ರಾಮನಗರ ಜಿಲ್ಲೆ ಹೆಸರು ಬದಲಾದರೆ ಮುಂದೆ ನಾನು ಕಿತ್ತೆಸೆಯುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

Date:

Advertisements

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿ, “ಇವರು ಈಗ ಜಿಲ್ಲೆಯ ಹೆಸರು ಬದಲಾವಣೆ ಮಾಡಬಹುದು. ಮತ್ತೆ ನಾನು ರಾಜ್ಯದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇನೆ. ಆಗ ಇವರು ಇಟ್ಟಿರುವ ಹೆಸರನ್ನು ಕಿತ್ತೆಸೆಯುತ್ತೇನೆ” ಎಂದು ಗುಡುಗಿದರು.

“ಕಾಂಗ್ರೆಸ್ ಸರಕಾರ ಬಂದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ಇದನ್ನು ಯಾಕೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೆ ಹಣವನ್ನು ತುಂಬಿಸಿಕೊಳ್ಳಬಹುದು ಎಂಬ ಉದ್ದೇಶ ಇರಬಹುದು” ಎಂದು ಆರೋಪಿಸಿದರು.

Advertisements

“ನಾನು ರಾಮನಗರದ ನಾಲ್ಕೂ ತಾಲೂಕುಗಳನ್ನು ಬೆಂಗಳೂರಿಗೆ ಸೇರಿಸುತ್ತೇನೆ. ಭೂಮಿ ಮಾರಾಟ ಮಾಡಬೇಡಿ ಎಂದು ಹೇಳಿದ್ದರು” ಎಂದು ಕುಮಾರಸ್ವಾಮಿ ಅವರು ಹೆಸರು ಹೇಳದೆಯೇ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ರಾಮದೇವರಿಗೆ ಅಪಚಾರ

“ರಾಮನಗರ ಜಿಲ್ಲೆ ಮಾಡಿದ್ದ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ? ರಾಮನ ಹೆಸರು ಇರುವುದು ಒಂದು ಭಾಗ. ಈ ಜಿಲ್ಲೆಗೆ ತನ್ನದೇ ಆದ ಒಂದು ಇತಿಹಾಸ ಇದೆ. ಪುರಾಣ ಐತಿಹ್ಯವಿದೆ. ಈ ಹೆಸರಲ್ಲಿ ರಾಮನ ಹೆಸರು ಇದೆ. ರಾಮದೇವರಿಗೆ ಇವರು ಅಪಚಾರ ಮಾಡಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಲ್ಲಿ ಇವರು ಯಾವ್ಯಾವ ಬೆಲೆ ಏರಿಕೆ ಮಾಡಿದ್ದಾರೆ ನೋಡಿದ್ದೇವೆ. ಭೂಮಿ ಲಪಟಾಯಿಸಿ ಯಾವುದರ ಬೆಲೆ ಏರಿಕೆ ಮಾಡಿದ್ದಾರೆ ಎನ್ನುವುದು ಕೂಡ ಗೊತ್ತಿದೆ. ಇದೆಲ್ಲ ಬಿಟ್ಟು ಅಭಿವೃದ್ಧಿ ಮಾಡುವುದನ್ನು ಅವರು ಕಲಿಯಲಿ. ನಾನು ಅಧಿಕಾರದಲ್ಲಿದ್ದಾಗ ರಾಮನಗರ ಜಿಲ್ಲೆ ಮಾಡಿದ್ದೆ. ಅದನ್ನು ತೆಗೆಯಬೇಕು ಎನ್ನುವುದು ಅವರ ಉದ್ದೇಶ. ದೇವೇಗೌಡರು, ನಾನು ಏನು ಅಭಿವೃದ್ಧಿ ಮಾಡಿದ್ದೇವೆ ಜನರಿಗೆ ಗೊತ್ತಿದೆ. ಅದಕ್ಕೆ ಇವರ ಸರ್ಟಿಫಿಕೇಟ್ ಬೇಕಿಲ್ಲ. ಹಿಂದೆ ಕನಕಪುರ, ಸಾತನೂರು ಹೇಗಿದ್ದವು, ಆಗ ಇವರು ಯಾರದೋ ಸೇವೆ ಮಾಡಿಕೊಂಡಿದ್ದರು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಈಗ ರಾಮನಗರ ಹೆಸರು ಬದಲಾಯಿಸಿದರೂ ಮುಂದೆ ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇನೆ. ಆ ವಿಶ್ವಾಸ ನನಗೆ ಇದೆ. ನಾಲ್ಕು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಎಂದು ಮಾಡಲು ಹೊರಟಿದ್ದಾರೆ. ಈಗಾಗಲೇ ಬೆಂಗಳೂರು ದಕ್ಷಿಣ ಕ್ಷೇತ್ರ ಎಂದು ಇದೆ. ಹೆಸರು ಬದಲಾವಣೆ ಮಾಡಿದರೆ ಏನು ಸಿಗುತ್ತದೆ ಎಂಬುದನ್ನು ಅವರು ಜನರಿಗೆ ಹೇಳಬೇಕು. ಹೆಸರು ಬದಲಾವಣೆ ಮಾಡಿದರೆ ಎಲ್ಲ ಸರ್ಕಾರಿ ದಾಖಲೆಗಳಿಗೆ ತೊಂದರಯಾಗಲಿದೆ. ಜನರು ಕಚೇರಿಗಳಿಗೆ ಅಲೆಯಬೇಕಾಗುತ್ತದೆ” ಎಂದರು.

ರಾಮನಗರ-ಚನ್ನಪಟ್ಟಣ ಅವಳಿ ನಗರ

“ಜಿಲ್ಲೆಗೆ ಹೆಸರು ಬದಲಾಯಿಸುವುದು ಅನಗತ್ಯ ಎಂದು ಒತ್ತಿ ಹೇಳಿದ ಅವರು; ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡಿದ್ದರೆ ಒಂದು ಹೆಸರು ಅವರಿಗೆ ಬಂದಿರುತ್ತಿತ್ತು. ಅದರ ಬದಲು ಜಿಲ್ಲೆಯ ಹೆಸರನ್ನೇ ಅಳಿಸಿ ಹಾಕಲು ಹುನ್ನಾರ ನಡೆಸಿದ್ದಾರೆ” ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X