ಹಿಜಾಬ್ ನಿಷೇಧ | ಕಾಂಗ್ರೆಸ್ ಕೈ ಬಿಡಲಿದೆ ಎಂಬ ವಿಶ್ವಾಸವಿದೆ: ಶಾಸಕಿ ಕನೀಝ್ ಫಾತಿಮಾ

Date:

Advertisements
  • ಹಿಜಾಬ್ ಹೋರಾಟದಲ್ಲಿ ಭಾಗವಹಿಸಿದ್ದ ಕನೀಝ್ ಫಾತಿಮಾ
  • ರಾಜ್ಯದ ಏಕೈಕ ಮಹಿಳಾ ಮುಸ್ಲಿಂ ಜನಪ್ರತಿನಿಧಿಯ ಮನವಿ


ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹೇರಲಾಗಿರುವ ಹಿಜಾಬ್ ನಿಷೇಧವನ್ನು ಕಾಂಗ್ರೆಸ್ ಸರ್ಕಾರ ಕೈ ಬಿಡಲಿದೆ ಎನ್ನುವ ವಿಶ್ವಾಸವನ್ನು ಶಾಸಕಿ ಕನೀಝ್ ಫಾತಿಮಾ ವ್ಯಕ್ತಪಡಿಸಿದರು.

ಕಲಬುರಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕಲಬುರಗಿ ಉತ್ತರ ಕ್ಷೇತ್ರದ ಶಾಸಕ ಕನೀಝ್ ಫಾತಿಮಾ, “ದೇವರು ಇಚ್ಛಿಸಿದರೆ ನಾವು ಮುಂದಿನ ದಿನಗಳಲ್ಲಿ ಹಿಜಾಬ್ ನಿಷೇಧ ಕೈಬಿಡಲಿದ್ದೇವೆ ಹಾಗೂ ಈ ನಿಷೇಧದಿಂದ ಶಾಲೆಗಳಿಂದ ದೂರ ಉಳಿದಿರುವ ಬಾಲಕಿಯರನ್ನು ಮರಳಿ ಶಾಲೆಗೆ ತರಲು ನಮಗೆ ಸಾಧ್ಯವಾಗಬಹುದು” ಎಂದು ಹೇಳಿದ್ದಾರೆ.

ಜೊತೆಗೆ “ಈ ಗಲಭೆ ಹಿನ್ನೆಲೆಯಲ್ಲಿ ನಾವು ನಮ್ಮ ಎರಡು ಅಮೂಲ್ಯ ವರ್ಷಗಳನ್ನು ಕಳೆದುಕೊಂಡಿದ್ದೇವೆ,” ಎಂದು ಫಾತಿಮಾ ಬೇಸರದಿಂದ ಹೇಳಿದರು.

Advertisements

ಚುನಾವಣೆಯಲ್ಲಿನ ರಾಜ್ಯದಲ್ಲಿ ಕಾಂಗ್ರೆಸ್ ನ ಗೆಲುವಿನ ಶ್ರೇಯವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದ ಫಾತಿಮಾ, “ಖರ್ಗೆ ಅವರು ಪಕ್ಷದ ಅಧ್ಯಕ್ಷರಾದಂದಿನಿಂದ ನಾವು ಬಹಳ ಕಷ್ಟಪಟ್ಟು ಪಕ್ಷಕ್ಕಾಗಿ ಶ್ರಮಿಸಿದ್ದೇವೆ. ಅವರ ಭಾಷಣಗಳು ಜನರ ಮೇಲೆ ದೊಡ್ಡ ಪರಿಣಾಮ ಬೀರಿವೆ, ಅದರ ಫಲಿತಾಂಶ ಈಗ ನಮ್ಮ ಮುಂದೆ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಕರ್ನಾಟಕದ ಪ್ರಬುದ್ಧ ಮತದಾರರಿಂದ ದೇಶಕ್ಕೆ ಬಲವಾದ ಸಂದೇಶ :…

ಮಾಜಿ ಸಚಿವ ದಿವಂಗತ ಖಮರುಲ್ ಇಸ್ಲಾಂ ಅವರ ಪತ್ನಿ ಫಾತಿಮಾ, 2018ರಲ್ಲಿ ಚುನಾವಣಾ ಕಣಕ್ಕಿಳಿದಿದ್ದರು. ಇದರ ಜೊತೆಜೊತೆಗೆ ಕಲಬುರಗಿಯಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದರು. ಹಾಲಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕರಾಗಿರುವ ಇವರು ಈ ಸಾಲಿನ ಚುನಾವಣೆಯಲ್ಲಿ ಗೆದ್ದ ಏಕೈಕ ಮುಸ್ಲಿಮ್ ಮಹಿಳಾ ಶಾಸಕಿ ಎನಿಸಿಕೊಂಡಿದ್ದಾರೆ.

ಈ ಚುನಾವಣೆಯಲ್ಲಿ ಇವರು ಬಿಜೆಪಿಯ ಚಂದ್ರಕಾಂತ್ ಬಿ ಪಾಟೀಲ್ ಅವರನ್ನು 2,712 ಮತಗಳ ಅಂತರದಿಂದ ಸೋಲಿಸಿದ್ದರು. ಫಾತಿಮಾ ಅವರ ಆಶಯವನ್ನು ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರ ಯಾವ ರೀತಿ ನೋಡಲಿದೆ ಎನ್ನುವ ಕುತೂಹಲ ಎಲ್ಲರದ್ದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X