ಅಕ್ರಮ ಡಿನೋಟಿಫಿಕೇಷನ್ ಹಗರಣ | ಸ್ವಇಚ್ಛೆಯಿಂದ ಲೋಕಾಯುಕ್ತ ವಿಚಾರಣೆಗೆ ಹಾಜರಾದೆ: ಎಚ್‌ಡಿಕೆ

Date:

Advertisements

ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಶುಕ್ರವಾರ ಹಾಜರಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ, ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ” ಎಂದು ತಿಳಿಸಿದ್ದಾರೆ.

“ನಾನು ತಪ್ಪು ಮಾಡಿ ಇಲ್ಲಿಗೆ ಬಂದಿಲ್ಲ. ಸ್ವಯಂಪ್ರೇರಿತವಾಗಿ ನಾನು ಬಂದೆ. ನಾಳೆ (ಶನಿವಾರ) ಬೆಳಗ್ಗೆ 11 ಗಂಟೆಗೆ ದಾಖಲಾತಿಗಳನ್ನು ಬಿಡುಗಡೆ ಮಾಡುತ್ತೇನೆ. ಈ ಸರ್ಕಾರದಲ್ಲಿರುವ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ದರೋಡೆಕೋರರು ಆಗಿದ್ದಾರೆ. ಆ ದಾಖಲೆಗಳನ್ನು ನೋಡಿದ ಮೇಲೆ ಈ ಸಚಿವರುಗಳು ನನ್ನ ಬಳಿ ಮಾತನಾಡಲಿ” ಎಂದರು.

“ರಾಜಕೀಯ ಒತ್ತಡದಿಂದ ನನ್ನ ಮೇಲೆ ಈ ಪ್ರಕರಣವನ್ನು ಮುನ್ನಲೆಗೆ ತರಲಾಗಿದೆ. ನಾನು ಕಾನೂನುಬಾಹಿರವಾಗಿ ಆದೇಶ ನೀಡಿಲ್ಲ. ಡಿನೋಟಿಫಿಕೇಶನ್ ಮಾಡಬೇಕೆಂದಿದ್ದರೆ ನಾನೇ ಮಾಡಿಕೊಳ್ಳುತ್ತಿದ್ದೆ. ನನ್ನನ್ನು ಟೀಕಿಸುವವರಿಗೆ ಆ ಸಾಮಾನ್ಯ ಜ್ಞಾನವೂ ಕೂಡಾ ಇಲ್ಲ” ಎಂದು ಟೀಕಿಸಿದರು.

Advertisements

ಇದನ್ನು ಓದಿದ್ದೀರಾ? ಬಿಗ್ ಬ್ರೇಕಿಂಗ್ ನ್ಯೂಸ್‌ | ಅಕ್ರಮ ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಎಚ್‌ಡಿಕೆ

“ಈ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಮತ್ತೆ ನಾನೇ ಹೋಗಿ ಹೇಳಿಕೆ ನೀಡಿದ್ದೇನೆ. ನನಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಭಯವಿಲ್ಲ” ಎಂದರು.

“ಈ ಕೇಸ್ ಅನ್ನು 2015ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವಿದ್ದಾಗ ನನ್ನ ಮೇಲೆ ಹಾಕಲಾಗಿದೆ. ಈ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುವ ಅಗತ್ಯ ನನಗಿಲ್ಲ. ಅಂತಹ ಜಾಯಮಾನವೇ ನನ್ನದಲ್ಲ. ನಾನು ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ” ಎಂದು ಹೇಳಿದರು.

ಇನ್ನು ಮಾಧ್ಯಮಗಳಲ್ಲಿ ಕುಮಾರಸ್ವಾಮಿ ಅವರಿಗೆ ರಾಜಕೀಯ ಗಂಡಾಂತರ ಎಂಬ ಬಗ್ಗೆ ಸುದ್ದಿಗಳು ಪ್ರಕಟವಾಗುತ್ತಿರುವ ಬಗ್ಗೆ ಮಾತನಾಡಿದ ಕೇಂದ್ರ ಸಚಿವರು, “ಕುಮಾರಸ್ವಾಮಿ ಅವರಿಗೆ ರಾಜಕೀಯ ಗಂಡಾಂತರ, ಭೂ ಗಂಡಾಂತರ ಎಂಬ ಚರ್ಚೆಗಳಾಗುತ್ತಿದೆ. ಆದರೆ ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಗಂಡಾಂತರವಾಗಿಲ್ಲ. ಅಂತಹ ಕಾರ್ಯವನ್ನೂ ನಾನು ಮಾಡಿಲ್ಲ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X