ಸಂಸತ್‌ ದಾಳಿ | ಮಗ ಕೆಟ್ಟದು ಮಾ‌ಡಿದ್ರೆ ಗಲ್ಲಿಗೇರಿಸಲಿ: ಮೈಸೂರಿನ ಮನೋರಂಜನ್ ತಂದೆ ದೇವರಾಜೇಗೌಡ

Date:

Advertisements

ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಏಕಾಏಕಿ ಇಬ್ಬರು ಯುವಕರು ನುಗ್ಗಿದ ಘಟನೆಗೆ ಸಂಬಂಧಿಸಿ ಈವರೆಗೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.

ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ನುಗ್ಗಿದ ಇಬ್ಬರಲ್ಲಿ ಒಬ್ಬ ಯುವಕನನ್ನು ಮೈಸೂರಿನ ಮನೋರಂಜನ್‌ ಎಂದು ಗುರುತಿಸಲಾಗಿದೆ.

ಘಟನೆ ನಡೆಯುತ್ತಿದ್ದಂತೆಯೇ ಇತ್ತ ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್​​ ನಿವಾಸಕ್ಕೆ ಪೊಲೀಸರು ದೌಡಾಯಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಪಿಐ ಸುರೇಶ್ ಭೇಟಿ‌ ನೀಡಿ ಮನೋರಂಜನ್ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Advertisements

ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮನೋರಂಜನ್ ತಂದೆ ದೇವರಾಜೇಗೌಡ, ​”ಮನೋರಂಜನ್ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ 2014ರಲ್ಲಿ ಬಿಇ ಮುಗಿಸಿದ್ದ, ಮಗನಿಗೆ ಬಿಇ ಸೀಟನ್ನು  ಎಚ್.ಡಿ.ದೇವೇಗೌಡರು ಕೊಡಿಸಿದ್ದರು. ಕೆಲಸ ಇರಲಿಲ್ಲ. ತೋಟಕ್ಕೆ ಬರ್ತಿದ್ದ, ಖರ್ಚಿಗೆ ಬೇಕಾದಾಗ ಕಾಸು ಈಸ್ಕೋತಿದ್ದ. 34 ವ‍ರ್ಷ ಆಯ್ತು, ಮದುವೆಯಾಗು ಅಂತಿದ್ದೆ, ಇರಪ್ಪ, ನಾನೇನೋ ಮಾಡಬೇಕು ಅಂತ ಹೇಳ್ತಿದ್ದ. ಯಾವಾಗಲೂ ವಿವೇಕಾನಂದ, ಭಗತ್ ಸಿಂಗ್ ಅಂಥವರ ಪುಸ್ತಕಗಳನ್ನು ಓದ್ತಿದ್ದ. ದೆಹಲಿ, ಬೆಂಗಳೂರಿಗೆ ಓಡಾಡುತ್ತಿದ್ದ. ಹೋಗೋನು, ಬರೋನು. ಆದರೆ ಎಲ್ಲಿಗೆ ಹೋಗ್ತಿದ್ದ ಅಂತ ಗೊತ್ತಿಲ್ಲ. ನಾವು ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆದರೆ ಪ್ರತಾಪ್ ಸಿಂಹಗೆ ಓಟು ಹಾಕಿದ್ದೇವೆ. ಅವನು ಮನೆಯಲ್ಲಿ, ಸಮಾಜದಲ್ಲಿ, ಸ್ನೇಹಿತರಲ್ಲಿ ಯಾರಿಗೂ ಕೆಟ್ಟದು ಮಾಡಿದೋನಲ್ಲ. ಈಗ ಯಾಕೆ ಈ ರೀತಿ ಮಾಡಿದ್ದಾನೆ ಎಂದು ಗೊತ್ತಿಲ್ಲ. ಅನ್ಯಾಯ ಮಾಡಿದ್ದಾನೆ ಅಂದ್ರೆ ಅವನು‌ ನನ್ನ ಮಗನೇ ಅಲ್ಲ” ಎಂದರು.

“ಮಗ ಈ ಥರ ಮಾಡ್ತಾನೆ ಅಂತ ನನಗೆ ಗೊತ್ತಿರಲಿಲ್ಲ. ಅವನೇನಾದ್ರೂ ಒಳ್ಳೆಯದು ಮಾಡಿದ್ರೆ ದೇವರು ಕಾಪಾಡಲಿ. ಕೆಟ್ಟದ್ದನ್ನು ಮಾಡಿದ್ರೆ ನಾನು ಖಂಡಿಸುತ್ತೇನೆ. ಸಮಾಜಕ್ಕೆ ಅನ್ಯಾಯ ಮಾಡಿದ್ದಾನೆಂದರೆ ಆತ ನನ್ನ ಮಗನೇ ಅಲ್ಲ. ಯಾರೇ ಆಗಿರಲಿ, ಸಮಾಜಕ್ಕೆ ಒಳ್ಳೆಯದನ್ನಷ್ಟೇ ಮಾಡಬೇಕು. ತಪ್ಪು ಮಾಡಿದ್ದಾನೆಂದರೆ ಆತನನ್ನು ಗಲ್ಲಿಗೇರಿಸಲಿ” ಎಂದು ಬೇಸರದಿಂದ ದೇವರಾಜೇಗೌಡ ನುಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X