ಅಮೆರಿಕ: ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ವಿರಾಮ ಘೋಷಿಸಲು ಆಗ್ರಹಿಸಿ ಪ್ರತಿಭಟಿಸುತ್ತಿದ್ದವರ ಬಂಧನ

Date:

Advertisements

ಅಮೆರಿಕದ ವಾಷಿಂಗ್ಟನ್​ ಡಿಸಿಯಲ್ಲಿರುವ ಯುಎಸ್ ಕ್ಯಾಪಿಟಲ್​ ಕಟ್ಟಡಕ್ಕೆ ದಿಢೀರ್​ ಮುತ್ತಿಗೆ ಹಾಕಿದ ನೂರಾರು ಪ್ಯಾಲೆಸ್ತೀನ್ ಪರ ಯಹೂದಿಗಳು ಹಾಗೂ ಬೆಂಬಲಿಗರು, ಇಸ್ರೇಲ್​ ಮತ್ತು ಹಮಾಸ್​ ನಡುವಿನ ಸಂಘರ್ಷಕ್ಕೆ ಕದನ ವಿರಾಮಕ್ಕಾಗಿ ಒತ್ತಾಯಿಸಿ, ಪ್ರತಿಭಟಿಸಿದರು.

ಈ ವೇಳೆ ಸುಮಾರು 300 ಪ್ರತಿಭಟನಾಕಾರರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಕದನ ವಿರಾಮಕ್ಕಾಗಿ ಒತ್ತಾಯಿಸಿ ಪ್ರತಿಭಟನಾಕಾರರು ಉಂಟು ಮಾಡಿದ ಅಡಚಣೆಯ ಬಳಿಕ ಕ್ಯಾಪಿಟಲ್ ಸಂಕೀರ್ಣಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

ವಿವಿಧ ಸಂಘಟನೆಗಳಿಗೆ ಸೇರಿದ ಪ್ರತಿಭಟನಾಕಾರರು ‘ಕದನ ವಿರಾಮ ಬೇಕು’ ಎಂದು ಘೋಷಣೆ ಕೂಗಿದರು. ‘ನಮ್ಮ ಹೆಸರಿನಲ್ಲಿ(ಯಹೂದಿ) ಬೇಡ, ಈಗ ಕದನ ವಿರಾಮ ಘೋಷಿಸಿ’ ಎಂಬ ಫಲಕಗಳನ್ನು ಹೊತ್ತ ಯಹೂದಿ ಸಂಘಟನೆಗಳ ಸದಸ್ಯರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Advertisements

ಗಾಝಾದ ಅಲ್-ಅಹ್ಲಿ ಆಸ್ಪತ್ರೆ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ವಿಚಾರದಲ್ಲಿ ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ ಅಧಿಕಾರಿಗಳು ಆರೋಪ-ಪ್ರತ್ಯಾರೋಪ ಮಾಡುತ್ತಿದ್ದು, ಇದರ ಬೆನ್ನಲ್ಲೇ ಪ್ಯಾಲೆಸ್ತೀನ್​ ಪರ ಬೆಂಬಲಿಗರು ಯುಎಸ್​ ಕ್ಯಾಪಿಟಲ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್​ ಮಿತ್ರ ರಾಷ್ಟ್ರವಾಗಿದೆ. ಅಲ್ಲದೇ, ಹಮಾಸ್ ವಿರುದ್ಧದ ಹೋರಾಟಕ್ಕೆ ಇಸ್ರೇಲ್​ಗೆ ಅಮೆರಿಕ ಬಹಿರಂಗ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಕದನ ತೀವ್ರತೆಗೆ ಅಂತ್ಯವಾಡಬೇಕು ಎಂದು ಆಗ್ರಹಿಸಿ ಯುಎಸ್ ಕ್ಯಾಪಿಟಲ್​ ಕಟ್ಟಡಕ್ಕೆ ದಿಢೀರ್ ಮುತ್ತಿಗೆ ಹಾಕಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X