ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆಯುತ್ತೇನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Date:

Advertisements

ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಅವರ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ” ಎಂದರು. ‌

“ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆಯಾಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಹಾರ ಹಕ್ಕಿಗೆ ಮಂಡ್ಯ ನಾಂದಿ; ಮುಂದಿದೆ ಸರ್ಕಾರಿ ಸವಾಲು

“ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ? ಎಷ್ಟಾಗಿದೆ ಗಾಯ. ಪೊಲೀಸರು ಎನ್‌ಕೌಂಟರ್ ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವಾ? ಇಡೀ ಕರ್ನಾಟಕದ ಜನತೆ ಅವರಿಗೆ ಛೀಮಾರಿ ಹಾಕುತ್ತಿದೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿ ಯಾಗುತ್ತೇನೆ” ಎಂದು ತಿಳಿಸಿದರು.

ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X