ಇಂತಹದ್ದೇ ಖಾತೆ ಬೇಕೆಂದು ಕೇಳುವುದಿಲ್ಲ: ರಾಮಲಿಂಗಾರೆಡ್ಡಿ

Date:

  • ಶನಿವಾರ ಪ್ರಮಾಣ ವಚನ ಸ್ವೀಕರಿಸಲಿರುವ ಮಾಜಿ ಗೃಹ ಸಚಿವ
  • ಜನಪರ ಆಡಳಿತ ನೀಡುವುದೇ ನಮ್ಮ ಗುರಿ ಎಂದ ರಾಮಲಿಂಗಾರೆಡ್ಡಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿಸುವ ಮಾಜಿ ಸಚಿವ ರಾಮಲಿಂಗಾರೆಡ್ಡಿ, ತಮಗೆ ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನಗೆ ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಇಡುವುದಿಲ್ಲ. ನನ್ನ ಮೇಲೆ ನಂಬಿಕೆ ಇರಿಸಿ ಯಾವುದೇ ಖಾತೆಕೊಟ್ಟರೂ ನಿಭಾಯಿಸುವೆ” ಎಂದು ಹೇಳಿದರು.

ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತೇವೆ. ಆದಷ್ಟು ಬೇಗ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮಾಡುತ್ತೇವೆ. ಮಳೆ ಸಂದರ್ಭದಲ್ಲಿ ಜನರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಸುತ್ತೇವೆ” ಎಂದು ರಾಮಲಿಂಗರೆಡ್ಡಿ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಂದ ಹಾಗೆ ಇಂದು ಸಿಎಂ ಮತ್ತು ಡಿಸಿಎಂ ಜೊತೆಗೆ ನೂತನ ಕಾಂಗ್ರೆಸ್ ಸರ್ಕಾರದ ಭಾಗವಾಗಿ 8 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾಗಾಂಧಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಈಹಿನ್ನೆಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಜಾನಪದಾ ಕಲಾತಂಡಗಳು ಹಾಗೂ ಅಭಿಮಾನಿಗಳು ಮೆರವಣಿ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಹರಿದು ಬರುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

ಮತ್ತೊಂದು ಕಡೆ ನಿಯೋಜಿತ ಸಿಎಂ ಸಿದ್ದರಾಮಯ್ಯ, ಪದಗ್ರಹಣದ ಬಳಿಕ ತಮ್ಮ ಮೊದಲ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿರುವ ಕಾರಣ, ತಮ್ಮ ನಿವಾಸದಲ್ಲಿ ಹಣಕಾಸು ಇಲಾಖೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖರ ಸಭೆ ನಡೆಸಿ ಆರ್ಥಿಕ ಲೆಕ್ಕಾಚಾರದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ; ಡಿಕೆ ಶಿವಕುಮಾರ್‌ಗೆ ಕುಮಾರಸ್ವಾಮಿ ಪ್ರತಿ ಸವಾಲು

"ಮಿಸ್ಟರ್​ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ...

ಯಾರಿಗೂ ಮುಖ ತೋರಿಸದ ಸನ್ನಿವೇಶ ಕುಮಾರಸ್ವಾಮಿಗೆ ನಿರ್ಮಾಣವಾಗಲಿದೆ: ಡಿಕೆ ಶಿವಕುಮಾರ್‌

ಕುಮಾರಸ್ವಾಮಿ ಅವರು ನನ್ನ ಮೇಲೆ ಮನಬಂದಂತೆ ಆರೋಪಿಸುವುದನ್ನು ನೋಡಿಯೂ ನಮ್ಮ ಸಮುದಾಯಕ್ಕಾಗಿ...

ಇಂಫಾಲ| ಮಣಿಪುರವನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ ಎಂದ ಅಮಿತ್ ಶಾ!

ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ...

ರೇಟ್ ಫಿಕ್ಸ್, ಬ್ಲ್ಯಾಕ್‌ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್

"ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ,...