ಕಾವೇರಿ ಪ್ರತಿಭಟನೆ | ಅಹಿತಕರ ಘಟನೆ ನಡೆದರೆ ಕಾನೂನು ಕ್ರಮ: ಸಚಿವ ಪರಮೇಶ್ವರ್‌ ಎಚ್ಚರಿಕೆ

Date:

Advertisements
  • ಆರ್‌ಎಎಫ್‌ ನಿಯೋಜನೆ ಸೇರಿ, ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದೇವೆ
  • ಪ್ರತಿಭಟನೆ ಮಾಡಲು ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಬೇಡ

ರಾಜ್ಯದ ನೆಲ ಜಲದ ವಿಚಾರದಲ್ಲಿ ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡಬಹುದು. ಆದರೆ, ಸಾರ್ವಜನಿಕ ಆಸ್ತಿಗಳಿಗೆ ನಷ್ಟ ಮಾಡಬಾರದು. ಮಂಡ್ಯ ಬಂದ್‌ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್‌) ನಿಯೋಜನೆ ಸೇರಿ, ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಪ್ರತಿಭಟನಾಕಾರರು ಜನ ಸಾಮಾನ್ಯರಿಗೆ ತೊಂದರೆ ಮಾಡಬಾರದು ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ಮನವಿ ಮಾಡುತ್ತೇನೆ. ಒಂದು ವೇಳೆ ಅಹಿತಕರ ಘಟನೆಗಳು ನಡೆದರೆ ಪೊಲೀಸರು ಕಾನೂನು ಕ್ರಮಕೈಗೊಳ್ಳುತ್ತಾರೆ” ಎಂದು ಎಚ್ಚರಿಸಿದರು.

“ಕೆಆರ್‌ಎಸ್‌, ಮಂಡ್ಯ ಜಿಲ್ಲೆ ಮತ್ತು ಪ್ರತಿಭಟನೆ ನಡೆಯುವ ಕಡೆಗಳಲ್ಲಿ ಬಂದೋಬಸ್ತ್‌ ವ್ಯವಸ್ಥೆ ಮಾಡಿದ್ದೇವೆ. ಕಾನೂನು ಬಾಹಿರ ಚಟುವಟಿಕೆಗಳು ನಡೆಯುವುದಿಲ್ಲ ಎಂಬ ನಂಬಿಕೆ ಇದೆ. ಒಂದು ವೇಳೆ ಶಾಂತಿಗೆ ಭಂಗ ತಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕಾವೇರಿ | ಸರ್ಕಾರ ಉಡಾಫೆ ಮುಂದುವರೆಸಿದರೆ ಜನ ದಂಗೆ ಏಳುತ್ತಾರೆ : ಬೊಮ್ಮಾಯಿ ಎಚ್ಚರಿಕೆ

ಮಂಡ್ಯ ಬಂದ್‌ಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, “ಪ್ರತಿಭಟನೆ ಮಾಡಲು ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಮಾಡಬಾರದು. ಬಿಜೆಪಿ ಜವಾಬ್ದಾರಿಯಿಂದ ವರ್ತಿಸುತ್ತದೆ ಎಂದು ಭಾವಿಸುತ್ತೇನೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದರಲ್ಲಿ ಅರ್ಥವಿಲ್ಲ” ಎಂದು ಹೇಳಿದರು.

“ಬಿಜೆಪಿಯವರು ಬೇರೆ ವಿಚಾರಗಳಲ್ಲಿ ರಾಜಕೀಯ ಮಾಡಲಿ ನಮ್ಮದೇನು ಅಭ್ಯಂತರವಿಲ್ಲ. ನೀರು ಬಿಡುವ ಮೊದಲು ಮತ್ತು ನಂತರ ಒಟ್ಟು ಎರಡು ಬಾರಿ ಸರ್ವ ಪಕ್ಷಗಳ ಸಭೆಯನ್ನು ಕರೆದಿದ್ದೆವು. ಸರ್ಕಾರ ಜತೆ ಇರುತ್ತೇವೆ ಎಂದು ವಿರೋಧಪಕ್ಷಗಳು ಭರವಸೆ ನೀಡಿವೆ. ಆ ಪ್ರಕಾರ ನಡೆದುಕೊಳ್ಳಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X