ನಿಖಿಲ್ ಅಭ್ಯರ್ಥಿಯಾದರೆ ನನ್ನ ಬೆಂಬಲ, ನೀವೇ ಮುಂದೆ ನಿಂತು ಉಪಚುನಾವಣೆ ನಡೆಸಿ: ಹೆಚ್‌ಡಿಕೆಗೆ ಸಿಪಿವೈ ಮನವಿ

Date:

Advertisements

ಚನ್ನಪಟ್ಟಣ ಉಪಚುನಾವಣೆಯಲ್ಲಿ​​ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ‌ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಹೆಚ್ ​​ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್​​ ಭಾನುವಾರ ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ, ಅಭ್ಯರ್ಥಿ ಆಯ್ಕೆ ಸಂಬಂಧ ಒಂದು ವಾರದಲ್ಲಿ ಸ್ಪಷ್ಟತೆ ನೀಡುವಂತೆ ಕುಮಾರಸ್ವಾಮಿ ಬಳಿ ಯೋಗೇಶ್ವರ್ ಮನವಿ ಮಾಡಿದ್ದಾರೆ.

ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಅಭ್ಯರ್ಥಿ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ನೀವೇ ಮುಂದೆ ನಿಂತು ಉಪಚುನಾವಣೆಯನ್ನು​ ನಡೆಸಬೇಕು ಎಂದು ಕುಮಾರಸ್ವಾಮಿ ಬಳಿ ಯೋಗೇಶ್ವರ್ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಪಕ್ಷ ತಯಾರಿ ಆರಂಭಿಸಿದೆ. ಅಭ್ಯರ್ಥಿಯನ್ನು ಬೇಗ ಘೋಷಿಸಿದರೆ ನಾವು ಸಿದ್ಧತೆ ಆರಂಭಿಸಬಹುದು ಎಂದು ಯೋಗೇಶ್ವರ್ ಹೇಳಿದ್ದಾರೆ. ಇದೇ ವೇಳೆ, ಈ ವಾರ ಬೆಂಗಳೂರಿಗೆ ಬರುತ್ತೇನೆ. ಮತ್ತೊಮ್ಮೆ ಚರ್ಚಿಸಿ ನಿರ್ಧರಿಸೋಣ ಎಂದು ಕುಮಾರಸ್ವಾಮಿ ಉತ್ತರಿಸಿದ್ದಾರೆ ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಮತ್ತೊಂದೆಡೆ, ಕುಮಾರಸ್ವಾಮಿ ಕರ್ಮಭೂಮಿಯಲ್ಲಿ ಸೋಲಿನ ರುಚಿ ತೋರಿಸಲು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಪಣ ತೊಟ್ಟಿದ್ದು, ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ. ಡಿಕೆ ಸಹೋದರರ ವಿರುದ್ಧ ಚನ್ನಪಟ್ಟಣ ಮಿನಿ ಸಮರದಲ್ಲಿ ಗೆಲ್ಲಲು ಪುತ್ರ ನಿಖಿಲ್‌ ಅವರಿಗೆ ಕುಮಾರಸ್ವಾಮಿ ಜವಾಬ್ದಾರಿ ವಹಿಸಲಿದ್ದಾರೆ ಎನ್ನಲಾಗಿದೆ.

ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಬದಲು ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ಎನ್​​ಡಿಎ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಲು ಕೆಲಸ ಮಾಡಲು ನಿಖಿಲ್ ಮುಂದಾಗಿದ್ದಾರೆ ಎನ್ನಲಾಗಿದೆ.

ಡಿ ಕೆ ಶಿವಕುಮಾರ್ ಈಗಾಗಲೆ ಚನ್ನಪಟ್ಟಣ ಉಪ ಸಮರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ನಿರಂತರವಾಗಿ ಪ್ರವಾಸ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಭಾನುವಾರದಿಂದ ನಿಖಿಲ್ ಕೂಡ ಚನ್ನಪಟ್ಟಣ ಪ್ರವಾಸ ಆರಂಭಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ರಾಮನಗರ ಜಿಲ್ಲೆಯಲ್ಲಿ ಇದ್ದ ಒಂದು ಕ್ಷೇತ್ರವನ್ನು ಜೆಡಿಎಸ್ ಕಳೆದುಕೊಳ್ಳಬೇಕಾಗುತ್ತದೆ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದರೂ ಇಡೀ ಜಿಲ್ಲೆಯ ಹಿಡಿತ ಕಳೆದುಕೊಳ್ಳಬೇಕಾಗುತ್ತದೆ. ಕುಮಾರಸ್ವಾಮಿಯ ಕರ್ಮಭೂಮಿಯಲ್ಲಿ ಸೋಲು ಉಂಟಾದರೆ ಕಾರ್ಯಕರ್ತರು ಚದುರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲ್ಲುವ ಅನಿವಾರ್ಯತೆ ಎದುರಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X