ಇದ್ರೀಷ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣ| ಆರೋಪಿ ಪುನೀತ್ ಕೆರೆಹಳ್ಳಿ ಪೊಲೀಸ್‌ ವಶಕ್ಕೆ

Date:

  • 7 ದಿನ ಪೊಲೀಸ್ ವಶಕ್ಕೆ ನೀಡಿದ ಕನಕಪುರ ನ್ಯಾಯಾಲಯ
  • ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದ ಪೊಲೀಸರು

ಜಾನುವಾರುಗಳ ದಲ್ಲಾಳಿ ವ್ಯಾಪಾರ ಮಾಡುತ್ತಿದ್ದ ಇದ್ರೀಶ್ ಪಾಷಾ ಸಾವಿನ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿಕನಕಪುರ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಳೆದ ಮಾರ್ಚ್‌ 31 ರಂದು ಕನಕಪುರದ ಸಾತನೂರು ಬಳಿ ದನಗಳನ್ನು ಸಾಗಸುತ್ತಿದ್ದ ಇದ್ರೀಶ್‌ ಪಾಷಾ ಅವರನ್ನು ಅಡ್ಡಗಟ್ಟಿದ್ದ ಪಿನೀತ್‌ ಕೆರೆಹಳ್ಳಿ ಮತ್ತು ತಂಡ ಪಾಷಾ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಯ ವಿಡಿಯೋವನ್ನು ಆರೋಪಿಗಳೇ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ಏಪ್ರಿಲ್‌ 1 ರಂದು ವಾಹನ ತಡೆಯೊಡಿದ್ದ ಕೂಗಳತೆ ದೂರದಲ್ಲಿ ಇದ್ರೀಶ್‌ ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಇದ್ರೀಶ್‌ ಪೋಷಕರು ಪುನೀತ್‌ ಮತ್ತು ಸಹಚರರ ಮೇಲೆ ಸಾತನೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 341, 504, 506, 324, 302, 304 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? : ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಅವರನ್ನು ಮೂರ್ನಾಲ್ಕು ದಿನಗಳ ನಂತರ, ಸಾತನೂರು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದರು.

ಪ್ರಕರಣದ ಸಂಬಂಧ ಆರೋಪಿಗಳನ್ನು ವಿಚಾರಣೆಗೆ ಒಳಪಸುವ ಉದ್ದೇಶದಿಂದ ಐವರನ್ನೂ ತಮ್ಮ ವಶಕ್ಕೆ ನೀಡುವಂತೆ ಸಾತನೂರು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ಪೊಲೀಸರು ಮನವಿ ಪುರಸ್ಕರಿಸಿದ ಸುರೇಶ ಅಪ್ಪಣ್ಣ ಸವದಿ ನೇತೃತ್ವದ ನ್ಯಾಯಾಲಯವು ಐವರು ಆರೋಪಿಗಳನ್ನು 7 ದಿನಗಳ ಕಾಲ ಸಾತನೂರು ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...