ನಾನು ಎರಡನೇ ಬಾರಿ ಸಿಎಂ ಆಗಿದ್ದು ಬಿಜೆಪಿಯವರಿಗೆ ಹೊಟ್ಟೆಯುರಿ: ಸಿದ್ದರಾಮಯ್ಯ

Date:

Advertisements

ಸುಮ್ಮ ಸುಮ್ಮನೆ ರಾಜಕೀಯ ಕಾರಣಕ್ಕೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಿಜೆಪಿಯ ಎಲ್ಲರಿಗೂ ಹೊಟ್ಟೆಯುರಿ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ. ಇಂಥ ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಅವರು ಇಂದು (ಜು.11) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಮುಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಅವರು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

“ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ” ಎಂದು ಹೇಳಿದರು.

Advertisements

“ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿಯೇ ಪ್ರತಿಭಟನೆ ಮಾಡಲಿ. ಮುಡಾ ಬಗ್ಗೆ ತನಿಖೆ ಈಗಾಗಲೇ ನಡೆಯುತ್ತಿದೆ. ಬದಲಿ ನಿವೇಶನ ನೀಡಿರುವುದು ಕಾನೂನುಬದ್ಧವಾಗಿದೆ ಎನ್ನುವುದು ನಮ್ಮ ವಾದ. ಅವರು ಕಾನೂನುಬಾಹಿರವಾಗಿದೆ ಎಂದು ಹೇಳುತ್ತಾರೆ. ಹಾಗಿದ್ದರೆ ದಾಖಲೆ ತೋರಿಸಲಿ” ಎಂದು ಸವಾಲು ಹಾಕಿದರು.

ಅಕ್ರಮವೇನಾಗಿದೆ?

“ಜಿಲ್ಲಾಧಿಕಾರಿಗಳು 2005 ರಲ್ಲಿ ಭೂ ಪರಿವರ್ತನೆ ಮಾಡಿದ್ದು ನಿವೇಶನ ಮಾಡುವ ಮುನ್ನ ಜಮೀನು ಕೃಷಿ ಭೂಮಿಯೇ. ಮಲ್ಲಿಕಾರ್ಜುನ ಸ್ವಾಮಿ ನನ್ನ ಭಾವಮೈದುನ. 2010 ರಲ್ಲಿ ದಾನಪತ್ರ ಕೊಟ್ಟಿದ್ದಾರೆ. ಇದರಲ್ಲಿ ಅಕ್ರಮವೇನಾಗಿದೆ” ಎಂದು ಪ್ರಶ್ನಿಸಿದರು.

ಮುಡಾ ಸದಸ್ಯರೆಲ್ಲ ಏನು ಮಾಡುತ್ತಿದ್ದರು?

“2014 ರಲ್ಲಿ ಮುಡಾ ಜಮೀನು ಅಲ್ಲದೆ ಹೋದರೂ ಕೂಡ ನಿವೇಶನ ಮಾಡಿ ಹಂಚಿದ್ದಾರೆ. ಅದಕ್ಕೆ ನಾವು ಸುಮ್ಮನೆ ಬಿಡಬೇಕಾ? ಬದಲಿ ನಿವೇಶನ ಕೇಳಿದ್ದು, ಇಂಥ ಜಾಗದಲ್ಲಿಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಆಗ ಮುಡಾ ಸದಸ್ಯರೆಲ್ಲಾ ಏನು ಮಾಡುತ್ತಿದ್ದರು? ಬಿಜೆಪಿ ಸರ್ಕಾರವೇ ಇತ್ತು ಆಗ. ಕಾನೂನು ಪ್ರಕಾರ ನಮಗೆ ಬೇರೆ ಜಮೀನು ಕೊಡಬೇಕು. ಇದೇ ರೀತಿಯಲ್ಲಿ ಸುಂದರಮ್ಮ ಪ್ರಕರಣದಲ್ಲಿ ಅವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಉಚ್ಚ ನ್ಯಾಯಾಲಯ ಅಷ್ಟು ಜಾಗವನ್ನೂ ಕೊಡಲು ಆದೇಶಿಸಿ ಒಂದು ಲಕ್ಷ ರೂಪಾಯಿ ದಂಡವನ್ನೂ ಮುಡಾಗೆ ಹಾಕಿದೆ” ಎಂದರು.

“ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೂಡಾ ತಪ್ಪು ಮಾಡಿದ್ದರೆ ಯಾರು ಜವಾಬ್ದಾರರು? ಸಿದ್ದರಾಮಯ್ಯ ಜವಾಬ್ದಾರರೇ? ಒಂದು ವೇಳೆ ಇದನ್ನು ರದ್ದು ಮಾಡಿದರೆ. ಭೂಸ್ವಾಧೀನ ಕಾಯ್ದೆ ಪ್ರಕಾರ ಪರಿಹಾರ ನೀಡಬೇಕಲ್ಲವೇ. ಅದರ ಪ್ರಕಾರ 57 ಕೋಟಿಯಾದರೆ ಬಡ್ಡಿ ಸೇರಿಸಿ 62 ಕೋಟಿಯಾಗುತ್ತದೆ. ಮೂಡಾದವರು 62 ಕೋಟಿ ಕೊಡಬೇಕಾಗುತ್ತದೆ. 2021ರಲ್ಲಿ ನಾನು ವಿರೋಧ ಪಕ್ಷದ ನಾಯಕ ಇದ್ದೆ. ಆಗ ನಾನು ಹೇಳಿದ್ದನ್ನು ಕೇಳಿ ಮಾಡುತ್ತಿದ್ದರೆ” ಎಂದು ಪ್ರಶ್ನಿಸಿದರು.

ನಮ್ಮ ಪ್ರಕರಣ ಹಗರಣವಲ್ಲ: ಸಿಎಂ ಸ್ಪಷ್ಟನೆ

“ಮುಡಾ ಮೊದಲಿನಿಂದಲೂ ಗಬ್ಬೆದ್ದು ಹೋಗಿದ್ದು, ಅದನ್ನು ಸ್ವಚ್ಛ ಮಾಡಬೇಕಿದೆ. ನಮ್ಮ ಪ್ರಕರಣ ಹಗರಣವಲ್ಲ. ನಮ್ಮ ಜಮೀನು ಬಳಕೆ ಮಾಡಿದ್ದಾರೆ. ಅವರ ಪ್ರಕರಣದಲ್ಲಿ ಭೂಮಿ ಕಳೆದುಕೊಂಡವರು ಅಥವಾ 50: 50 ಅನುಪಾನದಲ್ಲಿ ಜಮೀನು ಕೊಟ್ಟಿದ್ದಾರೆ. ನಾವು ಹಾಗೇ ಕೊಟ್ಟಿದ್ದೇವೆಯೇ? ಈ ವತ್ಯಾಸವನ್ನು ಅರ್ಥಮಾಡಿಕೊಳ್ಳಬೇಕು. ನಿವೇಶನ ಮಾಡಿದರೆ ಮೊದಲು 60:40 ಅನುಪಾತವಿತ್ತು. ಈಗ 50: 50 ಮಾಡಿದ್ದಾರೆ ಇದನ್ನು ಯಾರು ಮಾಡಿದ್ದು?” ಎಂದರು.

ದುರುಪಯೋಗ ತಡೆಯಲು ತನಿಖೆ

“2020ನೇ ಇಸವಿಯಲ್ಲಿ ಮುಡಾ ಅಲ್ಲದೇ ಬೇರೆ ಅಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ 50:50 ಅನುಪಾತ ಜಾರಿಗೆ ಬಂದಿದೆ. ಇದರಿಂದ ಅಭಿವೃದ್ಧಿ ಪ್ರಾಧಿಕಾರಗಳಿಗೆ ಲಾಭವಾಗುತ್ತದೆಯೇ ಹೊರತು ನಷ್ಟವಾಗುವುದಿಲ್ಲ. ಭೂಮಾಲೀಕರಿಗೆ ನಷ್ಟವುಂಟಾಗಬಾರದು ಎಂದು ತನಿಖೆ ನಡೆಸಲಾಗುತ್ತಿದೆ. ಮೂಡಾ ಆಯುಕ್ತರು ಮತ್ತಿತರರು ಇದನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ಈ ದುರುಪಯೋಗ ತಡೆಯಲು ತನಿಖೆ ನಡೆಸಿ ಸರಿಮಾಡುತ್ತೇವೆ” ಎಂದು ಹೇಳಿದರು.

ವಾಲ್ಮೀಕಿ ಹಗರಣ: ಮೂರು ಸಂಸ್ಥೆಗಳಿಂದ ತನಿಖೆ

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ. ಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ರೂ. ವರ್ಗಾವಣೆ ಆಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ. ಸಿಬಿಐ, ಎಸ್.ಐ ಟಿ ಮತ್ತು ಇ. ಡಿ. ವತಿಯಿಂದ ಮೂರು ತನಿಖೆಗಳಾಗುತ್ತಿವೆ. ತನಿಖೆ ವರದಿ ಇನ್ನೂ ಬಂದಿಲ್ಲ” ಎಂದರು.

ಖಜಾನೆಯಿಂದ ಹಣ ವರ್ಗಾವಣೆಯಾಗಿರುವುದು ಇಲಾಖೆಯ ಗಮನಕ್ಕೆ ಬರಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ. “ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ. ಪ್ರಕರಣದ ತನಿಖೆ ಇನ್ನೂ ಮುಗಿದೇ ಇಲ್ಲ. ತನಿಖೆ ಮಾಡಿ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X