ನಾನು ಪದವಿ ಆಕಾಂಕ್ಷಿಯಲ್ಲ; ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ: ಶೆಟ್ಟರ್

Date:

Advertisements
  • ಪಕ್ಷ ಕೊಡುವ ಜವಾಬ್ದಾರಿ ನಿಭಾಯಿಸುವೆ ಎಂದ ಮಾಜಿ ಸಿಎಂ ಶೆಟ್ಟರ್
  • ಸೋತರೂ ಜಗದೀಶ್ ಶೆಟ್ಟರ್‌ಗೆ ಗೌರವ ಸ್ಥಾನಮಾನ ನೀಡಲಿರುವ ಕಾಂಗ್ರೆಸ್

“ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಆದರೆ ಹೈಕಮಾಂಡ್ ಕರೆದು ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ನಿಯೋಜಿತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನ ಭೇಟಿಯಾದ ಜಗದೀಶ್ ಶೆಟ್ಟರ್ ಅವರನ್ನು ಅಭಿನಂದಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದ ಹಿನ್ನಲೆಯಲ್ಲಿ ಅವರನ್ನು ಅಭಿನಂದನೆ ಸಲ್ಲಿಸಲು ಬಂದಿದ್ದೆ. ಬೇರೆ ಯಾವುದೇ ಚರ್ಚೆ ಮಾಡಿಲ್ಲ” ಎಂದರು.

Advertisements

“ನಾನು ಪಕ್ಷದ ನಿಷ್ಠಾವಂತ ಸದಸ್ಯ. ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಲ್ಲ. ಕಾಂಗ್ರೆಸ್ ಮತ್ತು ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ” ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ; ಸಚಿವ ಸಂಪುಟ ರಚನೆಗೆ ಸಿಎಂ-ಡಿಸಿಎಂ ಕಸರತ್ತು

ಜಗದೀಶ್ ಶೆಟ್ಟರ್ ಸೋತರೂ ಅವರಿಗೆ ಗೌರವಯುತ ಸ್ಥಾನಮಾನ ಕಲ್ಪಿಸಲು ಕಾಂಗ್ರೆಸ್ ಯೋಚಿಸಿದ್ದು, ಶೀಘ್ರವೇ ಆ ಕುರಿತು ನಿರ್ಧಾರವೊಂದನ್ನು ಪ್ರಕಟಿಸಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಬಿಜೆಪಿ ವಿರುದ್ದದ ಕಾಂಗ್ರೆಸ್ ಹೋರಾಟದಲ್ಲಿ ಕೈ ಪಾಳಯದೊಂದಿಗೆ ಕೈ ಜೋಡಿಸಿದ್ದ ಜಗದೀಶ್ ಶೆಟ್ಟರ್, ಕಮಲ ಪಕ್ಷ ತೊರೆದು ಬಂದ ಕಾರಣ ಧಾರವಾಡ ಭಾಗದಲ್ಲಿ ಕಾಂಗ್ರೆಸ್ ಗೆಲುವು ಇನ್ನಷ್ಟು ಸಲೀಸಾಯಿತು ಎನ್ನುವುದು ಆ ಭಾಗದ ನಾಯಕರ ಮಾತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X