ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದಿದ್ದರೇ ತಕ್ಷಣ ಮಧ್ಯ ಪ್ರವೇಶಿಸಲಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

Date:

Advertisements
  • ‘ರಾಹುಲ್ ಗಾಂಧಿ ಮಧ್ಯಪ್ರವೇಶಿಸದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’
  • ‘ಈ ಸರ್ಕಾರದಲ್ಲಿ 65% ಕಮಿಷನ್, ಗುತ್ತಿಗೆದಾರರಿಂದ ರಾಹುಲ್‌ಗೆ ಮಾಹಿತಿ’

ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಈ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್‌ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಮನವಿ ಸ್ವೀಕರಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಿಸಲು ಸರ್ಕಾರವನ್ನು ಆಗ್ರಹಿಸಲು ಮನವಿ‌ ಮಾಡಿದ್ದಾರೆ” ಎಂದರು.

“ನಾನು ಸಿಎಂ ಇದ್ದಾಗ ಬಿಲ್ ಪಾವತಿಗೆ ಆನ್ಲೈನ್ ಮಾಡಿ ಸ್ಟ್ರೀಮ್ ಲೈನ್ ಮಾಡಿದ್ದೆ‌. ಹಿರಿತನದ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುತ್ತಿತ್ತು.‌ ಇದರಿಂದ ಅವರ ಬಾಕಿ ಕೂಡ ಕಡಿಮೆ ಉಳಿದಿತ್ತು” ಎಂದು ಹೇಳಿದರು.

Advertisements

ಸಿಎಂ ಮೌನ, ಸಮ್ಮತಿ ಲಕ್ಷಣ

“ಗುತ್ತಿಗೆದಾರರು ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಕ್ಕೆ ಈಗ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಗೆ ಲಂಚ ಕೇಳುತ್ತಿರುವುದು ಸರ್ವವಿಧಿತವಾಗಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಮೌನ ವಹಿಸಿದ್ದಾರೆ. ಇದು ಅವರ ಸಮ್ಮತಿ ಅಂತ ಸೂಚಿಸುತ್ತದೆ” ಎಂದು ಆರೋಪಿಸಿದರು‌.

“ವರ್ಗಾವಣೆಗೆ ಹಣ ಪಡೆದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ‌. ಆದರೆ, ಅವರ ಕಚೇರಿಯಿಂದ ವರ್ಗಾವಣೆ ಆಗಿರುವ ಆದೇಶಗಳು ಯಾಕೆ ಬದಲಾವಣೆ ಆಗುತ್ತಿವೆ? ನಮ್ಮ ಅವಧಿಯಲ್ಲಿ ಕಾಮಗಾರಿಗಳಲ್ಲಿ ಪಾರದರ್ಶಕತೆ ತರಲು ಮೂವರು ಜನರ ಸಮಿತಿ ರಚನೆ ಮಾಡಿದ್ದೆವು. ಆ ಆದೇಶಗಳನ್ನು ಈಗ ಪಾಲನೆ ಮಾಡುತ್ತಿಲ್ಲ” ಎಂದರು.

“ಯಾರು ಕಳಪೆ ಕಾಮಗಾರಿ ಮಾಡಿದ್ದಾರೆ ಅದರ ಬಗ್ಗೆ ತನಿಖೆ ನಡೆಸಲಿ, ಪ್ರಾಮಾಣಿಕವಾಗಿ ಕೆಲಸ ಮಾಡಿದವರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಅಂತ ಕರಿಯೋದು ಸಾಬೀತಾದಂತೆ ಆಗುತ್ತದೆ‌. ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾಡಿ 24 ಗಂಟೆಯಲ್ಲಿ ಸಮಸ್ಯೆ ಬಗೆ ಹರಿಸಬೇಕು” ಎಂದು ಆಗ್ರಹಿಸಿದರು.

“ಗುತ್ತಿಗೆದಾರರು ಕೆಲಸ ನಿಲ್ಲಿಸಿದರೆ ಬ್ರ್ಯಾಂಡ್ ಬೆಂಗಳೂರು ಸ್ಥಗಿತ ಆಗುತ್ತದೆ. ಕಮಿಷನ್ ಎಷ್ಟು ಪಡೆಯಬೇಕು ಎನ್ನುವುದು ಸ್ಯಾಂಗ್ರಿಲಾ ಹೋಟೆಲ್ ನಲ್ಲಿ ಮಾತುಕತೆ ನಡೆಯುತ್ತಿದೆಯಂತೆ. ಎಷ್ಟಕ್ಕೆ ಆಗುತ್ತದೆಯೋ ನೊಡೊಣ ಲಂಚ ಪಡೆಯುವುದು ಕೊಡುವುದು ಎರಡೂ ಅಪರಾಧ. ಗುತ್ತಿಗೆದಾರರು ಎಷ್ಟು ಪರ್ಸೆಂಟೇಜಿಗೆ ಒಪ್ಪುತ್ತಾರೊ, ಭ್ರಷ್ಟಾಚಾರದ ಭಾಗವಾಗುತ್ತಾರೊ, ಇಲ್ಲವೋ ನೋಡೊಣ” ಎಂದು ಹೇಳಿದರು.

ಡಿಕೆಶಿ ಸೂಪರ್ ಸಿಎಂ

“ರಾಜ್ಯದಲ್ಲಿ ಡಿ. ಕೆ ಶಿವಕುಮಾರ್ ಸೂಪರ್ ಸಿಎಂ ಆಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಟ್ರಾನ್ಸಫರ್ ತನ್ನ ಗಮನಕ್ಕೆ ತಂದು ಮಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಡಿ. ಕೆ.ಶಿವಕುಮಾರ್ ಸೂಪರ್ ಸಿಎಂ. ರಾಜ್ಯದಲ್ಲಿ ಸಿಎಂ ಮತ್ತು ಸೂಪರ್ ಸಿಎಂ ಇಬ್ಬರು ಇದ್ದಾರೆ” ಎಂದು ವ್ಯಂಗ್ಯವಾಡಿದರು.

ಫೇಕ್ ಸರ್ಕಾರ

“ಸರ್ಕಾರದ ವಿರುದ್ದ ಬರುವ ಎಲ್ಲ ಪತ್ರಗಳೂ ಫೇಕ್ ಎಂದು ಸರ್ಕಾರ ಅಲ್ಲಗಳೆಯುತ್ತಿದೆ. ಅವರದೇ ಪಕ್ಷದ ಶಾಸಕರು ಬರೆದ ಪತ್ರವನ್ನೂ ಫೇಕ್ ಎನ್ನುತ್ತಾರೆ. ಈ ಸರ್ಕಾರವೇ ಫೇಕ್” ಎಂದು ಕಿಡಿಕಾರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X