೆ 88.59 ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಎನ್ಪಿಎಸ್ ಸಂಸ್ಥೆಗೆ ಗುತ್ತಿಗೆ ನೀಡಿದ್ದು 884 ಮನೆಗಳಿಗೆ ಸಂಬಂಧಿಸಿದಂತೆ 36 ಕೋಟಿ ರೂ. ಪಾವತಿ ಆಗಿದ್ದು, 1.5 ಕೋಟಿ ರೂ. ಬಾಕಿ ಇದ್ದು, ಕಾಮಗಾರಿ ಸ್ಥಗಿತ ಮಾಡಿರುವ ಬಗ್ಗೆ ಸಿಡಿಮಿಡಿಗೊಂಡ ಸಚಿವರು ಮೊದಲು ಕಾಮಗಾರಿ ಪ್ರಾರಂಭಿಸಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ನಂತರ ಬಾಕಿ ಬಿಲ್ ಪಾವತಿಸಲಾಗುವುದು ಎಂದು ಗುತ್ತಿಗೆ ಸಂಸ್ಥೆಯವರಿಗೆ ನಿರ್ದೇಶನ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X