ಪಾಕಿಸ್ತಾನವನ್ನು ಶತ್ರುರಾಷ್ಟ್ರ ಎಂದು ಘೋಷಿಸಲಿ: ಬಿಜೆಪಿಗೆ ಬಿ ಕೆ ಹರಿಪ್ರಸಾದ್‌ ಸವಾಲು

Date:

Advertisements

ಬಿಜೆಪಿಗೂ ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ, ಆವೇಷ ಇದ್ದರೆ ‘ಶತ್ರುರಾಷ್ಟ್ರ’ ಎಂದು ಘೋಷಿಸಲಿ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಸವಾಲು ಹಾಕಿದ್ದಾರೆ.

ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಒಕ್ಕೂಟ ಭಾರತವನ್ನು ಇಬ್ಭಾಗ ಮಾಡಿದ ಮೊಹಮ್ಮದ್ ಅಲಿ ಜಿನ್ನಾಗೆ ಜಾತ್ಯತೀತ ನಾಯಕ ಎಂದು ಬಿರುದು ನೀಡಿ, ಸಮಾಧಿ ಎದುರು ಕಣ್ಣೀರು ಸುರಿಸಿದ ಲಾಲ್ ಕೃಷ್ಣ ಅಡ್ವಾನಿ ಯಾವ ಪಕ್ಷದವರು? ಭಯೋತ್ಪಾದನೆಗೆ ತಲೆ ಬಾಗುವುದಿಲ್ಲ ಎಂದು ಚುನಾವಣೆಯ ವೇಳೆ ಭಾಷಣ ಬೀಗಿದ್ದ ನರೇಂದ್ರ ಮೋದಿಯವರು, ಪಾಕಿಸ್ತಾನದ ಪ್ರಧಾನಿಯ ಮೊಮ್ಮಗಳ ಮದುವೆಗೆ ಆಹ್ವಾನವೇ ಇಲ್ಲದೆ, ರಹಸ್ಯವಾಗಿ ಬಿರಿಯಾನಿ ತಿಂದು ಬಂದಿದ್ದು ನೆಂಟಸ್ತನ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ಸಂಸತ್ತಿನಲ್ಲಿ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಮಂಡಿಸಿದ್ದ ಖಾಸಗಿ ಮಸೂದೆಯನ್ನು ವಾಪಸ್ ಪಡೆದಿದ್ದು ಯಾಕೆ? 56 ಇಂಚಿನ ಎದೆಯಲ್ಲಿ ಧೈರ್ಯವೇ ಇರಲಿಲ್ವೇ? ಯಾರ ಒತ್ತಡದಿಂದ ಮಸೂದೆ ವಾಪಸ್ ಪಡೆಯಲಾಯಿತು?” ಎಂದು ಬಿ ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

Advertisements

“ಪಾಕಿಸ್ತಾನದಿಂದ ಆಮದು ಮಾಡಿಕೊಳ್ಳುತ್ತಿರುವ ಸಕ್ಕರೆ ಸೇರಿದಂತೆ ಎಲ್ಲ ವ್ಯವಹಾರವನ್ನು ನಿಲ್ಲಿಸಲು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಧೈರ್ಯ ಇದೆಯಾ? ಬೀದಿಯಲ್ಲಿ ನಿಂತು ಬೊಬ್ಬೆ ಹಾಕುತ್ತಿರುವ ಬಿಜೆಪಿ, ಪಾಕಿಸ್ತಾನದ ನಂಟಸ್ತನದಿಂದ ರಾಜಕೀಯ ಬೇಳೆ ಬೆಳೆಸುತ್ತಿರುವುದು ಪುಲ್ವಾಮ ದಾಳಿಯಲ್ಲೇ ಸಾಬೀತಾಗಿದೆ. ರಾಜ್ಯದ ಜನರನ್ನ ಮೂರ್ಖರನ್ನಾಗಿ ಮಾಡಲು ಹೋಗಿ, ಮುಖವಾಡ ಬಯಲಾಗುತ್ತಿರುವುದು ಸ್ಪಷ್ಟವಾಗಿದೆ” ಎಂದು ಕುಟುಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X