ಬಿಜೆಪಿಯಲ್ಲಿ ಗಂಡಸರಿದ್ದರೆ ಅನ್ಯಾಯದ ವಿರುದ್ಧ ದನಿ ಎತ್ತಲಿ: ಮಾಗಡಿ ಶಾಸಕ ಎಚ್‌ ಸಿ ಬಾಲಕೃಷ್ಣ

Date:

Advertisements

“ಬಿಜೆಪಿಯಲ್ಲಿ ಗಂಡಸರಿದ್ದರೆ ಅನ್ಯಾಯದ ವಿರುದ್ಧ ದನಿ ಎತ್ತಲಿ. ನಮ್ಮ ಪಾಲಿನ ಅನುದಾನಕ್ಕಾಗಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ನೋಡಿಯಾದರೂ ಭಾಗಿಯಾಗಲಿ” ಎಂದು ಮಾಗಡಿ ಶಾಸಕ ಎಚ್‌ ಸಿ ಬಾಲಕೃಷ್ಣ ಸವಾಲು ಹಾಕಿದರು.

ರಾಮನಗರ ತಾಲ್ಲೂಕಿನ ನಾಗರಕಲ್ಲುದೊಡ್ಡಿ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಸಚಿವರು ಹಾಗೂ ಸಂಸದರು, ದೆಹಲಿಗೆ ಹೋಗಿ ಟಿ.ಎ ಮತ್ತು ಡಿ.ಎ ತಗೊಂಡು ಬರ್ತಾರಷ್ಟೆ. ಇವರೆಲ್ಲಾ ಷೋ ಪೀಸ್‌ಗಳು. ತಮ್ಮ ಹಕ್ಕಿಗಾಗಿ ತಮಿಳುನಾಡು ಸಂಸದರು ಹೇಗೆ ದನಿ ಎತ್ತುತ್ತಾರೆ ಎಂಬುದನ್ನು ನೋಡಿ ಕಲಿಯಲಿ” ಎಂದು ಕುಟುಕಿದರು.

“ಬಿಜೆಪಿಯವರು ದನಿ ಕಳೆದುಕೊಂಡಿರುವುದರಿಂದ ಅನುದಾನಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇದರ ಅರ್ಥ ಬಿಜೆಪಿಯಲ್ಲಿ ಗಂಡಸರಿಲ್ಲ ಎಂದರ್ಥ. ಅನುದಾನದ ವಿಷಯದಲ್ಲಿ ಅನ್ಯಾಯ ಸರಿಪಡಿಸದಿದ್ದರೆ ಪ್ರತ್ಯೇಕ ದೇಶದ ದನಿ ಎಳುತ್ತದೆ ಎಂದು ಸಂಸದ ಡಿ ಕೆ ಸುರೇಶ್ ಹೇಳಿರುವುದನ್ನು, ಬಿಜೆಪಿಯವರು ತಿರುಚಿದ್ದಾರೆ ಅಷ್ಟೇ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದಾರೆ, ಅವರು ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

Advertisements
Bose Military School

“ಕೇಂದ್ರಕ್ಕೆ ಹೆಚ್ಚು ತೆರಿಗೆ ಪಾವತಿಸುವ ದೇಶದ ಎರಡನೇ ರಾಜ್ಯ ನಮ್ಮದು. ಹೀಗಿದ್ದರೂ, ನಮಗೆ ಕೊಡಬೇಕಾದ ಅನಯದಾನ ಕೊಡುತ್ತಿಲ್ಲ. ರಾಜ್ಯದ ಬಿಜೆಪಿ ಸಚಿವರು ಮತ್ತು ಸಂಸದರಿಗೆ ಪ್ರಧಾನಿ ಮೋದಿ ಅವರ ಮುಂದೆ ನಿಲ್ಲುವುದಕ್ಕೂ ಆಗುವುದಿಲ್ಲ. ವೈಯಕ್ತಿಕ ವರ್ಚಸ್ಸಿಲ್ಲದ ಅವರು, ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ” ಎಂದು ಟೀಕಿಸಿದರು.

“ನಮಗಾಗಿರುವ ಅನ್ಯಾಯಕ್ಕೆ ಹೋರಾಟ ಮಾಡಬೇಕಿದೆ. ಈ ವಿಷಯದಲ್ಲಿ ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ” ಎಂದು ಸವಾಲು ಹಾಕಿದರು.

“ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದಲ್ಲಿ ಸುರೇಶ್ ಅವರನ್ನು ಎದುರಿಸುವಂತಹ ಅಭ್ಯರ್ಥಿ ಇಲ್ಲ. ಅವರ ವಿರುದ್ಧ ಮೈತ್ರಿ ತಂತ್ರ ಫಲ ನೀಡುವುದಿಲ್ಲ. ಬೇಕಿದ್ದರೆ ಎಚ್‌.ಡಿ. ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಮಾಡಲಿ. ಆನಂತರ ಮಾತನಾಡೋಣ. ಸಂಸದರು ಜನಸಾಮಾನ್ಯರ ಜೊತೆ ಬೆರೆತು ಹೇಗೆ ಕೆಲಸ ಮಾಡಬಹುದು ಎಂಬುದನ್ನು ಸುರೇಶ್ ತೋರಿಸಿ ಕೊಟ್ಟಿದ್ದಾರೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಸಚಿವ ಮಹದೇವಪ್ಪ ಸುತ್ತ ಜಾತೀಯತೆ ಆರೋಪ; ಕಾಂಗ್ರೆಸ್ಸಿಗರು ಹೇಳಿದ್ದೇನು?

ಮೈಸೂರು ಜಿಲ್ಲೆಯ ತಿ. ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಗೋಪಾಲಪುರ ವಿಷಯದಲ್ಲಿ...

ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು...

ನವದೆಹಲಿಯಲ್ಲಿ ದೇವನಹಳ್ಳಿ ರೈತ ಹೋರಾಟದ ಸದ್ದು: ಜೆಪಿಸಿ ಸಭೆಯಿಂದ ಬಿಜೆಪಿ ಸದಸ್ಯರ ಪಲಾಯನ

ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ...

ಹೆಚ್ಚುತ್ತಿರುವ ಹೃದಯಾಘಾತ | ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ...

Download Eedina App Android / iOS

X