ಭಾಷಣದಲ್ಲಿ ಮಣಿಪುರ ವಿಚಾರ ಪ್ರಸ್ತಾಪಿಸದ ರಾಷ್ಟ್ರಪತಿ: ಕಾಂಗ್ರೆಸ್ ಖಂಡನೆ

Date:

Advertisements

ಜೂನ್ 27ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಮಣಿಪುರ ಹಿಂಸಾಚಾರದ ವಿಚಾರವನ್ನು ಪ್ರಸ್ತಾಪ ಮಾಡದಿರುವುದನ್ನು ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಖಂಡಿಸಿದೆ.

ಈ ಬಗ್ಗೆ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಎಂಪಿಸಿಸಿ ಕಾರ್ಯಾಧ್ಯಕ್ಷ ಕೆ ದೇವಬ್ರತ, “ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಮಣಿಪುರ ವಿಚಾರವನ್ನು ಹೊರಗಿಟ್ಟಿರುವುದು ರಾಜ್ಯದ ಜನತೆಗೆ ಅವಮಾನ ತಂದಿದೆ” ಎಂದು ಹೇಳಿದ್ದಾರೆ.

“ರಾಷ್ಟ್ರಪತಿಯವರು ತಮ್ಮ ಭಾಷಣದಲ್ಲಿ ಮಣಿಪುರ ಹಿಂಸಾಚಾರವನ್ನು ಪ್ರಸ್ತಾಪಿಸುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ಇಂತಹ ವಿಚಾರವನ್ನು ರಾಷ್ಟ್ರಪತಿ ಪ್ರಸ್ತಾಪಿಸದೆ ಇರಲು ಹೇಗೆ ಸಾಧ್ಯವಾಯಿತು” ಎಂದು ಪ್ರಶ್ನಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಅತಂತ್ರ ಸಂಸತ್ತು ಸೃಷ್ಟಿಯಾದರೆ ಸಂವಿಧಾನ ಎತ್ತಿ ಹಿಡಿಯಿರಿ: ರಾಷ್ಟ್ರಪತಿಗೆ 7 ಹೈಕೋರ್ಟ್ ನ್ಯಾಯಾಧೀಶರಿಂದ ಪತ್ರ

“ಮಣಿಪುರದಲ್ಲಿ ಮಾದಕವಸ್ತು ಭಯೋತ್ಪಾದನೆಯಿದೆ ಮತ್ತು ರಾಜ್ಯದ ವಿರುದ್ಧ ಯುದ್ಧ ಮಾಡುವ ಮೂಲಕ ವಿನಾಶವನ್ನು ಸೃಷ್ಟಿಸುತ್ತಿರುವ ಸಶಸ್ತ್ರ ಉಗ್ರಗಾಮಿಗಳ ಒಳಹರಿವು ಇದೆ. ಇದು ದೇಶವು ಎದುರಿಸುತ್ತಿರುವ ಅತ್ಯಂತ ಗಂಭೀರ ಬಿಕ್ಕಟ್ಟಾಗಿದೆ. ಆದರೆ ರಾಷ್ಟ್ರೀಯ ಸಮಸ್ಯೆ ಎಂದು ಪರಿಗಣಿಸಲಾದ ಇಂತಹ ಸಮಸ್ಯೆಯನ್ನು ರಾಷ್ಟ್ರಪತಿಗಳು ಹೇಗೆ ಭಾಷಣದಲ್ಲಿ ಬಿಟ್ಟಿದ್ದಾರೆ” ಎಂದು ಟೀಕಿಸಿದರು.

“ಭಾಷಣವನ್ನು (ರಾಷ್ಟ್ರಪತಿಗಳ) ಕೇಂದ್ರ ಸಚಿವ ಸಂಪುಟವು ಅನುಮೋದಿಸಿದೆ. ಹಾಗಿರುವಾಗ ಪ್ರಧಾನಿ ನರೇಂದ್ರ ಮೋದಿಯವರು ಮಣಿಪುರವನ್ನು ನಿರ್ಲಕ್ಷಿಸುವುದನ್ನು ಮುಂದುವರಿಸುತ್ತಾರೆಯೇ ಎಂದು ನಾವು ಕೇಳಲು ಬಯಸುತ್ತೇವೆ. ಇದು ಈ ವಿಚಾರವನ್ನು ದುರ್ಬಲಗೊಳಿಸುವ ಪಿತೂರಿಯೇ” ಎಂದು ಪ್ರಶ್ನಿಸಿದ್ದಾರೆ.


ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಿನಿಂದ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು ಒಂದು ವರ್ಷ ಕಳೆದರೂ ಅಲ್ಲಲ್ಲಿ ಘರ್ಷಣೆಗಳು ನಡೆಯುತ್ತಿದೆ. ಈ ಹಿಂಸಾಚಾರದಲ್ಲಿ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ಮನೆ ಮಠ ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿ ನೆಲೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X