ನಾನು ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ: ಶರದ್‌ ಪವಾರ್

Date:

Advertisements
  • ರಾಮ್ ತಕವಾಲೆ ಅವರ ಸಂತಾಪ ಸಭೆಯಲ್ಲಿ ಶರದ್‌ ಪವಾರ್ ಮಾತು
  • 2024ರಲ್ಲಿ ನಡೆಯಲಿರುವ ಲೋಕಸಭೆ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ

ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಅವರು ತಾವು ಪ್ರಧಾನ ಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ ಎಂದು ಹೇಳಿದ್ದಾರೆ.

ಪ್ರತಿಪಕ್ಷಗಳು ದೇಶದ ಒಳಿತಿಗಾಗಿ ಕೆಲಸ ಮಾಡುವ ನಾಯಕತ್ವ ಬಯಸುತ್ತವೆ. ಈ ನಿಟ್ಟಿನಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಪುಣೆ ವಿಶ್ವವಿದ್ಯಾಲಯದ ಉಪಕುಲಪತಿ ರಾಮ್ ತಕವಾಲೆ ಅವರ ಸಂತಾಪ ಸಭೆಯಲ್ಲಿ ಶರದ್‌ ಪವಾರ್‌ ಭಾಗವಹಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿಪಕ್ಷಗಳು ಒಗ್ಗೂಡಿದರೆ ಯಾರಾದರೂ ಒಬ್ಬರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದು ಸ್ವಲ್ಪ ಕಷ್ಟವಾಗುತ್ತದೆ” ಎಂದು ಹೇಳಿದರು.

Advertisements

“ನಾನು ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದ್ದರಿಂದ ನಾನು ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ” ಎಂದು ಪವಾರ್‌ ತಿಳಿಸಿದರು.

‍ಶರದ್‌ ಪವಾರ್‌ ಅವರು ಮಹಾ ವಿಕಾಸ್ ಅಘಾಡಿಯ ಭಾಗವಾಗಿರುವ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಜೊತೆ ಸ್ಥಾನಗಳ ಹಂಚಿಕೆ ಕುರಿತು ಮಾತನಾಡಿ, ”ಇತ್ತೀಚೆಗೆ ನನ್ನ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಮಹಾ ವಿಕಾಸ್ ಅಘಾಡಿ ನಾಯಕರು ಈ ಬಗ್ಗೆ ನಿರ್ಧರಿಸುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

“ಉದ್ಧವ್ ಠಾಕ್ರೆ, ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾನು ಒಟ್ಟಿಗೆ ಕುಳಿತು ಸ್ಥಾನಗಳ ಹಂಚಿಕೆ ಬಗ್ಗೆ ಹೆಚ್ಚಿನ ಚರ್ಚೆ ನಡೆಸುತ್ತೇವೆ” ಎಂದು ಶರದ್‌ ಪವಾರ್ ತಿಳಿಸಿದ್ದಾರೆ.

2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮುಂದಿನ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯೂ ನಡೆಯಲಿದೆ.

ಅನೇಕ ರಾಜ್ಯಗಳ ವಿಧಾನಸಭೆ ಚುನಾವಣೆಯು ಈ ವರ್ಷ ನಡೆಯುತ್ತಿದೆ. ಈ ಚುನಾವಣೆಗಳಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಪ್ರತಿಪಕ್ಷಗಳನ್ನು ಒಂದುಗೂಡಿಸಲು ಪವಾರ್‌ ಸಹ ಪ್ರಯತ್ನಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಕಾಂಗ್ರೆಸ್‌ ನಾಯಕರು ಹಾಗೂ ಇತರ ಪಕ್ಷಗಳ ನಾಯಕರೊಂದಿಗೆ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X